ಆ್ಯಪ್ನಗರ

ಪರಿಸರ ಸ್ವಚ್ಛತೆ ಕಾಪಾಡಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷ ಣ ಘಟಕ ಮಡಿಕೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆ ಹಾಗೂ ಅರುಣ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ನಡೆಯಿತು.

Vijaya Karnataka 2 Jul 2018, 5:00 am
ನಾಪೋಕ್ಲು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷ ಣ ಘಟಕ ಮಡಿಕೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆ ಹಾಗೂ ಅರುಣ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ನಡೆಯಿತು.
Vijaya Karnataka Web protect environment cleanliness
ಪರಿಸರ ಸ್ವಚ್ಛತೆ ಕಾಪಾಡಿ


ಜಿಲ್ಲಾ ಸರ್ವೆಕ್ಷ ಣಾ ಅಧಿಕಾರಿ ಡಾ. ಎಂ. ಶಿವಕುಮಾರ್‌ ಮಾತನಾಡಿ, ಸಮಾಜದಲ್ಲಿ ಆರೋಗ್ಯ ಕಾಯ್ದುಕೊಂಡು ಮಲೇರಿಯಾದಂತಹ ಕಾಯಿಲೆ ಹರಡದಂತೆ ಎಲ್ಲರೂ ಜಾಗೃತರಾಗಬೇಕಿದೆ. ಪ್ರತಿಯೊಬ್ಬರು ತಮ್ಮ ಪರಿಸರ ಸ್ವಚ್ಛವಾಗಿಟ್ಟುಕೊಂಡು ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ಅರುಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀಪ್ರಕಾಶ್‌ ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯಾಧಿಕಾರಿ ಡಾ. ಮಂಜುನಾಥ್‌ , ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪೂಜಾ, ಕಿರಿಯ ಆರೋಗ್ಯ ನಿರೀಕ್ಷ ಕ ಎಸ್‌.ರವಿ, ಎನ್‌ಎಸ್‌ಎಸ್‌ ಘಟಕದ ಸಂಯೋಜಕ ಕೆ.ಆರ್‌. ರಮೇಶ್‌ ಪಾಲ್ಗೊಂಡಿದ್ದರು. ಬಳಿಕ ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ