ಆ್ಯಪ್ನಗರ

ಪ್ರಕೃತಿ ಸಂಪತ್ತು ಉಳಿಸಿ, ಬೆಳೆಸಿ

ಪ್ರಕೃತಿ ಸಂಪತ್ತನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜಿ.ಪಂ. ಸದಸ್ಯೆ ಮಂಜುಳಾ ಹೇಳಿದರು.

Vijaya Karnataka Web 29 Jun 2018, 5:00 am
ಕುಶಾಲನಗರ: ಪ್ರಕೃತಿ ಸಂಪತ್ತನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜಿ.ಪಂ. ಸದಸ್ಯೆ ಮಂಜುಳಾ ಹೇಳಿದರು.
Vijaya Karnataka Web protect nature wealth
ಪ್ರಕೃತಿ ಸಂಪತ್ತು ಉಳಿಸಿ, ಬೆಳೆಸಿ


ಆರ್ಟ್‌ ಆಫ್‌ ಲಿವಿಂಗ್‌, ಕಾವೇರಿ ನದಿ ಸ್ವಚ್ಛತಾ ಆಂದೋಲನ ಆಶ್ರಯದಲ್ಲಿ ಕರ್ನಾಟಕ ಅರಣ್ಯ ಇಲಾಖೆ, ಕಾವೇರಿ ನೀರಾವರಿ ನಿಗಮ, ಪಟ್ಟಣ ಪಂಚಾಯಿತಿ ಹಾಗೂ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಸ್ಥಳೀಯ ನಾಗರಿಕರ ಸಹಯೋಗದೊಂದಿಗೆ ನೀರಾವರಿ ನಿಗಮ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಪರಿಸರ ಕಾಳಜಿ ಹೊಂದುವುದು ಅಗತ್ಯ. ಸರಕಾರಿ ಕಚೇರಿ, ಇಲಾಖೆಗಳ ಆವರಣದಲ್ಲಿ ಗಿಡಗಳನ್ನು ಹೆಚ್ಚು ನೆಟ್ಟು ಬೆಳೆಸಲು ಮುಂದಾಗಬೇಕಿದೆ. ಸಾರ್ವಜನಿಕರು ಕೂಡ ತಮ್ಮ ಜಮೀನು, ನಿವೇಶನಗಳ ಖಾಲಿ ಜಾಗದಲ್ಲಿ ಗಿಡ, ಮರಗಳನ್ನು ನೆಟ್ಟು ಬೆಳೆಸಿ ಹಸಿರೀಕರಣಕ್ಕೆ ಮುಂದಾಗಬೇಕಿದೆ ಎಂದರು.

ಆರ್ಟ್‌ ಆಫ್‌ ಲಿವಿಂಗ್‌ನ ಜಿಲ್ಲಾ ಪ್ರಮುಖರಾದ ಬೋಪಯ್ಯ ಮಾತನಾಡಿ, ವಾಣಿಜ್ಯ ಮರಗಳನ್ನು ಹೊರತುಪಡಿಸಿ ಪ್ರಾಣಿ, ಪಕ್ಷಿ ಸಂಕುಲಗಳಿಗೆ ಅನುಕೂಲವಾಗುವಂತಹ ಮರಗಳನ್ನು ಹೆಚ್ಚು ನೆಟ್ಟು ಪೋಷಿಸುವಂತಾಗಬೇಕು ಎಂದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್‌.ಚಂದ್ರಮೋಹನ್‌ ಪ್ರಾಸ್ತಾವಿಕ ನುಡಿಗಳಾಡಿದರು.

ಕುಶಾಲನಗರ ಗಣಪತಿ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ವಿ.ಎನ್‌.ವಸಂತಕುಮಾರ್‌, ವಲಯ ಅರಣ್ಯಾಧಿಕಾರಿ ಸಿ.ಆರ್‌.ಅರುಣ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಹರೀಶ್‌ ಮಾತನಾಡಿದರು.

ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭೋಜಣ್ಣ ರೆಡ್ಡಿ, ಪ್ರೆಸ್‌ ಕ್ಲಬ್‌ ಟ್ರಸ್ಟ್‌ ಅಧ್ಯಕ್ಷ ಎಚ್‌.ಎಂ.ರಘು, ನದಿ ಜಾಗೃತಿ ಸಮಿತಿ ಸಂಚಾಲಕ ಡಿ.ಆರ್‌.ಸೋಮಶೇಖರ್‌, ಗ್ರಾಮಾಭಿವೃದ್ಧಿ ಯೋಜನೆಯ ಕುಶಾಲನಗರ ಒಕ್ಕೂಟದ ಅಧ್ಯಕ್ಷ ಭಾನುಗುಲ್ಜಾರ್‌, ಪ್ರಮುಖರಾದ ಕೆ.ಆರ್‌.ಶಿವಾನಂದನ್‌, ಕೃಷ್ಣ ಬೋಪಯ್ಯ, ಕೆ.ಜಿ.ಮನು, ಮಂಜುನಾಥ್‌, ಸೇವಾ ಪ್ರತಿನಿಧಿಗಳಾದ ಗಿರಿಜಾ, ಯಶೋದಾ, ಜಯಲಕ್ಷ್ಮೇ, ವಿಜಯಲಕ್ಷ್ಮೇ ಹಾಜರಿದ್ದರು.

ಕಾರ್ಯಕ್ರಮದ ಅಂಗವಾಗಿ ನೀರಾವರಿ ನಿಗಮದ ಕಚೇರಿ ವ್ಯಾಪ್ತಿಯಲ್ಲಿ 500ಕ್ಕೂ ಅಧಿಕ ಗಿಡ ನೆಡಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ