ಆ್ಯಪ್ನಗರ

ನಾಯಕ ಸಮುದಾಯದ ಬೇಡಿಕೆ ಈಡೇರಿಸದಿದ್ದಲ್ಲಿ ಪ್ರತಿಭಟನೆ

ನಾಯಕ ಸಮುದಾಯದ 6 ದಶಕಗಳ ಬೇಡಿಕೆ ಈಡೇರಿಕೆಗೆ ಸರಕಾರ ಮುಂದಾಗದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಸಿದ್ದಾರೆ.

Vijaya Karnataka 21 Jul 2019, 5:00 am
ಕುಶಾಲನಗರ
Vijaya Karnataka Web protes if demands not met
ನಾಯಕ ಸಮುದಾಯದ ಬೇಡಿಕೆ ಈಡೇರಿಸದಿದ್ದಲ್ಲಿ ಪ್ರತಿಭಟನೆ


ನಾಯಕ ಸಮುದಾಯದ 6 ದಶಕಗಳ ಬೇಡಿಕೆ ಈಡೇರಿಕೆಗೆ ಸರಕಾರ ಮುಂದಾಗದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜನಹಳ್ಳಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಸಿದ್ದಾರೆ.

ಕುಶಾಲನಗರದ ಪ್ರವಾಸಿ ಮಂದಿರದಲ್ಲಿ ಸಮುದಾಯ ಬಾಂಧವರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ರಾಜ್ಯದಲ್ಲಿ 60 ಲಕ್ಷ , ದೇಶದಲ್ಲಿ 9 ಕೋಟಿ ಜನಸಂಖ್ಯೆಯನ್ನು ನಾಯಕ ಜನಾಂಗ ಹೊಂದಿದೆ. ಪ್ರಸ್ತುತ ನೀಡುತ್ತಿರುವ ಶೇ.3ರ ಮೀಸಲನ್ನು ಜನಸಂಖ್ಯೆ ಆಧಾರದಲ್ಲಿ ಶೇ.7.5 ಕ್ಕೆ ಏರಿಕೆ ಮಾಡಬೇಕು ಎಂದು ಸರಕಾರವನ್ನು ಒತ್ತಾಯಿಸಿ ರಾಜ್ಯಾದ್ಯಂತ ಈಗಾಗಲೇ ಪಾದಯಾತ್ರೆ ನಡೆಸಲಾಗಿದೆ. ಇದಕ್ಕೆ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಎರಡು ತಿಂಗಳ ಗಡುವು ಪಡೆದುಕೊಂಡಿದೆ. ಎರಡು ತಿಂಗಳ ಒಳಗಾಗಿ ಬೇಡಿಗೆ ಈಡೇರಿಸದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು,'' ಎಂದರು.

''ಎರಡು ತಿಂಗಳ ಕಾಲ ಕೈಗೊಂಡ ಪಾದಯಾತ್ರೆ ಸಂದರ್ಭ ಸಹಕರಿಸಿದವರಿಗೆ ಧನ್ಯವಾದ ಸಲ್ಲಿಸುವ ಹಿನ್ನೆಲೆæಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಚರಿಸಲಾಗುತ್ತಿದ್ದು, ಈ ಮೂಲಕ ಮತ್ತಷ್ಟು ಜನಜಾಗೃತಿ ಮೂಡಿಸಲಾಗುತ್ತಿದೆ,'' ಎಂದು ತಿಳಿಸಿದರು.

ಸಮಾಜದ ರಾಜ್ಯ ಘಟಕದ ಪ್ರಮುಖ ಹರ್ತಿಕೋಟೆ ವೀರೇಂದ್ರ ಸಿಂಹ ಮಾತನಾಡಿ, ''ಸಮುದಾಯ ಬಾಂಧವರ ಅಭಿವೃದ್ದಿಗೆ ಸಂವಿಧಾನಬದ್ಧ ಮೀಸಲು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಸನ್ನಾನಂದ ಸ್ವಾಮೀಜಿ ಅವರು ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡರು,'' ಎಂದರು.

ಕೊಡಗು ಜಿಲ್ಲಾ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಎನ್‌.ಅಶೋಕ್‌, ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಚಂದನ್‌ಕುಮಾರ್‌, ಜಿ.ಪಂ. ಸದಸ್ಯೆ ಕೆ.ಆರ್‌.ಮಂಜುಳಾ, ಮುಳ್ಳುಸೋಗೆ ಗ್ರಾ.ಪಂ. ಅಧ್ಯಕ್ಷೆ ಭವ್ಯಾ, ಸದಸ್ಯ ಸಂತೋಷ್‌, ರಾಜ್ಯ ಘಟಕದ ಪ್ರಮುಖರಾದ ಜಗದೀಶ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ