ಆ್ಯಪ್ನಗರ

7ನೇ ವೇತನ ಆಯೋಗದ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

ಕೇಂದ್ರ ಸರಕಾರದ 7ನೇ ವೇತನ ಆಯೋಗದ ಸೌಲಭ್ಯವನ್ನು ತಮಗೂ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘದ ಸದಸ್ಯರು ಪಟ್ಟಣದ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Vijaya Karnataka 31 May 2018, 5:00 am
ಸೋಮವಾರಪೇಟೆ: ಕೇಂದ್ರ ಸರಕಾರದ 7ನೇ ವೇತನ ಆಯೋಗದ ಸೌಲಭ್ಯವನ್ನು ತಮಗೂ ನೀಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘದ ಸದಸ್ಯರು ಪಟ್ಟಣದ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web protest demanding 7th pay commission facility
7ನೇ ವೇತನ ಆಯೋಗದ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ


ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕಮಲೇಶ್‌ ಚಂದ್ರ ಅವರ ಶಿಫಾರಸಿನಂತೆ 7ನೇ ವೇತನ ಆಯೋಗ 2016ರಿಂದಲೇ ಜಾರಿಯಾಗಿದೆ. ಆದರೆ, ಗ್ರಾಮೀಣ ಅಂಚೆ ನೌಕರರಿಗೆ ಇದರ ಸೌಲಭ್ಯ ಸಿಗುತ್ತಿಲ್ಲ. ಕೇಂದ್ರ ಸರಕಾರ ತಾರತಮ್ಯ ಧೋರಣೆಯನ್ನು ಬಿಟ್ಟು, ಗ್ರಾಮೀಣ ಅಂಚೆ ನೌಕರರಿಗೆ ಆಯೋಗದ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಎಂ.ಸತೀಶ್‌ ಆಗ್ರಹಿಸಿದರು.

ಅಂಚೆ ಕಚೇರಿಯಲ್ಲಿ ಕುಳಿತು ಕೆಲಸ ನಿರ್ವಹಿಸುವವರಿಗೆ 7ನೇ ವೇತನ ಆಯೋಗದ ಸಂಬಳ, ಆದರೆ ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ಕನಿಷ್ಠ ಸಂಬಳ. ಕೂಡಲೇ ಕೇಂದ್ರ ಸರಕಾರ ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆ ಕೂಗಿದರು. ನಂತರ ಮನವಿ ಪತ್ರವನ್ನು ಕೇಂದ್ರ ಸರಕಾರಕ್ಕೆ ಆಂಚೆ ಮೂಲಕ ಕಳುಹಿಸಿದರು.

ವಲಯ ಅಂಚೆ ಸೇವಕ ಎನ್‌.ಕೆ.ನಾಗೇಶ್‌, ಜಿನ್ನಪ್ಪ, ಮುರುಳೀಧರ್‌, ಮೋಹಿನಿ, ಮಂಜುನಾಥ್‌, ಮಂಜು, ಜೀವನ್‌, ಗುರುಪಾದಸ್ವಾಮಿ ಪಾಲ್ಗೊಂಡಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ