ಆ್ಯಪ್ನಗರ

ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಹಾಗೂ ಗುಹ್ಯ ಗ್ರಾಮದ ನೆರೆ ಸಂತ್ರಸ್ತರಿಗೆ ಶಾಶ್ವತ ನಿವೇಶನ ಒದಗಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಸಿದ್ದಾಪುರದಲ್ಲಿಪ್ರತಿಭಟನೆ ನಡೆಸಿದರು.

Vijaya Karnataka 17 Sep 2019, 5:00 am
ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಹಾಗೂ ಗುಹ್ಯ ಗ್ರಾಮದ ನೆರೆ ಸಂತ್ರಸ್ತರಿಗೆ ಶಾಶ್ವತ ನಿವೇಶನ ಒದಗಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಸಿದ್ದಾಪುರದಲ್ಲಿಪ್ರತಿಭಟನೆ ನಡೆಸಿದರು.
Vijaya Karnataka Web MDK16SDR1_19


ಮುಖ್ಯ ರಸ್ತೆಯಲ್ಲಿಮೆರವಣಿಗೆ ಮೂಲಕ ಗ್ರಾಮ ಪಂಚಾಯಿತಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಗ್ರಾಮ ಪಂಚಾಯಿತಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಗ್ರಾಮ ಸಮಿತಿ ಕಾರ್ಯದರ್ಶಿ ಎನ್‌.ಡಿ.ಕುಟ್ಟಪ್ಪ ಮಾತನಾಡಿ, ಬಿಬಿಟಿಸಿ, ಟಾಟಾ ಕಾಫಿ ಸೇರಿದಂತೆ ವಿವಿಧ ತೋಟಗಳ ಭೂ ಮಾಲೀಕರ ಬಳಿ ಬೇಕಾದಷ್ಟು ಸರಕಾರಿ ಭೂಮಿ ಇದ್ದು, ಇದನ್ನು ತೆರವುಗೊಳಿಸಬೇಕಾದ ಗ್ರಾಮ ಪಂಚಾಯಿತಿ ಕೈಕಟ್ಟಿ ಕುಳಿತಿದೆ. ಗ್ರಾಮ ಪಂಚಾಯಿತಿ ಸದಸ್ಯರು ಕಮಿಷನ್‌ ದಂಧೆಯಲ್ಲಿತೊಡಗಿದ್ದಾರೆ ಎಂದು ಆರೋಪಿಸಿದ ಅವರು, ಗ್ರಾಮ ಪಂಚಾಯಿತಿಯವರು ಭೂ ಮಾಲೀಕರ ಪರವಾಗಿದ್ದಾರೆ. ಕಾವೇರಿ ನದಿದಡದಲ್ಲಿವಾಸಿವಾಗಿರುವ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಪಕ್ಷದ ಮುಖಂಡ ದುರ್ಗಾಪ್ರಸಾದ್‌ ಮಾತನಾಡಿ, ಶಾಶ್ವತ ಪರಿಹಾರ ನೀಡಿದರೆ ನದಿ ದಡದಿಂದ ತೆರಳುವುದಾಗಿ ಕಳೆದ ವರ್ಷವೆ ಕರಡಿಗೋಡು ಭಾಗದ ನಿವಾಸಿಗಳು ಲಿಖಿತ ರೂಪದಲ್ಲಿತಿಳಿಸಿದರೂ, ಸ್ಥಳೀಯ ಗ್ರಾಮ ಪಂಚಾಯಿತಿ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವ ಪರಿಣಾಮ ಇದೀಗ ಮತ್ತೊಮ್ಮೆ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಶ್ರೀಮಂತರಿಂದ ಕೂಡಲೇ ಭೂಮಿ ತೆರವುಗೊಳಿಸಲು ಗ್ರಾಮ ಪಂಚಾಯಿತಿ ಮುಂದಾಗಬೇಕೆಂದು ಆಗ್ರಹಿಸಿದರು.

ಪಕ್ಷದ ಮುಖಂಡ ರಮೇಶ್‌ ಮಾತನಾಡಿ, ಕಳೆದ ಬಾರಿಯ ಗ್ರಾಮ ಸಭೆಯಲ್ಲಿಸಿದ್ದಾಪುರ ವ್ಯಾಪ್ತಿಯ ಪೈಸಾರಿ ಜಾಗದ ಬಗ್ಗೆ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದರೂ ಇದುವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಅದರಲ್ಲೂಗ್ರಾಮ ಪಂಚಾಯಿತಿ ಅಧ್ಯಕ್ಷರು ತೀವ್ರ ನಿರ್ಲಕ್ಷ್ಯ ವಹಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಮಾತನಾಡಿದರೆ ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡುತ್ತಾರೆ ಎಂದು ಆರೋಪಿಸಿದ ಅವರು, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸಲು ಗ್ರಾಮ ಪಂಚಾಯಿತಿ ಮುಂದಾಗಬೇಕು. ಬಾಡಿಗೆ ಮನೆ ಹಾಗೂ ತೋಟದ ಲೈನ್‌ ಮನೆಗಳಲ್ಲಿರುವವರಿಗೂ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಮುಂದಿನ 10 ದಿನದೊಳಗೆ ಸೂಕ್ತ ಸ್ಪಂದನೆ ದೊರೆಯದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್‌ ಅವರಿಗೆ ಮನವಿ ಪತ್ರ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮಾಹಿತಿ ನೀಡಿದರೂ ಮನವಿ ಪತ್ರ ಸ್ವೀಕರಿಸಲು ಬರಲಿಲ್ಲವೆಂದು ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿಪ್ರಮುಖರಾದ ಕೃಷ್ಣ, ಬೈಜು, ಸಿ.ಯು ಮುಸ್ತಫ, ಸೈನುದ್ದೀನ್‌ ಸೇರಿದಂತೆ ಮತ್ತಿತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ