ಕುಶಾಲನಗರ: ರಸಾಯನಶಾಸ್ತ್ರ ವಿಷಯದ ಉಪನ್ಯಾಸಕರ ನೇಮಕ್ಕೆ ಆಗ್ರಹಿಸಿ ಕುಶಾಲನಗರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರಾಂಶುಪಾಲರ ವಿರುದ್ಧ ಘೋಷಣೆ ಕೂಗಿದರು. ಕಾಲೇಜು ಪ್ರಾರಂಭವಾಗಿ ಎರಡು ತಿಂಗಳಾದರೂ ರಸಾಯನಶಾಸ್ತ್ರ ಉಪನ್ಯಾಸಕರು ಇಲ್ಲದೆ, ಯಾವುದೇ ಪಾಠಗಳು ಇನ್ನೂ ಪ್ರಾರಂಭವಾಗಿಲ್ಲ. ಈ ಬಗ್ಗೆ ಪ್ರಾಂಶುಪಾಲರನ್ನು ಕೇಳಿದರೆ ಇಂದು, ನಾಳೆ ಎಂದು ಕಾಲ ಕಳೆಯುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಇಲ್ಲಿಗೆ ಸಮೀಪದ ಗ್ರಾಮಾಂತರ ಕಾಲೇಜು ಗಳಲ್ಲಿ ತಲಾ 4-8 ವಿದ್ಯಾರ್ಥಿಗಳು ಇದ್ದರೂ ಖಾಯಂ ಉಪನ್ಯಾಸಕರಿದ್ದಾರೆ. ಆದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸುಮಾರು 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಈ ಸಂಸ್ಥೆಯಲ್ಲಿ ರಸಾಯನಶಾಸ್ತ್ರ ವಿಷಯಕ್ಕೆ ಉಪನ್ಯಾಸಕರನ್ನು ನೇಮಿಸದೇ ಬೇಜವಾಬ್ದಾರಿ ಪ್ರದರ್ಶಿಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಉಪನ್ಯಾಸಕರನ್ನು ನೇಮಿಸದಿದ್ದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿಯವರೆಗೆ ತರಗತಿಗಳನ್ನು ಬಹಿಷ್ಕರಿಸುತ್ತೇವೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.
ನಮ್ಮಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಉಪನ್ಯಾಸಕರು ಜೂನ್ 1 ರಿಂದ 6 ತಿಂಗಳವರೆಗೆ ಹರಿಗೆ ರಜೆ ತೆರಳಿದ್ದಾರೆ. ಬದಲಿ ವ್ಯವಸ್ಥೆ ಮಾಡುವುದು ಅನಿವಾರ್ಯವಾಗಿದ್ದು, ಮೇಲಧಿಕಾರಿಗೆ ಮನವಿ ಮಾಡಿದ್ದೇವೆ. ಆದರೆ, ಇದುವರೆಗೆ ಯಾವುದೇ ಉಪನ್ಯಾಕರು ಬಾರದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಅತಿಥಿ ಉಪನ್ಯಾಕರನ್ನು ನೇಮಿಸಿಕೊಳ್ಳಲಾಗುವುದು. ಈ ಬಗ್ಗೆ ಕಾಲೇಜು ಅಭಿವೃದ್ದಿ ಸಮಿತಿಯೊಂದಿಗೆ ಚರ್ಚಿಸಲಾಗಿದೆ. -ಸತೀಶ್, ಕಾಲೇಜಿನ ಪ್ರಾಂಶುಪಾಲರು
ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರಾಂಶುಪಾಲರ ವಿರುದ್ಧ ಘೋಷಣೆ ಕೂಗಿದರು. ಕಾಲೇಜು ಪ್ರಾರಂಭವಾಗಿ ಎರಡು ತಿಂಗಳಾದರೂ ರಸಾಯನಶಾಸ್ತ್ರ ಉಪನ್ಯಾಸಕರು ಇಲ್ಲದೆ, ಯಾವುದೇ ಪಾಠಗಳು ಇನ್ನೂ ಪ್ರಾರಂಭವಾಗಿಲ್ಲ. ಈ ಬಗ್ಗೆ ಪ್ರಾಂಶುಪಾಲರನ್ನು ಕೇಳಿದರೆ ಇಂದು, ನಾಳೆ ಎಂದು ಕಾಲ ಕಳೆಯುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಇಲ್ಲಿಗೆ ಸಮೀಪದ ಗ್ರಾಮಾಂತರ ಕಾಲೇಜು ಗಳಲ್ಲಿ ತಲಾ 4-8 ವಿದ್ಯಾರ್ಥಿಗಳು ಇದ್ದರೂ ಖಾಯಂ ಉಪನ್ಯಾಸಕರಿದ್ದಾರೆ. ಆದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಸುಮಾರು 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಈ ಸಂಸ್ಥೆಯಲ್ಲಿ ರಸಾಯನಶಾಸ್ತ್ರ ವಿಷಯಕ್ಕೆ ಉಪನ್ಯಾಸಕರನ್ನು ನೇಮಿಸದೇ ಬೇಜವಾಬ್ದಾರಿ ಪ್ರದರ್ಶಿಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಉಪನ್ಯಾಸಕರನ್ನು ನೇಮಿಸದಿದ್ದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿಯವರೆಗೆ ತರಗತಿಗಳನ್ನು ಬಹಿಷ್ಕರಿಸುತ್ತೇವೆ ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.
ನಮ್ಮಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಉಪನ್ಯಾಸಕರು ಜೂನ್ 1 ರಿಂದ 6 ತಿಂಗಳವರೆಗೆ ಹರಿಗೆ ರಜೆ ತೆರಳಿದ್ದಾರೆ. ಬದಲಿ ವ್ಯವಸ್ಥೆ ಮಾಡುವುದು ಅನಿವಾರ್ಯವಾಗಿದ್ದು, ಮೇಲಧಿಕಾರಿಗೆ ಮನವಿ ಮಾಡಿದ್ದೇವೆ. ಆದರೆ, ಇದುವರೆಗೆ ಯಾವುದೇ ಉಪನ್ಯಾಕರು ಬಾರದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಅತಿಥಿ ಉಪನ್ಯಾಕರನ್ನು ನೇಮಿಸಿಕೊಳ್ಳಲಾಗುವುದು. ಈ ಬಗ್ಗೆ ಕಾಲೇಜು ಅಭಿವೃದ್ದಿ ಸಮಿತಿಯೊಂದಿಗೆ ಚರ್ಚಿಸಲಾಗಿದೆ. -ಸತೀಶ್, ಕಾಲೇಜಿನ ಪ್ರಾಂಶುಪಾಲರು