ಆ್ಯಪ್ನಗರ

ಮುಂದುವರಿದ ವರ್ಷಧಾರೆ: ಅಪಾರ ಹಾನಿ

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವರುಣನ ಅರ್ಭಟ ಮುಂದುವರಿದಿದ್ದು, ಮರಗಳು ಧರೆಗುರುಳುತ್ತಿರುವ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.

Vijaya Karnataka 11 Jun 2018, 5:00 am
ಸೋಮವಾರಪೇಟೆ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವರುಣನ ಅರ್ಭಟ ಮುಂದುವರಿದಿದ್ದು, ಮರಗಳು ಧರೆಗುರುಳುತ್ತಿರುವ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
Vijaya Karnataka Web rain continues big loss
ಮುಂದುವರಿದ ವರ್ಷಧಾರೆ: ಅಪಾರ ಹಾನಿ


ಮರಗಳು ವಿದ್ಯುತ್‌ ತಂತಿಗಳ ಮೇಲೆ ಬೀಳುತ್ತಿರುವುದರಿಂದ ಸೆಸ್ಕ್‌ನ ಶಾಂತಳ್ಳಿ ವಲಯದಲ್ಲಿ 40 ಕಂಬಗಳು ಮುರಿದುಬಿದ್ದಿವೆ. ತಾಕೇರಿ, ಕಿರಗಂದೂರು, ಕೊತ್ನಳ್ಳಿ, ಬೀದಳ್ಳಿ, ಹೆಗ್ಗಡಮನೆ, ಬಾಚಳ್ಳಿ, ಕುಮಾರಳ್ಳಿ, ಹಂಚಿನಳ್ಳಿ, ಹರಗ, ಬೆಟ್ಟದಳ್ಳಿ, ದೊಡ್ಡಮಳ್ತೆ, ಸುಳಿಮಳ್ತೆ, ಕೂಗೂರು ಗ್ರಾಮಗಳು ಕರೆಂಟ್‌ ಇಲ್ಲದೆ ಕತ್ತಲೆಯಲ್ಲೇ ದಿನದೂಡಬೇಕಾಗಿದೆ.ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್‌ ಸಮಸ್ಯೆ ಇರುವುದರಿಂದ ಮಳೆಗಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.

ಸೆಸ್ಕ್‌ ಸಿಬ್ಬಂದಿ ವಿದ್ಯುತ್‌ ಕಂಬ, ತಂತಿ ಸರಿಪಡಿಸುವ ಕರ್ತವ್ಯದಲ್ಲಿ ತೊಡಗಿದ್ದಾರೆ. ತಲ್ತಾರೆಶೆಟ್ಟಳ್ಳಿಯ ಬಗ್ಗನಮನೆ ತನಕ ವಿದ್ಯುತ್‌ ಲೈನ್‌ ದುರಸ್ತಿಪಡಿಸಿದ್ದು, ತಾಕೇರಿ, ಕಿರಗಂದೂರು ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಎರಡು ದಿನಗಳಾಗಬಹುದು ಎಂದು ಕಿರಿಯ ಎಂಜಿನಿಯರ್‌ ಕುಮಾರ್‌ ತಿಳಿಸಿದರು. ದೊಡ್ಡಮಳ್ತೆ, ಸುಳಿಮಳ್ತೆ ಗ್ರಾಮಗಳಿಗೆ ಸೋಮವಾರ ಸಂಜೆಯೊಳಗೆ ವಿದ್ಯುತ್‌ ನೀಡಲಾಗುತ್ತದೆ.

ಕಾಫಿ ತೋಟಗಳಲ್ಲೂ ಮರಗಳು ಹಾಗೂ ರೆಂಬೆಗಳು ಮುರಿದು ಬೀಳುತ್ತಿರುವ ಪರಿಣಾಮ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ