ಆ್ಯಪ್ನಗರ

ಕಾವೇರಿ ನೀರಿನ ಮಟ್ಟ ಏರಿಕೆ

3 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಶಾಲನಗರದಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.

Vijaya Karnataka 11 Jun 2018, 5:00 am
ಕುಶಾಲನಗರ: 3 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಶಾಲನಗರದಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.
Vijaya Karnataka Web rise in cauvery water level
ಕಾವೇರಿ ನೀರಿನ ಮಟ್ಟ ಏರಿಕೆ


ಕಾವೇರಿ ನದಿಯಲ್ಲಿ ನೀರಿನ ಹರಿವು ಏರಿಕೆಯಾಗುವುದರೊಂದಿಗೆ ಗ್ರಾಮೀಣ ಪ್ರದೇಶಗಳ ಕೆಲವೆಡೆ ಹೊಲ ಗದ್ದೆಗಳು ಕೂಡ ನೀರಿನಿಂದ ಆವೃತಗೊಂಡಿವೆ. ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ತುಂಬಿ ಹರಿಯುತ್ತಿದೆ. ಕಳೆದ 10 ದಿನಗಳಲ್ಲಿ ಕುಶಾಲನಗರ ಭಾಗದಲ್ಲಿ 125 ಮಿ.ಮೀ.ಗೂ ಅಧಿಕ ಪ್ರಮಾಣದ ಮಳೆಯಾಗಿದ್ದು, ಕಾವೇರಿಯಲ್ಲಿ ನೀರಿನ ಹರಿವಿನ ಮಟ್ಟ 6 ಮೀಟರ್‌ಗಳಷ್ಟು ಏರಿಕೆಯಾಗಿದೆ.

ಕುಶಾಲನಗರ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಬೆಳಗಿನಿಂದ ಸಂಜೆ ತನಕ ಮೋಡ ಕವಿದ ವಾತಾವರಣದೊಂದಿಗೆ ಅಲ್ಪಸ್ವಲ್ಪ ಮಳೆಯಾಗಿದೆ. ಹಾರಂಗಿ ಜಲಾಶಯಕ್ಕೆ 3968 ಕ್ಯೂಸೆಕ್‌ ಪ್ರಮಾಣ ನೀರಿನ ಒಳಹರಿವಿದ್ದು, ಜಲಾಶಯದಲ್ಲಿ 2799.44 ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ.

ಭಾನುವಾರ ಮಧ್ಯಾಹ್ನ ಪಟ್ಟಣದ ಸಮೀಪದ ಗೊಂದಿಬಸವನಹಳ್ಳಿ ಗ್ರಾಮದ ನಿವಾಸಿ ಯೋಗೇಶ್‌ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆ ಗೋಡೆ ಕುಸಿದಿದ್ದು ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಜಖಂಗೊಂಡಿದೆ.

ಶುಕ್ರವಾರ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮೈಸೂರು ನಿವಾಸಿ ರಮೇಶನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಮತ್ತು ಮೃತನ ಕುಟುಂಬಸ್ಥರು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ