ಆ್ಯಪ್ನಗರ

ಶಂಕಿತ ನಕ್ಸಲ್‌ ರೂಪೇಶ್‌ ವಿಚಾರಣೆ ಮುಂದಕ್ಕೆ

ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ 2 ಪ್ರತ್ಯೇಕ ಪ್ರಕರಣಗಳ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾದ ಶಂಕಿತ ನಕ್ಸಲ್‌ ರೂಪೇಶ್‌ನ ಮುಂದಿನ ವಿಚಾರಣೆಯನ್ನು ಮಡಿಕೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏ.27ಕ್ಕೆ ಮುಂದೂಡಿದೆ.

Vijaya Karnataka 11 Apr 2019, 5:00 am
ಮಡಿಕೇರಿ: ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ 2 ಪ್ರತ್ಯೇಕ ಪ್ರಕರಣಗಳ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾದ ಶಂಕಿತ ನಕ್ಸಲ್‌ ರೂಪೇಶ್‌ನ ಮುಂದಿನ ವಿಚಾರಣೆಯನ್ನು ಮಡಿಕೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏ.27ಕ್ಕೆ ಮುಂದೂಡಿದೆ.
Vijaya Karnataka Web roopesh enquiry post poned
ಶಂಕಿತ ನಕ್ಸಲ್‌ ರೂಪೇಶ್‌ ವಿಚಾರಣೆ ಮುಂದಕ್ಕೆ


ಕೊಡಗಿನಲ್ಲಿ ಮಾವೋವಾದಿ ಚಟುವಟಿಕೆ ನಡೆಸಿದ ಆರೋಪ ಎದುರಿಸುತ್ತಿರುವ ಶಂಕಿತ ನಕ್ಸಲ್‌ ಮುಖಂಡ ರೂಪೇಶ್‌ನನ್ನು ವಿಚಾರಣೆಗಾಗಿ ಮಡಿಕೇರಿಗೆ ಕರೆತರಲಾಗಿತ್ತು. ಬಿಗಿ ಭದ್ರತೆಯಲ್ಲಿ ಕೋರ್ಟಿಗೆ ಹಾಜರುಪಡಿಸುವ ವೇಳೆ ಮಾವೋವಾದಿ ಜಿಂದಾಬಾದ್‌ ಎಂದು ನಕ್ಸಲ್‌ವಾದದ ಪರ ರೂಪೇಶ್‌ ಘೋಷಣೆ ಕೂಗಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ರೂಪೇಶ್‌ 5ನೇ ಬಾರಿ ವಿಚಾರಣೆಗೆ ಹಾಜರಾಗಿದ್ದು, ರೂಪೇಶ್‌ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ನಕ್ಸಲ್‌ ಚಟುವಟಿಕೆಗಳಲ್ಲಿ ಪಾಲ್ಗೊಂಡಿರುವ ಬಗ್ಗೆ ಆರೋಪಗಳಿವೆ. 2010ರಲ್ಲಿ ಭಾಗಮಂಡಲ ಸಮೀಪದ ಮುಂಡ್ರೋಟು ಮತ್ತು 2013ರಲ್ಲಿ ಕಾಲೂರು ಗ್ರಾಮದಲ್ಲಿ ಈತ ಪ್ರತ್ಯಕ್ಷ ನಾಗಿದ್ದ ಎನ್ನಲಾಗಿದೆ. ಅಲ್ಲದೆ ಕಾಲೂರಿನ ನಿವಾಸಿ ಗಣೇಶ್‌ ಎಂಬುವವರ ಮನೆಗೆ ನುಗ್ಗಿ ಪಡಿತರ ಸಾಮಗ್ರಿ ಹೊತ್ತೊಯ್ದಿರುವುದು ಮತ್ತು ಗ್ರಾಮಸ್ಥರಿಗೆ ಬೆದರಿಕೆ ಒಡ್ಡಿರುವ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳೂ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದ ಬಳಿಕ ಮಡಿಕೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಏ.27ಕ್ಕೆ ವಿಸ್ತರಿಸಿತು. ನ್ಯಾಯಾಲಯದಿಂದ ಹೊರ ಬರುತ್ತಿದ್ದಂತೆ ಮತ್ತೊಮ್ಮೆ ನಕ್ಸಲ್‌ವಾದದ ಪರ ಘೋಷಣೆ ಕೂಗಿದ ರೂಪೇಶ್‌ ಲೋಕಸಭಾ ಚುನಾವಣೆಗೂ ಧಿಕ್ಕಾರ ಕೂಗಿದ. ನಂತರ ಬಿಗಿ ಪೊಲೀಸ್‌ ಭದ್ರತೆಯಲ್ಲೇ ಕೇರಳಕ್ಕೆ ವಾಪಸ್‌ ಕರೆದೊಯ್ಯಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ