ಆ್ಯಪ್ನಗರ

ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹಿಸಿ ಸತ್ಯಾಗ್ರಹ

ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾ ಕ್ರಿಯಾ ಸಮಿತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.

Vijaya Karnataka 9 Jan 2019, 5:00 am
ಮಡಿಕೇರಿ: ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾ ಕ್ರಿಯಾ ಸಮಿತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.
Vijaya Karnataka Web satyagraha demanding price hike control
ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹಿಸಿ ಸತ್ಯಾಗ್ರಹ


ಗಾಂಧಿ ಪ್ರತಿಮೆಯ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಕೊಡಗು ಜಿಲ್ಲಾ ಕ್ರಿಯಾ ಸಮಿತಿ ಮುಖಂಡ ಟಿ.ಪಿ ರಮೇಶ್‌, 10 ಕಾರ್ಮಿಕ ಅಖಿಲ ಭಾರತ ಸಂಘಟನೆಗಳು ಒಟ್ಟು ಸೇರಿ ವಿವಿಧ ಬೇಡಿಕೆಗಳು ಈಡೇರಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿ ದೇಶಾದ್ಯಂತ 2 ದಿನಗಳ ಕಾಲ ಮುಷ್ಕರ ಹೂಡಿವೆ. ಈ ಹಿನ್ನೆಲೆಯಲ್ಲಿ ಕೊಡಗಿನ 3 ತಾಲೂಕಿನಲ್ಲೂ ಹೋರಾಟ ಆರಂಭಿಸಿದ್ದೇವೆ. ಮಡಿಕೇರಿಯಲ್ಲಿ ಜ.9ರಂದು ಜಿಲ್ಲಾ ಮಟ್ಟದ ಪ್ರತಿಭಟನಾ ರಾರ‍ಯಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಬಿಸಿಯೂಟ, ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕೆಂದು ಆಗ್ರಹಿಸಿ ಮುಷ್ಕರ ನಡೆಸಲಾಗುತ್ತಿದೆ. ಗುತ್ತಿಗೆ ಮತ್ತು ಹೊರಗುತ್ತಿಗೆ ರದ್ದು ಮಾಡಿ ಎಲ್ಲ ನೌಕರರನ್ನು ಕಾಯಂಗೊಳಿಸಬೇಕೆಂಬ ಹೋರಾಟ ನಡೆಯುತ್ತಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸುವ ಕೆಲಸವಾಗಿಲ್ಲ. ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ. ಅಡುಗೆ ಅನಿಲ ದರ ದುಪ್ಪಟ್ಟಾಗಿದ್ದು, ಸಾಮಾನ್ಯ ಜನರಿಗೆ ಹೊರೆಯಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಎನ್‌.ಡಿ ಕುಟ್ಟಪ್ಪ ಮಾತನಾಡಿ, ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯ ಬಗ್ಗೆ 2 ದಿನಗಳ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಯಶಸ್ವಿಯಾಗಿ ಮುಷ್ಕರ ನಡೆಯುತ್ತಿದೆ. ಬುಧವಾರ ಮಡಿಕೇರಿಯಲ್ಲಿ ನಡೆಯಲಿರುವ ರಾರ‍ಯಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಸಂಘಟನೆಗಳು ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಚ್‌.ಬಿ.ರಮೇಶ್‌, ಜಿಲ್ಲಾ ಸ್ವಚ್ಛತಾ ಕಾರ್ಮಿಕ ಸಂಘದ ಅಧ್ಯಕ್ಷೆ ಎಚ್‌.ಕೆ. ಜಾನಕಿ, ಅಂಚೆ ಇಲಾಖೆಯ ಕಾರ್ಯದರ್ಶಿ ಬೇಬಿ, ಆಶಾ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತೆಕ್ಕಡೆ ಪೂರ್ಣಿಮಾ, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ತಾಲೂಕು ಅಧ್ಯಕ್ಷೆ ವಿ.ಎಚ್‌. ನಾಗರತ್ನ ಹಾಜರಿದ್ದರು.

ಬೇಡಿಕೆಗಳು

ಏರುತ್ತಿರುವ ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಿಸಬೇಕು

ಹೊಸ ಮತ್ತು ಸಭ್ಯ ಉದ್ಯೋಗಗಳನ್ನು ಸೃಷ್ಟಿಸಬೇಕು

18 ಸಾವಿರ ಕನಿಷ್ಠ ವೇತನ ಜಾರಿ ಮಾಡಬೇಕು

ಕಾರ್ಮಿಕರನ್ನು ಗುಲಾಮರನ್ನಾಗಿಸುವ ಕಾರ್ಮಿಕರ ಕಾನೂನುಗಳ ತಿದ್ದುಪಡಿಯನ್ನು ನಿಲ್ಲಿಸಬೇಕು

ಸ್ಕೀಂ ನೌಕರರನ್ನು ಕಾಯಂ ಮಾಡಬೇಕು

ದೇಶದ ಎಲ್ಲ ಕಾರ್ಮಿಕರಿಗೂ ಸಾರ್ವಜನಿಕ ಸಾಮಾಜಿಕ ರಕ್ಷ ಣೆ ನೀಡಬೇಕು

ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ತಡೆಯಬೇಕು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ