ಆ್ಯಪ್ನಗರ

ಶ್ರದ್ಧಾಭಕ್ತಿಯಿಂದ ಶಿವರಾತ್ರಿ

ಸುಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಿಸಲಾಯಿತು.

Vijaya Karnataka 5 Mar 2019, 5:00 am
ಸುಂಟಿಕೊಪ್ಪ: ಸುಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ದೇವಾಲಯಗಳಲ್ಲಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಿಸಲಾಯಿತು.
Vijaya Karnataka Web shivaratri celeberated in suntikoppa
ಶ್ರದ್ಧಾಭಕ್ತಿಯಿಂದ ಶಿವರಾತ್ರಿ


ಕಂಬಿಬಾಣೆ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವರ ಮೂರ್ತಿಯನ್ನು ನಾನಾ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಬೆಳಗ್ಗೆಯಿಂದಲೇ ಬಿಲ್ವಪತ್ರೆ ಪೂಜೆ, ದೀಪಾರಾಧನೆ ನಡೆಯಿತು. ನಂತರ ಪ್ರಮುಖ ಅರ್ಚಕ ಪ್ರಭಾಕರ್‌ ಕುದ್ದಣ್ಣಯ್ಯ ನೇತೃತ್ವದಲ್ಲಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ಮಂಗಳಾರತಿ ನಡೆಯಿತು.

ದೇವಾಲಯ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ್‌ ರೈ, ಕಾರ್ಯದರ್ಶಿ ಮಂಜುನಾಥ್‌, ಖಜಾಂಚಿ ಟಿಸಿಎಲ್‌ ಆನಂದ್‌, ಕೆ.ಎಸ್‌.ಭಟ್‌, ಪಳಂಗಪ್ಪ, ಅನಿಲ್‌ ಹಾಜರಿದ್ದರು.

ಬೈತೂರಪ್ಪ ದೇವಾಲಯ: ಸಮೀಪದ ಕೊಡಗರಹಳ್ಳಿ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶಿವ ಮತ್ತು ಪಾರ್ವತಿಗೆ ವಿಶೇಷ ಪೂಜೆ, ಅಲಂಕಾರ, ಶಿವಾರಾಧನೆ ನಡೆಯಿತು.

ನಾಕೂರು, ಕಂಬಿಬಾಣೆ ಮ್ಯಾಗಡೋರ್‌ ಶಿವ ದೇವಾಲಯ, ಹರದೂರು ಮಲ್ಲಿಕಾರ್ಜುನ ಕಾಲೋನಿಯ ಶಿವ ದೇವಾಲಯಗಳಲ್ಲಿ ಬೆಳಗಿನಿಂದಲೇ ಶಿವಪೂಜೆ ನಡೆಯಿತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ