ಆ್ಯಪ್ನಗರ

ಸಾಹಿತ್ಯ ಮೇಳಕ್ಕೆ ಸಿದ್ದುಗೆ ಆಹ್ವಾನ ಬೇಡ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಮೈಸೂರು ಕೊಡವ ಸಮಾಜ ಸಹಯೋಗದಲ್ಲಿ ಮಾ.12 ಮತ್ತು 13ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಕೊಡವ ಸಾಹಿತ್ಯ-ಸಾಂಸ್ಕೃತಿಕ ಮೇಳ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಬಾರದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಹೇಳಿದರು.

ವಿಕ ಸುದ್ದಿಲೋಕ 27 Feb 2016, 4:18 am
ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಮೈಸೂರು ಕೊಡವ ಸಮಾಜ ಸಹಯೋಗದಲ್ಲಿ ಮಾ.12 ಮತ್ತು 13ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಕೊಡವ ಸಾಹಿತ್ಯ-ಸಾಂಸ್ಕೃತಿಕ ಮೇಳ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಬಾರದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಹೇಳಿದರು.
Vijaya Karnataka Web should not be invited to the cm for mela
ಸಾಹಿತ್ಯ ಮೇಳಕ್ಕೆ ಸಿದ್ದುಗೆ ಆಹ್ವಾನ ಬೇಡ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಬರುವುದೇ ಆದಲ್ಲಿ ಟಿಪ್ಪು ಜಯಂತಿ ಆಚರಣೆ ಕೈ ಬಿಡುತ್ತೇನೆ ಎಂಬ ಭರವಸೆ ನೀಡಲಿ ಎಂದು ಹೇಳಿದರು.
ಟಿಪ್ಪು ಜಯಂತಿ ಆಚರಣೆ ಮೂಲಕ ಸಿದ್ದರಾಮಯ್ಯ ಕೊಡಗಿನ ಮೂಲ ನಿವಾಸಿಗಳಿಗೆ ಅನ್ಯಾಯ ಮಾಡಿದ್ದಾರೆ. ಕೊಡಗಿಗೆ ಟಿಪ್ಪು ಮಾಡಿರುವ ಅನ್ಯಾಯದ ಬಗ್ಗೆ ಎಲ್ಲರಿಗೂ ತಿಳಿದಿದೆ. ಸಮಾಜ ಬಾಂದವರೆಲ್ಲ ಸೇರಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು ಎಂದು ತೀರ್ಮಾನ ಕೈಗೊಳ್ಳಬೇಕೆಂದರು. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ತನ್ನ ಅಧಿಕಾರ ಉಳಿಸಿಕೊಂಡಿದೆ. ಸುಮಾರು 1,20,000 ಸಾವಿರ ಮತಗಳನ್ನು ಬಿಜೆಪಿ ಪಡೆದುಕೊಂಡಿದೆ. ಬಿಜೆಪಿಯನ್ನು ಬೆಂಬಲಿಸಿದ ಎಲ್ಲಾ ಮತದಾರರಿಗೆ ಅಭಿನಂದೆನೆ ಸಲ್ಲಿಸಿದರು.
ಜನತೆ ಬಿಜೆಪಿ ಸರಕಾರದ ಆಡಳಿತವನ್ನು ಮೆಚ್ಚಿ ಮತ ನೀಡಿದ್ದಾರೆ. ಕಾಂಗ್ರೆಸ್ ಸರಕಾರ ಕೊಡಗನ್ನು ಕಡೆಗಣಿಸುತ್ತದೆ. ಕಾಂಗ್ರೆಸ್‌ನ ದುರಾಡಳಿತ ಜನರಿಗೆ ಸಾಕಾಗಿದೆ ಎಂಬುದು ಇದರಿಂದ ಅರ್ಥವಾಗುತ್ತದೆ ಎಂದು ಹೇಳಿದರು. ರೈಲ್ವೆ ಯೋಜನೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, 667 ಕೋಟಿ ರೂ.ಬಿಡುಗಡೆಯಾಗಿದೆ. ಇದರ ಹಿಂದೆ ಕೇಂದ್ರ ಸರಕಾರ ಹಾಗೂ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಪ್ರಯತ್ನವಿದೆ. ಇನ್ನು ಇದು ಕೇಂದ್ರ ಸರಕಾರದ ಜವಾಬ್ದಾರಿ. ಅವರು ನಿಯಾಮಾನುಸಾರ ಈ ಯೋಜನೆಗೆ ಭೂಮಿ ನೀಡಬೇಕು. ಅವರು ಭೂಮಿ ನೀಡದೇ ಸುಮ್ಮನ್ನೆ ಕುಳಿತರೆ ನೇರವಾಗಿ ಅವರೇ ಹೊಣೆಯಾಗುತ್ತಾರೆ. ಈ ವಿಷಯದ ಕುರಿತು ಅವರ ಮೇಲೆ ಒತ್ತಡ ಹಾಕಲಾಗುತ್ತದೆ ಎಂದು ಹೇಳಿದರು.
ವಿಧಾನಸಭೆ ಸದಸ್ಯ ಸುನೀಲ್ ಸುಬ್ರಹ್ಮಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಪ್ಪಚ್ಚಟ್ಟೋಳಂಡ ಮನು ಮುತ್ತಪ್ಪ, ತಾಲೋಕು ಘಟಕದ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ನಗರಾಧ್ಯಕ್ಷ ಮಹೇಶ್ ಜೈನಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ