ಆ್ಯಪ್ನಗರ

ಮಹಿಳಾ ದೌರ್ಜನ್ಯ ಸಾಮಾಜಿಕ ಪಿಡುಗು

ಮಡಿಕೇರಿ: ಮಹಿಳಾ ದೌರ್ಜನ್ಯ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಮಹಿಳೆ ಮತ್ತು ಪುರುಷ ಎನ್ನುವ ಭೇದ ದೂರವಾಗಬೇಕು ಎಂದು ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ ಅಭಿಪ್ರಾಯಪಟ್ಟಿರು.

ವಿಕ ಸುದ್ದಿಲೋಕ 11 Mar 2016, 4:02 am
ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಡಿಕೇರಿ: ಮಹಿಳಾ ದೌರ್ಜನ್ಯ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಮಹಿಳೆ ಮತ್ತು ಪುರುಷ ಎನ್ನುವ ಭೇದ ದೂರವಾಗಬೇಕು ಎಂದು ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ ಅಭಿಪ್ರಾಯಪಟ್ಟಿರು.
Vijaya Karnataka Web social issue of womens violence kodagu
ಮಹಿಳಾ ದೌರ್ಜನ್ಯ ಸಾಮಾಜಿಕ ಪಿಡುಗು

ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಕಾರ್ಯಪ್ಪ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದಿಂದ ನಡೆದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳಾ ದಿನವನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ, ಮಹಿಳಾ ಸಭಲೀಕರಣದ ಕುರಿತು ಜಾಗೃತಿಯನ್ನು ಮೂಡಿಸುವ ಕಾರ್ಯ ಮಾಡಬೇಕೆಂದು ಕರೆ ನೀಡಿದರು.
ಸಮಾಜದಲ್ಲಿ ಮಹಿಳೆ ಮತ್ತು ಪುರುಷ ಸಮಾನತೆ ನಿರ್ಮಾಣ ಮಾಡುವ ಮೂಲಕ, ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸುವ ಅಗತ್ಯವಿದೆ. ಮಹಿಳೆಯರು ಉತ್ತಮ ಕರ್ತವ್ಯ ಪ್ರಜ್ಞೆ ಉಳ್ಳವರಾಗಿದ್ದು, ಹಲವು ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸಿದ್ದಾರೆ. ಇದು ಹೆಮ್ಮೆಯ ವಿಚಾರ ಎಂದರು.
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ರಂಗಪ್ಪ ಮಾತನಾಡಿ, ಮಕ್ಕಳು ಹುಟ್ಟುವಾಗಲೇ ಗಂಡು ಹೆಣ್ಣು ಎನ್ನುವ ಭೇದ ಭಾವದ ಸಂಕುಚಿತ ಮನೋಭಾವ ಕುಟುಂಬ ವರ್ಗದಲ್ಲೇ ಮೂಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ಮನೆಯಿಂದಲೇ ಆರಂಭವಾಗುವ ಲಿಂಗ ತಾರತಮ್ಯ, ಸಮಾಜಕ್ಕೂ ವ್ಯಾಪಿಸಿದೆ. ಇದನ್ನು ದೂರ ಮಾಡಿ ಸಮಾನ ತೆಯನ್ನು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಪ್ರವಾಸೋದ್ಯಮ ವಿಭಾಗದ ಅಧ್ಯಾಪಕ ಅರ್ಶತ್, ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕರಾದ ಗಾಯತ್ರಿ, ಪ್ರದೀಪ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ