ಆ್ಯಪ್ನಗರ

ಮಾದರೆ ಗ್ರಾಮದಲ್ಲಿ ವಿಶೇಷ ಅರಿವು ಕಾರ್ಯಕ್ರಮ

ದುಂಡಳ್ಳಿ ಗ್ರಾ.ಪಂ.ವ್ಯಾಪ್ತಿಯ ಮಾದರೆ ಗ್ರಾಮದಲ್ಲಿ ಕುಶಾಲನಗರ ಚೈಲ್ಡ್‌ ಲೈನ್‌ ಸಂಸ್ಥೆ ಮತ್ತು ಶನಿವಾರಸಂತೆ ಪೊಲೀಸ್‌ ಠಾಣೆಯಿಂದ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ವಿಶೇಷ ಅರಿವು ಕಾರ್ಯಕ್ರಮ ನಡೆಯಿತು.

Vijaya Karnataka 15 May 2019, 5:00 am
ಶನಿವಾರಸಂತೆ: ದುಂಡಳ್ಳಿ ಗ್ರಾ.ಪಂ.ವ್ಯಾಪ್ತಿಯ ಮಾದರೆ ಗ್ರಾಮದಲ್ಲಿ ಕುಶಾಲನಗರ ಚೈಲ್ಡ್‌ ಲೈನ್‌ ಸಂಸ್ಥೆ ಮತ್ತು ಶನಿವಾರಸಂತೆ ಪೊಲೀಸ್‌ ಠಾಣೆಯಿಂದ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ವಿಶೇಷ ಅರಿವು ಕಾರ್ಯಕ್ರಮ ನಡೆಯಿತು.
Vijaya Karnataka Web MDK-mdk14ss1udgatane


ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ಮಾತನಾಡಿದ ಶನಿವಾರಸಂತೆ ಎಎಸ್‌ಐ ಬೋಪಣ್ಣ, ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯ ತಡೆ ಸಲುವಾಗಿ 2012ರಲ್ಲಿ ಆಗಿನ ಕೇಂದ್ರ ಸರಕಾರ ಪೋಕ್ಸೊ ಕಾಯ್ದೆ ಜಾರಿಗೊಳಿಸಿದೆ. ಮಕ್ಕಳ ಮೇಲೆ ಯಾವುದೆ ರೀತಿಯ ಲೈಂಗಿಕ ದೌರ್ಜನ್ಯ ನಡೆಯುವ ಸಂದರ್ಭ ಸಾರ್ವಜನಿಕರು ಹತ್ತಿರದ ಪೊಲೀಸರಿಗೆ ಮತ್ತು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಕ್ಕಳನ್ನು ಲೈಂಗಿಕ ದೌರ್ಜನ್ಯದಿಂದ ರಕ್ಷಿಸುವಲ್ಲಿ ಸಾರ್ವಜನಿಕರ ಪಾತ್ರವೂ ಮುಖ್ಯ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷ ಣ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗುತ್ತದೆ. ಈ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸುತ್ತದೆ ಎಂದರು.

ಬಾಲ ಕಾರ್ಮಿಕ ತಡೆ ಕಾಯ್ದೆ ಕುರಿತು ಮಾತನಾಡಿದ ಕುಶಾಲನಗರ ಚೈಲ್ಡ್‌ಲೈನ್‌ ಸಂಸ್ಥೆ ತಾಲೂಕು ಕಾರ್ಯಕರ್ತೆ ಬಿ.ಆರ್‌. ಕುಮಾರಿ, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಅಪರಾಧ. 14 ವರ್ಷದ ಒಳಗಿನ ಮಕ್ಕಳನ್ನು ಮನೆ ಕೆಲಸದಲ್ಲಿ, ಗದ್ದೆ ತೋಟಗಳಲ್ಲಿ ಹೋಟೆಲ್‌, ಕ್ಯಾಂಟೀನುಗಳಲ್ಲಿ, ಕಾರ್ಖಾನೆಗಳಲ್ಲಿ ಮಾಲೀಕರು ದುಡಿಸಿಕೊಳ್ಳುವುದು ಅಪರಾಧ. ಮಕ್ಕಳನ್ನು ಈ ರೀತಿ ದುಡಿಸಿಕೊಳ್ಳುವುದನ್ನು ತಡೆಗಟ್ಟುವ ಉದ್ದೇಶದಿಂದ ಸರಕಾರ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಅನುಷ್ಠಾನಗೊಳಿಸಿದೆ ಎಂದರು.

ಭಿಕ್ಷಾಟನೆ ಮಾಡುವ, ಅನಾಥ ಮಕ್ಕಳನ್ನು ರಕ್ಷ ಣೆ ಮಾಡಲು ಚೈಲ್ಡ್‌ ಲೈನ್‌ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಬಾಲ ಕಾರ್ಮಿಕರು ಸೇರಿದಂತೆ ಮಕ್ಕಳನ್ನು ರಕ್ಷ ಣೆ ಮಾಡಿ ಅವರಿಗೆ ಶಿಕ್ಷ ಣ ಕೊಡಿಸುವ ಗುರುತರ ಜವಾಬ್ದಾರಿ ಸಾರ್ವಜನಿಕರ ಮೇಲಿದೆ. ಈ ಕಾರ್ಯದಲ್ಲಿ ವಿವಿಧ ಸಂಘ-ಸಂಸ್ಥೆಯವರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಮಕ್ಕಳ ಸಹಾಯವಾಣಿ ಕುರಿತು ಮಾತನಾಡಿದ ಚೈಲ್ಡ್‌ ಲೈನ್‌ ಸಂಸ್ಥೆಯ ಮಂಜುಳಾ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲ, ಅನಾಥ ಮಕ್ಕಳ ರಕ್ಷ ಣೆ ಮಾಡುವ ಉದ್ದೇಶದಿಂದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕ ಪ್ರಕರಣಗಳು ಕಂಡುಬಂದ ತಕ್ಷ ಣ ಸಾರ್ವಜನಿಕರು ಚೈಲ್ಡ್‌ಲೈನ್‌ ಸಂಸ್ಥೆ-1098 ಸಂಖ್ಯೆಗೆ ಉಚಿತ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪೊಲೀಸ್‌ ಸಿಬ್ಬಂದಿ ಗೋವಿಂದ, ಸರಿತಾ ಮಾಹಿತಿ ನೀಡಿದರು. ಚೈಲ್ಡ್‌ ಲೈನ್‌ ಸಂಸ್ಥೆಯ ಕುಸುಮಾ, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಶಿಕ್ಷ ಕಿಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ