ಆ್ಯಪ್ನಗರ

ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನೆ ಸಭೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮೈಸೂರು ವಿಭಾಗೀಯ ಎಂಟು ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ಕೂಡಿಗೆಯ ಸರಕಾರಿ ಕ್ರೀಡಾಪೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.

Vijaya Karnataka 16 Jun 2019, 5:00 am
ಕುಶಾಲನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮೈಸೂರು ವಿಭಾಗೀಯ ಎಂಟು ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ಕೂಡಿಗೆಯ ಸರಕಾರಿ ಕ್ರೀಡಾಪೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.
Vijaya Karnataka Web sports department progress review meeting
ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನೆ ಸಭೆ


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ ಅವರ ನೇತೃತ್ವದಲ್ಲಿ ಪ್ರಗತಿ ಪರಶೀಲನಾ ಸಭೆ ನಡೆಯಿತು.

ಮೈಸೂರು ವಿಭಾಗಕ್ಕೆ ಸಂಬಂಧಪಟ್ಟ ಎಂಟು ಜಿಲ್ಲೆಗಳಾದ ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ 2019-20ನೇ ಸಾಲಿಗೆ ಕೈಗೆತ್ತಿಕೊಳ್ಳಲು ಉದ್ದೇಶಿಸಲಾದ ಹೊಸ ಕಾಮಗಾರಿಗಳ ಪ್ರಸ್ತುತ ಹಂತದ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಆಯಾ ಜಿಲ್ಲೆಗಳ ಕ್ರೀಡಾ ಸಹಾಯಕ ನಿರ್ದೇಶಕರ ಅಭಿಪ್ರಾಯ ಮತ್ತು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳ ಪ್ರಗತಿಯ ಬಗ್ಗೆ ಸಮರ್ಪಕ ಮಾಹಿತಿ ಪಡೆದರು.

ಕ್ರೀಡಾ ಇಲಾಖೆಯ ಎಂಟು ಜಿಲ್ಲೆಗಳ ಸಹಾಯಕ ನಿರ್ದೇಶಕರು ಇಲಾಖೆಗೆ ಸಂಬಂಧಪಟ್ಟಂತೆ ಕೈಗೊಂಡ ಕಾಮಗಾರಿಗಳು, ಖರ್ಚು ವೆಚ್ಚ ಮತ್ತು ವಸತಿ ನಿಲಯಗಳ ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಮತ್ತು ಸರಕಾರದಿಂದ ಬಿಡುಗಡೆಯಾದ ಅನುದಾನವನ್ನು ಯಾವ ರೀತಿ ಇಲಾಖೆಗೆ ಸದ್ಬಳಕೆ ಮಾಡಬೇಕು, ಕ್ರೀಡಾ ಚಟುವಟಿಕೆಗಳ ಹೇಗೆ ಅಭಿವೃದ್ಧಿಗೊಳಿಸಬೇಕು ಎಂಬುವುದರ ಬಗ್ಗೆ ಚರ್ಚೆ ನಡೆಸಿ, ಸೂಚನೆ ನೀಡಿದರು.

ಮೈಸೂರು ವಿಭಾಗೀಯ ಮಟ್ಟದ ಸಭೆ ಇದುವರೆಗೆ ಮೈಸೂರು ಮತ್ತು ಮಂಡ್ಯಗಳಲ್ಲಿ ನಡೆಯುತ್ತಿತ್ತು.

ಇದೀಗ ಕೊಡಗು ಜಿಲ್ಲೆಯ ಕೂಡಿಗೆ ಕ್ರೀಡಾಶಾಲೆಯ ಆವರಣದಲ್ಲಿ ರಾಜ್ಯ ಮಟ್ಟದ ಈ ಪ್ರಗತಿ ಪರಿಶೀಲನೆ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಜಿ.ಕಲ್ಪನಾ ಅವರು ಎಂಟು ಜಿಲ್ಲೆಗಳ ಕ್ರೀಡಾ ಇಲಾಖೆಯ ಮಾಹಿತಿಗಳನ್ನು ಅಧಿಕಾರಿಗಳನ್ನು ಪಡೆದುಕೊಂಡರು.

ಅಸಮರ್ಪಕ ಕಾಮಗಾರಿಗಳು, ಅಭಿವೃದ್ಧಿಗಳು ಆಗದೇ ಇರುವ ಹಾಗೂ ಸಮರ್ಪಕ ಮಾಹಿತಿಯನ್ನು ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಂದೆ ಆಗಬೇಕಾಗಿರುವ ಕಾಮಗಾರಿಗಳ ಕ್ರಿಯಾ ಯೋಜನೆ, ಅಂದಾಜು ವೆಚ್ಚಗಳ ಬಗ್ಗೆ, ಪ್ರಸ್ತುತ ಹಂತ ದಲ್ಲಿರುವ ಕಾಮ ಗಾರಿಗಳ ಸಮರ್ಪಕ ವಿವರನ್ನು ನೀಡಬೇಕು ಎಂದು ಆದೇಶಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಕೆ.ಶ್ರೀನಿವಾಸ್‌, ಜಂಟಿ ನಿರ್ದೇಶಕರಾದ ಸುಭಾಷ್‌, ಉಪನಿರ್ದೇಶಕರಾದ ಡಾ.ಜಿತೇಂದ್ರಶೆಟ್ಟಿ, ಸತೀಶ್‌ ಸಜನ್‌ನವರ್‌, ರಮೇಶ್‌ ಮತ್ತು ಎಂಟು ಜಿಲ್ಲೆಗಳ ಸಹಾಯಕ ನಿರ್ದೇಶಕರು, ಎಂಟು ಜಿಲ್ಲೆಗಳ ಯುವ ಸ್ಪಂದನ ಸಂಸ್ಥೆಯ ಸಂಯೋಜಕರು ಹಾಗೂ ಕೂಡಿಗೆ ಕ್ರೀಡಾ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಕುಂತಿಬೋಪಯ್ಯ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ