ಆ್ಯಪ್ನಗರ

ಕ್ರೀಡೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿ

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಸುತ್ತದೆ ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷ ಣಾಧಿಕಾರಿ ನಾಗರಾಜಯ್ಯ ಹೇಳಿದರು.

Vijaya Karnataka 25 Aug 2019, 5:00 am
ಕುಶಾಲನಗರ
Vijaya Karnataka Web sports enhances body immune
ಕ್ರೀಡೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿ


ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಸುತ್ತದೆ ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷ ಣಾಧಿಕಾರಿ ನಾಗರಾಜಯ್ಯ ಹೇಳಿದರು.

ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 2019-20ನೇ ಸಾಲಿನ ವಲಯ ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯು ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುವುದರ ಜತೆæಗೆ ಮನೋಬಲವನ್ನು ಹೆಚ್ಚಿಸುತ್ತದೆ. ಜತೆಗೆ ತನ್ನದೇ ಆದ ಇಚ್ಛಾಶಕ್ತಿಯನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಕ್ರೀಡಾಕೂಟದ ಧ್ವಜಾರೋಹಣವನ್ನು ನೆರೆವೇರಿಸಿದ ಜಿ.ಪಂ. ಸದಸ್ಯೆ ಕೆ.ಆರ್‌.ಮಂಜುಳಾ, ದೈಹಿಕ ಮತ್ತು ಮಾನಸಿಕ ನೆಮ್ಮದಿಗೆ ಕ್ರೀಡೆ ಸಹಕಾರಿ ಎಂದರು.

ತಾ.ಪಂ. ಸದಸ್ಯ ಗಣೇಶ್‌ ಕ್ರೀಡಾ ಜ್ಯೋತಿ ಬೆಳಗಿಸಿದರು. ಕ್ರೀಡಾಕೂಟದಲ್ಲಿ ಹತ್ತು ಶಾಲೆಗಳಿಂದ ಆಗಮಿಸಿದ ಬಾಲಕ, ಬಾಲಕಿಯರು ಪಾಲ್ಗೊಂಡಿದ್ದು, ಕಬಡ್ಡಿ, ಬಾಲಕಿಯರ ಥ್ರೋಬಾಲ್‌, ಬಾಲಕರ ವಾಲಿಬಾಲ್‌ ಕ್ರೀಡೆಗಳನ್ನು ನಡೆಸಲಾಯಿತು.

ಅಧ್ಯಕ್ಷ ತೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಕಾಶ್‌ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಡಯಟ್‌ನ ಉಪನ್ಯಾಸಕಿ ನಳಿನಾಕ್ಷಿ, ದೈಹಿಕ ಶಿಕ್ಷ ಣಾಧಿಕಾರಿ ಡಾ.ಸದಾಶಿವ ಪಲ್ಲೇದ್‌, ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಉಪಾಧ್ಯಕ್ಷ ಕೆ.ಕೆ.ನಾಗರಾಜ್‌ ಶೆಟ್ಟಿ, ಪೋಷಕ ಪರಿಷತ್ತಿನ ಅಧ್ಯಕ್ಷ ಹರೀಶ್‌, ನಿರ್ದೇಶಕರಾದ ರವಿ ಸೇರಿದಂತೆ ಶಾಲೆಯ ಶಿಕ್ಷ ಕ ವೃಂದ ಹಾಗೂ ವಿವಿಧ ಶಾಲೆಗಳಿಂದ ಆಗಮಿಸಿದ ದೈಹಿಕ ಶಿಕ್ಷ ಕರು ಭಾಗವಹಿದ್ದರು.

24 ಕೆಯುಎಸ್‌ 04 ಚಿತ್ರದಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 2019-20ನೇ ಸಾಲಿನ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾ ಕೂಟವನ್ನು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷ ಣಾಧಿಕಾರಿ ನಾಗರಾಜಯ್ಯ ಉದ್ಘಾಟಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ