ಆ್ಯಪ್ನಗರ

ವಿದ್ಯಾರ್ಥಿನಿ ನೇಣಿಗೆ ಶರಣು

ಇಲ್ಲಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

Vijaya Karnataka 27 Jan 2019, 5:00 am
ಗೋಣಿಕೊಪ್ಪಲು: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.
Vijaya Karnataka Web student hang
ವಿದ್ಯಾರ್ಥಿನಿ ನೇಣಿಗೆ ಶರಣು


ಅರುವತ್ತೋಕ್ಲು ಮೈಸೂರಮ್ಮ ನಗರದ ನಿವಾಸಿ ಶ್ರೀನಿವಾಸ ಮತ್ತು ರಾಣಿ ಅವರ ಎರಡನೇ ಪುತ್ರಿ ದರ್ಶಿನಿ(17) ಮೃತರು.

ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ದರ್ಶಿನಿ, ತಂದೆ, ತಾಯಿ, ಸಹೋದರಿ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಶನಿವಾರ ಬೆಳಗ್ಗೆ ಚೂಡಿದಾರ್‌ ವೇಲ್‌ನಿಂದ ನೇಣು ಬಿಗಿದುಕೊಂಡಿದ್ದಾರೆ.

''ಎಸ್‌ಎಸ್‌ಎಲ್‌ಸಿಯಲ್ಲಿ 472 ಅಂಕಗಳನ್ನು ಪಡೆದುಕೊಂಡ ದರ್ಶಿನಿ ಪಿಯುಸಿಯಲ್ಲಿ ಪೂರ್ವಭಾವಿ ಪರೀಕ್ಷೆ ಮುಗಿಸಿದ್ದಳು. ಇಬ್ಬರು ನಿತ್ಯ ಜತೆಯಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದೆವು. ಶನಿವಾರ ನಾನು ಕಾಲೇಜಿಗೆ ಬರುವುದಿಲ್ಲ ಎಂದು ಮನೆಯಲ್ಲೇ ಇದ್ದ ದರ್ಶಿನಿ ನೇಣುಬಿಗಿದುಕೊಂಡಿದ್ದಾಳೆ. ಕಾಲೇಜಿನಿಂದ ಮರಳಿ ಬಂದಾಗ ತಂಗಿ ದರ್ಶಿನಿ ನೇಣುಬಿಗಿದುಕೊಂಡಿರುವುದು ಗೊತ್ತಾಯಿತು,'' ಎಂದು ಸಹೋದರಿ ವಿ.ಎಸ್‌.ಭವಾನಿ ತಿಳಿಸಿದ್ದಾರೆ.

''ಸಾಯುವ ಮೊದಲು ಬರೆದ ಮರಣ ಪತ್ರದಲ್ಲಿ ತನ್ನ ಸಾವಿಗೆ ತಾನೇ ಕಾರಣ. ಸಂತೋಷದಿಂದ ಸಾಯುತ್ತಿರುವುದಾಗಿ ಬರೆದುಕೊಂಡಿದ್ದಾಳೆ,'' ಎಂದು ಪೊಲೀಸರು ತಿಳಿಸಿದ್ದಾರೆ.

ಈಕೆಯ ಪೋಷಕರು ಮೂಲ ಹರಿಹರ ಗ್ರಾಮದವರಾಗಿದ್ದು 20 ವರ್ಷಗಳಿಂದ ಮೈಸೂರಮ್ಮ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ತಂದೆ ಕೂಲಿ ಕಾರ್ಮಿಕರಾಗಿದ್ದು, ತಾಯಿ ಬೈಪಾಸ್‌ ರಸ್ತೆಯಲ್ಲಿರುವ ಶಾಲೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ದರ್ಶಿನಿಯ ಸಾವಿಗೆ ಆಕೆಯ ಕಾಲೇಜಿನ ಸ್ನೇಹಿತರು, ಬಂಧುಗಳು ಕಂಬನಿ ಮಿಡಿದಿದ್ದಾರೆ. ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ