ಆ್ಯಪ್ನಗರ

ವ್ಯಾಕರಣ ಮೇಷ್ಟ್ರಾಗಿದ್ದ ಸಿದ್ದರಾಮಯ್ಯ, ಇತಿಹಾಸ ಮೇಷ್ಟ್ರಾಗಲು ಹೊರಟಿದ್ದಾರೆ: ಶಿಕ್ಷಣ ಸಚಿವ

ಇಷ್ಟು ದಿನ ಸಿದ್ದರಾಮಯ್ಯ ಅವರು ವ್ಯಾಕರಣ ಮೇಷ್ಟ್ರಾಗಿದ್ದರು. ಈಗ ಇತಿಹಾಸ ಮೇಷ್ಟ್ರಾಗಲು ಹೊರಟಿದ್ದಾರೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.

Vijaya Karnataka Web 5 Oct 2019, 1:41 pm
ಕೊಡಗು: ಪ್ರಧಾನಿ ನರೇಂದ್ರ ಮೋದಿ ಹಿಟ್ಲರ್‌ ಮಾದರಿಯಲ್ಲಿ ಆಡಳಿತ ನಡೆಸುತ್ತಿದ್ದಾರೆಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಎಸ್‌ ಸುರೇಶ್ ಕುಮಾರ್, 'ಇಷ್ಟು ದಿನ ಸಿದ್ದರಾಮಯ್ಯ ಅವರು ವ್ಯಾಕರಣ ಮೇಷ್ಟ್ರಾಗಿದ್ದರು. ಈಗ ಇತಿಹಾಸ ಮೇಷ್ಟ್ರಾಗಲು ಹೊರಟಿದ್ದಾರೆ' ಎಂದು ಟೀಕಿಸಿದ್ದಾರೆ.
Vijaya Karnataka Web suresh kumar


ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಹಾಗೂ ಹಿಟ್ಲರ್ ನಡುವೆ ಹೋಲಿಕೆ ಮಾಡುವುದು ಸಿದ್ದರಾಮಯ್ಯ ಅವರ ರಾಜಕೀಯ ಧೋರಣೆ ತೋರುತ್ತದೆಂದು ಕಿಡಿಕಾರಿದರು.

ಕೇಂದ್ರದಿಂದ ರಾಜ್ಯದ ನೆರೆ ಪರಿಹಾರ ವರದಿ ತಿರಸ್ಕರಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಕೇಂದ್ರ ಸರಕಾರ ಬೇರೆಯದ್ದೇ ಯೋಚನೆ ಹೊಂದಿದೆ. 38 ಸಾವಿರ ಕೋಟಿ ನೆರೆ ಪರಿಹಾರಕ್ಕೆ ಸಮರ್ಥನೆ ನೀಡುತ್ತೇವೆಂದು ತಿಳಿಸಿದರು.

ಮೋದಿಯದ್ದು ಫ್ಯಾಸಿಸ್ಟ್ ಸರಕಾರ, ಹಿಟ್ಲರ್ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯದ ಬೊಕ್ಕಸದಲ್ಲಿ ಇದ್ದ ಹಣದಲ್ಲಿ ನೆರೆ ಪರಿಹಾರ ಕಾರ್ಯ ಆರಂಭಿಸಿದ್ದೇವೆ. ಇನ್ನೂ ಹೆಚ್ಚಿನ ಹಣದ ಅಗತ್ಯ ಇದೆ. ಆ ಹಣವನ್ನು ಕೇಂದ್ರ ಸರಕಾರದಿಂದ ಬಯಸುತ್ತಿದ್ದೇವೆಂದು ಹೇಳಿದರು.

ಪ್ರವಾಹ ಪರಿಹಾರ ವಿಳಂಬ ವಿಚಾರವಾಗಿ ಕೇಂದ್ರ ಸರಕಾರ ಹಾಗೂ ರಾಜ್ಯದ ಸಂಸದರ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌‌ಗೆ ನೋಟಿಸ್ ನೀಡಿದ ವಿಚಾರವನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆದರೆ, ಯಾವ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ವಿಚಾರಿಸುತ್ತೇನೆ. ಆದರೆ, ಜನರ ಭಾವನೆ ಎತ್ತಿ ಹಿಡಿದಿದ್ದಕ್ಕೆ ನೋಟಿಸ್ ಎಂಬ ವ್ಯಾಖ್ಯಾನ ಸರಿಯಲ್ಲ ಎಂದರು.

ಹುಬ್ಬಳ್ಳಿಗೆ ಬಂದಿಳಿದ ಸಚಿವೆ ನಿರ್ಮಲಾ‌ ಸೀತಾರಾಮನ್ ವಿರುದ್ಧ ಗೋ ಬ್ಯಾಕ್ ಘೋಷಣೆ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅನುದಾನದ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಹಣ ನಮ್ಮಲ್ಲಿ ಇಲ್ಲ ಎಂದು ಎಲ್ಲಿಯೂ ಹೇಳಿಲ್ಲ ಎಂದು ಸಮರ್ಥನೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಅವರಿಗಿಂತ ನನಗೆ ಕ್ಲೋಸ್ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಏನೇನು ಹೇಳಿಕೆ ನೀಡುತ್ತಾರೆ. ಈ ಬಗ್ಗೆ ನಂದೇನು ವ್ಯಾಖ್ಯಾನ ಇಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಆಡಳಿತ ಮಾಡುತ್ತಿದ್ದಾರೆಂಬ ಮಾಜಿ ಸಚಿವ ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಆರೋಪದ ಬಗ್ಗೆ ಸಿಎಂ, ಸಿಎಂ ಪುತ್ರ ಸೇರಿದಂತೆ ಎಲ್ಲರೂ ಸ್ಪಷ್ಟನೆ ಕೊಟ್ಟಿದ್ದಾರೆ. ನಾವೇ ಆಡಳಿತ ನಡೆಸುತ್ತಿರುವುದು. ಸಂವಿಧಾನೇತರ ವ್ಯಕ್ತಿಗಳ್ಯಾರು ಆಡಳಿತ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಬಾಕಿ ಪ್ರಯೋಗಿಕವಾಗಿ 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಜಾರಿಗೆ ತಂದಿದ್ದೇವೆ. ಮುಂದಿನ ವರ್ಷ ಪೂರ್ಣ ಪ್ರಮಾಣವಾಗಿ ಇಂಪ್ಲಿನೆಂಟ್ ಮಾಡುತ್ತೇವೆ. ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸಚಿವ ಎಸ್‌ ಸುರೇಶ್ ಕುಮಾರ್ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ