ಆ್ಯಪ್ನಗರ

ಸ್ವಚ್ಛತಾ ಪಕ್ವಾಡ ಅಭಿಯಾನ

ಕೇಂದ್ರ ಸರಕಾರದ ಸ್ವಚ್ಛತಾ ಪಕ್ವಾಡ ಅಭಿಯಾನದ ಅಂಗವಾಗಿ ಶನಿವಾರ ನಗರದ ಐತಿಹಾಸಿಕ ಕೋಟೆ ಆವರಣದಲ್ಲಿ ನಾನಾ ಸಂಘಟನೆಗಳ ಕಾರ್ಯಕರ್ತರು, ಪೊಲೀಸ್‌, ಸಿಬ್ಬಂದಿ, ವಿದ್ಯಾರ್ಥಿಗಳು, ಉಪನ್ಯಾಸಕರು ಭಾಗವಹಿಸಿ ಸ್ವಚ್ಛತಾ ಕಾರ್ಯದಲ್ಲಿ ಕೈ ಜೋಡಿಸಿದರು.

Vijaya Karnataka 30 Sep 2018, 5:00 am
ಮಡಿಕೇರಿ: ಕೇಂದ್ರ ಸರಕಾರದ ಸ್ವಚ್ಛತಾ ಪಕ್ವಾಡ ಅಭಿಯಾನದ ಅಂಗವಾಗಿ ಶನಿವಾರ ನಗರದ ಐತಿಹಾಸಿಕ ಕೋಟೆ ಆವರಣದಲ್ಲಿ ನಾನಾ ಸಂಘಟನೆಗಳ ಕಾರ್ಯಕರ್ತರು, ಪೊಲೀಸ್‌, ಸಿಬ್ಬಂದಿ, ವಿದ್ಯಾರ್ಥಿಗಳು, ಉಪನ್ಯಾಸಕರು ಭಾಗವಹಿಸಿ ಸ್ವಚ್ಛತಾ ಕಾರ್ಯದಲ್ಲಿ ಕೈ ಜೋಡಿಸಿದರು.
Vijaya Karnataka Web MDK-mdk29ru01


ಗ್ರೀನ್‌ ಸಿಟಿ ಫೋರಂ ನೇತೃತ್ವದಲ್ಲಿ ನಡೆಯುತ್ತಿರುವ ಶ್ರಮದಾನದಲ್ಲಿ ಸರ್ಕಲ್‌ ಇನ್ಸ್‌ಪೆಕ್ಟರ್‌ಗಳಾದ ಐ.ಪಿ. ಮೇದಪ್ಪ, ಪ್ರದೀಪ್‌ಕುಮಾರ್‌, ಸಬ್‌ಇನ್ಸ್‌ಪೆಕ್ಟರ್‌ಗಳಾದ ಚೇತನ್‌, ಅಚ್ಚಮ್ಮ ಪಾಲ್ಗೊಂಡಿದ್ದರು. ಮಡಿಕೇರಿ ನಗರ, ಮಡಿಕೇರಿ ಗ್ರಾಮಾಂತರ, ಮಡಿಕೇರಿ ಸಂಚಾರ, ಮಡಿಕೇರಿ ಮಹಿಳಾ ಠಾಣೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ ಎಎಸ್‌ಐ, ಮುಖ್ಯಪೇದೆ, ಪೇದೆಗಳು ಸೇರಿದಂತೆ ಸಾಕಷ್ಟು ಸಿಬ್ಬಂದಿ ಭಾಗವಹಿಸಿದ್ದರು.

ಮಡಿಕೇರಿ ಕೋಟೆ ಆವರಣದಲ್ಲಿ ಗ್ರೀನ್‌ ಸಿಟಿ ಫೋರಂ ಮುಂದಾಳತ್ವದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದರಲ್ಲಿ ಪೊಲೀಸರು ಭಾಗಿಯಾಗಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಪೊಲೀಸ್‌ ಕವಾಯತು ಮೈದಾನ, ಪೊಲೀಸ್‌ ವಸತಿಗೃಹ ವ್ಯಾಪ್ತಿಯಲ್ಲಿ ಶ್ರಮದಾನದ ಮೂಲಕ ಸ್ವಚ್ಛತೆ ಹಮ್ಮಿಕೊಳ್ಳಲಾಗುವುದು ಡಿವೈಎಸ್ಪಿ ಕೆ.ಎಸ್‌. ಸುಂದರ್‌ರಾಜ್‌ ಹೇಳಿದರು.

ಮಡಿಕೇರಿ ಲಯನ್ಸ್‌ ಸಂಸ್ಥೆ ಅಧ್ಯಕ್ಷ ವ್ಯಾಂಡಮ್‌ ದಾಮೋದರ್‌ ನೇತೃತ್ವದಲ್ಲಿ ಲಯನ್ಸ್‌ ಸಂಸ್ಥೆ ಸದಸ್ಯರಾದ ಸೋಮಣ್ಣ, ಅನಿತಾ ಸೋಮಣ್ಣ, ನಂಜಪ್ಪ, ಜೆ.ವಿ. ಕೋಠಿ, ಮಧುಕರ್‌ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್‌) ಘಟಕದಲ್ಲಿರುವ 60 ಸ್ವಯಂ ಸೇವಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿ ನಾಯಕ ಸುಂದರ್‌ ನಾಯಕ್‌ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದರು.

ನಗರಸಭೆ ಮಾಜಿ ಸದಸ್ಯ ಬಿ.ಎಂ. ರಾಜೇಶ್‌ ಪ್ರಾಯೋಜಕತ್ವದಲ್ಲಿ ಯಂತ್ರದ ಮೂಲಕ ಹುಲ್ಲುಗಳನ್ನು ಕತ್ತರಿಸಲಾಯಿತು. ಗ್ರೀನ್‌ ಸಿಟಿ ಫೋರಂ ನಿರ್ದೇಶಕರಾದ ಪೂಳಕಂಡ ರಾಜೇಶ್‌, ಮಾದೇಟಿರ ತಿಮ್ಮಯ್ಯ ಅವರ ತೋಟದಲ್ಲಿ ಕೆಲಸ ಮಾಡುವ ಯಂತ್ರ ಬಳಸಿ ದಿನಪೂರ್ತಿ ಕೋಟೆ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಅದರಲ್ಲೂ ತಮ್ಮ ಕಾರ್ಮಿಕರೊಂದಿಗೆ ರಾಜೇಶ್‌ ದಿನಪೂರ್ತಿ ಕೋಟೆಯಲ್ಲಿ ಕಾರ್ಯನರ್ವಿಹಿಸಿದ್ದು ವಿಶೇಷವಾಗಿತ್ತು.

ಗ್ರೀನ್‌ ಸಿಟಿ ಫೋರಂ ಅಧ್ಯಕ್ಷ ಅಂಬೆಕಲ್‌ ನವೀನ್‌ ಕುಶಾಲಪ್ಪ, ಸ್ಥಾಪಕಾಧ್ಯಕ್ಷ ಚೆಯ್ಯಂಡ ಸತ್ಯ, ಪ್ರಧಾನ ಕಾರ್ಯದರ್ಶಿ ಪಿ. ಕೃಷ್ಣಮೂರ್ತಿ, ನಿರ್ದೇಶಕರಾದ ಮೋಂತಿ ಗಣೇಶ್‌, ಕುಕ್ಕೇರ ಜಯ ಚಿಣ್ಣಪ್ಪ, ಕಿರಿಯಮಾಡ ರತನ್‌ ತಮ್ಮಯ್ಯ, ಅಜ್ಜಮಾಡ ರಮೇಶ್‌ ಕುಟ್ಟಪ್ಪ, ಪೂಳಕಂಡ ರಾಜೇಶ್‌ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ