ಆ್ಯಪ್ನಗರ

ಕಾಂಗ್ರೆಸ್ ಪಕ್ಷದ್ದೂ ಅಭಿವೃದ್ಧಿ ಸಂಸ್ಕೃತಿ

ಕಾಂಗ್ರೆಸ್ ಪಕ್ಷ ಅಭಿವದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಸಂಸ್ಕೃತಿಯೇ ಹೊರತು, ಅಭಿವದ್ಧಿರಹಿತವಾಗಿ ಬರಿ ಗುದ್ದಲಿ ಪೂಜೆ ನೆರವೇರಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುವುದಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ಹೇಳಿದರು.

Vijaya Karnataka 16 Dec 2017, 5:15 am
ಸಿದ್ದಾಪುರ: ಕಾಂಗ್ರೆಸ್ ಪಕ್ಷ ಅಭಿವದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಸಂಸ್ಕೃತಿಯೇ ಹೊರತು, ಅಭಿವದ್ಧಿರಹಿತವಾಗಿ ಬರಿ ಗುದ್ದಲಿ ಪೂಜೆ ನೆರವೇರಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುವುದಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ಹೇಳಿದರು.
Vijaya Karnataka Web the congress party is also a development culture
ಕಾಂಗ್ರೆಸ್ ಪಕ್ಷದ್ದೂ ಅಭಿವೃದ್ಧಿ ಸಂಸ್ಕೃತಿ


ವಾಲ್ನೂರು ತ್ಯಾಗತ್ತೂರು ವ್ಯಾಪ್ತಿಯ ಕಾಂಗ್ರೆಸ್ ಕಾರ‌್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾಗಮಂಡಲ ರಸ್ತೆ ದುರಸ್ಥಿ ಕಾರ್ಯ ಆರಂಭವಾಗುತ್ತಿದೆ ಎಂಬ ಸೂಚನೆ ದೊರೆಯುತ್ತಲ್ಲೇ ಬಿಜೆಪಿ ಕಾರ‌್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಜನರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತತ್ವದ ರಾಜ್ಯದ ಕಾಂಗ್ರೆಸ್ ಹಲವು ಜನಪರ ಯೋಜನೆ ಗಳನ್ನು ಜಾರಿಗೆ ತಂದಿದ್ದು, ಚುನಾವಣೆ ಸಂದರ್ಭ ಪ್ರಣಾಳಿಕೆಯಲ್ಲಿ ನೀಡಿದ್ದ ಯೋಜನೆಗಳಲ್ಲಿ ಶೇಕಡ 95ರಷ್ಟು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ. ಪಕ್ಷದ ಕಾರ‌್ಯಕರ್ತರು ಕಾಂಗ್ರೆಸ್ ಸರಕಾರ ದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.

ಐಎನ್‌ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಮಾತನಾಡಿ, ಬಡವರಿಗೆ ಉಚಿತವಾಗಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೆ ತಂದಾಗ ಬಡವರು ಸೋಮಾರಿಗಳಾಗುತ್ತಾರೆ ಎಂದು ವ್ಯಂಗ್ಯವಾಡಿದ ಬಿಜೆಪಿ ಪಕ್ಷದವರು ಇಂದು ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ಅನುದಾನ ನೀಡುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ, ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ಅನುದಾನ ನೀಡುತ್ತಿದ್ದಲ್ಲಿ ಬಿಜೆಪಿ ಅಧಿಕಾರಲ್ಲಿರೋ ರಾಜ್ಯಗಳಲ್ಲಿ ಏಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿಲ್ಲ ಎಂದು ಪ್ರಶ್ನಿಸಿದರು.

ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್ ಮಾತನಾಡಿ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಪಾಲಿಸುತ್ತಾ ಪರಸ್ಪರ ಶಾಂತಿ ಸೌಹಾರ್ದತೆಯಲ್ಲಿ ಬದುಕುತ್ತಿರುವ ಜನರ ಮಧ್ಯೆ ಒಡಕನ್ನು ಮೂಡಿಸಿ, ಗಲಾಟೆ ಎಬ್ಬಿಸುವುದೇ ಬಿಜೆಪಿ ಪಕ್ಷದ ಸಂಸ್ಕೃತಿಯಾಗಿದ್ದು, ಸಂಸದ ಪ್ರತಾಪ್ ಸಿಂಹ, ಅಭಿವದ್ಧಿ ಪರ ಕಾಳಜಿ ವಹಿಸದೇ, ಅನ್ನೋನ್ಯತೆಯಿಂದ ಬದುಕುತ್ತಿರುವ ಜನರ ನಡುವೆ ಕಲಹ ತಂದಿಡುವಂತಹ ಕಾರ್ಯ ದಲ್ಲೇ ಹೆಚ್ಚು ಮಗ್ನರಾಗಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಮುಖಂಡರಾದ ಕಾನೆಹಿತ್ಲು ಮೊಣ್ಣಪ್ಪ, ಚಂದ್ರಶೇಖರ್, ಅಪ್ರು ರವೀಂದ್ರ, ಜಿ.ಪಂ. ಸದಸ್ಯೆ ಸುನೀತಾ ಮಂಜುನಾಥ್, ತಾ.ಪಂ.ಸದಸ್ಯೆ ಸುಹಾದ ಅಶ್ರಫ್, ನೆಲ್ಯ ಹುದಿಕೇರಿ ಗ್ರಾ.ಪಂ.ಅಧ್ಯಕ್ಷೆ ಪದ್ಮಾವತಿ, ಪ್ರಮುಖ ರಾದ ರಜಾಕ್, ಜನಾರ್ಧನ್, ಎ.ಕೆ.ಹಕೀಂ, ಉಸ್ಮಾನ್, ಭುವನೇಂದ್ರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ