ಆ್ಯಪ್ನಗರ

ಕೊಡಗು ಪ್ರಕೃತಿ ವಿಕೋಪ: ಸಂತ್ರಸ್ತ ಯುವತಿ ಆತ್ಮಹತ್ಯೆ

ಕಳೆದ ಆಗಸ್ಟ್‌ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗಿದ್ದ ಕಾಲೂರು ಗ್ರಾಮದ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 15 Jun 2019, 9:21 pm
ಮಡಿಕೇರಿ: ಕಳೆದ ಆಗಸ್ಟ್‌ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗಿದ್ದ ಕಾಲೂರು ಗ್ರಾಮದ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web the girl committed suicide
ಕೊಡಗು ಪ್ರಕೃತಿ ವಿಕೋಪ: ಸಂತ್ರಸ್ತ ಯುವತಿ ಆತ್ಮಹತ್ಯೆ


ಐಲಪಂಡ ವನಜಾ (23) ಮೃತ ಯುವತಿ.

ಮಡಿಕೇರಿಯ ಗೌಳಿಬೀದಿಯಲ್ಲಿರುವ ಪಿ.ಜಿ. ಒಂದರಲ್ಲಿ ನೇಣು ಬಿಗಿದುಕೊಂಡು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಡಾಟಾ ಎಂಟ್ರಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ವನಜಾ ಶುಕ್ರವಾರ ಮಧ್ಯಾಹ್ನ ಕೆಲಸಕ್ಕೆ ತೆರಳದೆ ಪಿ.ಜಿಯಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. ಪಿ.ಜಿ.ಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕೃತಿ ವಿಕೋಪದ ವೇಳೆ ವನಜಾ ಅವರ ಮನೆ ಸಂಪೂರ್ಣ ಹಾನಿಗೆ ಒಳಗಾಗಿತ್ತು. ಆ ಬಳಿಕ ವನಜಾ ಮತ್ತು ಆಕೆಯ ತಂದೆ ಐಲಪಂಡ ಲಕ್ಷ್ಮಣ, ತಾಯಿ ರತಿ ಹಾಗೂ ಸಹೋದರಿ ಮಡಿಕೇರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ವನಜಾ ಕೆಲಸಕ್ಕೆ ಸೇರಿದ ಬಳಿಕ ಪೋಷಕರು ಕಾಲೂರಿಗೆ ಮರಳಿದ್ದರು. ಮನೆಗೆ ಹಾನಿಯಾದ ಹಿನ್ನೆಲೆಯಲ್ಲಿ ವನಜಾ ಮನನೊಂದಿದ್ದರು ಎನ್ನಲಾಗಿದೆ. ಪ್ರಕರಣದ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ