ಆ್ಯಪ್ನಗರ

ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಸಮೀಪದ ಪೇರೂರು ಗ್ರಾಮದ ಕಾಫಿ ತೋಟದ ಮಾಲೀಕರೊಬ್ಬರು ಒಂಟಿ ನಳಿಕೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 13 Jun 2018, 5:00 am
ನಾಪೋಕ್ಲು (ಕೊಡಗು ಜಿಲ್ಲೆ): ಸಮೀಪದ ಪೇರೂರು ಗ್ರಾಮದ ಕಾಫಿ ತೋಟದ ಮಾಲೀಕರೊಬ್ಬರು ಒಂಟಿ ನಳಿಕೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web the man committed suicide and shot himself
ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ


ಮಚ್ಚುರ ಪವನ್‌ ಮಂದಣ್ಣ (67) ಮೃತರು. ಮಂಗಳವಾರ ನಾಪೆæäೕಕ್ಲು ನಗರಕ್ಕೆ ತೆರಳಿದ್ದ ಅವರು ಮಧ್ಯಾಹ್ನ 3ರ ಸಮಯದಲ್ಲಿ ಮನೆಗೆ ವಾಪಸ್ಸಾಗಿದ್ದರು. ಈ ವೇಳೆ ಮನೆಯಲ್ಲಿದ್ದ ಪರವಾನಗಿ ಹೊಂದಿದ್ದ ಒಂಟಿ ನಳಿಕೆ ಕೋವಿಯಿಂದ ಮುಖದ ಭಾಗಕ್ಕೆ ಗುಂಡು ಹಾರಿಸಿಕೊಂಡಿದ್ದಾರೆ. ಪತ್ನಿ, ಪುತ್ರ ಮತ್ತಿತರರು ಕೂಡಲೇ ಅವರನ್ನು ನಾಪೋಕ್ಲು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಯಾವುದೇ ವ್ಯವಸ್ಥೆಯಿಲ್ಲದಿದ್ದಾಗ ಮಡಿಕೇರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಈ ವೇಳೆಗೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರಿಗೆ ಪತ್ನಿ, ಪುತ್ರಿ ಮತ್ತು ಪುತ್ರ ಇದ್ದಾರೆ.

ದೇಹದಾನ: ಮಂದಣ್ಣ ಅವರು ಹಿಂದೆಯೇ ತಮ್ಮ ಮರಣಾ ನಂತರ ದೇಹವನ್ನು ಮೆಡಿಕಲ್‌ ಕಾಲೇಜಿಗೆ ದಾನ ಮಾಡುವುದಾಗಿ ಎಲ್ಲಾ ದಾಖಲಾತಿಯನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ಬುಧವಾರ ಪೇರೂರು ಗ್ರಾಮದಲ್ಲಿ ಸಾರ್ವಜನಿಕರ ದರ್ಶನದ ನಂತರ ಆಸ್ಪತ್ರೆಗೆ ಹಸ್ತಾಂತರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಈ ಬಗ್ಗೆ ನಾಪೋಕ್ಲು ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ