ಆ್ಯಪ್ನಗರ

ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿ: ಹಸು ಬಲಿ

ದಕ್ಷಿಣ ಕೊಡಗಿನಲ್ಲಿ ತೀವ್ರ ಆತಂಕ ಮೂಡಿಸಿ ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಹುಲಿ ಮತ್ತೆ ಪ್ರತ್ಯಕ್ಷ ವಾಗಿದ್ದು, ಮಂಚಳ್ಳಿಯಲ್ಲಿ ಹಸುವೊಂದನ್ನು ಕೊಂದು ಹಾಕಿದೆ.

Vijaya Karnataka 8 Aug 2018, 5:00 am
ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ತೀವ್ರ ಆತಂಕ ಮೂಡಿಸಿ ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಹುಲಿ ಮತ್ತೆ ಪ್ರತ್ಯಕ್ಷ ವಾಗಿದ್ದು, ಮಂಚಳ್ಳಿಯಲ್ಲಿ ಹಸುವೊಂದನ್ನು ಕೊಂದು ಹಾಕಿದೆ.
Vijaya Karnataka Web tiger attack once again in south kodagu
ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿ: ಹಸು ಬಲಿ


ಕುಟ್ಟ ಪಂಚಾಯಿತಿ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ರೈತ ಮುಂಡುಮಾಡ ಅಯ್ಯಣ್ಣ ಎಂಬುವವರಿಗೆ ಸೇರಿದ ಹಸು ಮೂರು ದಿನಗಳ ಹಿಂದೆ ಕಾಣೆಯಾಗಿತ್ತು. ಸಮೀಪದ ತೋಟದಲ್ಲಿ ಹುಡುಕಾಟ ನಡೆಸಿದಾಗ ಹುಲಿ ಕೊಂದುಹಾಕಿರುವುದು ಕಂಡು ಬಂದಿದೆ.

ಸುದ್ದಿ ತಿಳಿದ ರೈತ ಸಂಘದ ಮುಖಂಡ ಅಜ್ಜಮಾಡ ಚಂಗಪ್ಪ ಅವರು ಅರಣ್ಯ ಇಲಾಖೆಯ ಡಿಸಿಎಫ್‌ ಜಯಾ ಅವರಿಗೆ ಮಾಹಿತಿ ನೀಡಿದರು. ಕೂಡಲೇ ಹಸು ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ವಿತರಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಕ್ರಮ ತೆಗೆದುಕೊಳ್ಳುವುದಾಗಿ ಹಿರಿಯ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಸ್ಥಳಕ್ಕೆ ಶ್ರೀಮಂಗಲ ವಲಯ ಅರಣ್ಯಾಧಿಕಾರಿ ವೀರೇಂದ್ರ ಹಾಗೂ ಸಿಬ್ಬಂದಿ ತೆರಳಿ ಮಹಜರು ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ