ಮಡಿಕೇರಿ
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಶೇಷಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಕೊಡಗು ವಿದ್ಯಾಲಯ ಅಪರ್ಚುನಟಿ ಶಾಲೆ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ತಾಲೂಕು ಮಟ್ಟದ ಆಟೋಟ ಸ್ಪರ್ಧೆ ನಡೆಯಿತು.
ವಿಶೇಷ ಚೇತನ ವಿದ್ಯಾರ್ಥಿ ಜ್ಞಾನೇಶ್ ಶಿಳ್ಳೆ ಹೊಡೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಜಗದೀಶ್, ವಿಶೇಷಚೇತನರ ದಿನಾಚರಣೆಯ ಪೂರ್ವಭಾವಿಯಾಗಿ ತಾಲೂಕು ಮಟ್ಟದ ಆಟೋಟ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ವಿಶೇಷ ಚೇತನರು ಸಮಾಜದ ಅವಿಭಾಜ್ಯ ಅಂಗ. ಅವರನ್ನು ಕಡೆಗಣಿಸದೆ ಎಲ್ಲ ಮನುಷ್ಯರಂತೆ ಪರಿಗಣಿಸಬೇಕು. ಸ್ಪರ್ಧೆಯಲ್ಲಿ ಎಲ್ಲರೂ ಉತ್ಸಾಹದಿಂದ ಭಾಗವಹಿಸಬೇಕು. ಪ್ರತಿಭೆಯನ್ನು ಅನಾವರಣಗೊಳಿಸಲು ಇಲಾಖೆಯಿಂದ ಅವಕಾಶ ನೀಡಲಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿರಿಯ ನಾಗರಿಕರ ಕಾಯ್ದೆಯ ಪ್ರಕಾರ ಹಿರಿಯರು ತಮ್ಮ ಮಕ್ಕಳಿಂದ ನಿರ್ಲಕ್ಷ ್ಯಕ್ಕೆ ಒಳಗಾದರೆ ಟ್ರಿಬ್ಯುನಲ್ ಅರ್ಜಿ ಪಡೆದು ಕೇಸು ದಾಖಲಿಸಲು ಅವಕಾಶವಿದೆ. ಆ ಮೂಲಕ ತಮ್ಮ ಮಕ್ಕಳಿಂದ ತಿಂಗಳಿಗೆ 10 ಸಾವಿರ ರೂ. ಪಡೆಯಬಹುದು. 55-60 ವರ್ಷ ಮೇಲ್ಪಟ್ಟವರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹೇಳಿದರು.
ಜಿಲ್ಲಾ ವಿಶೇಷಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ದೇವರಾಜ್ ಮಾತನಾಡಿ, ವಿಶೇಷ ಚೇತನರು ದೇವರ ಮಕ್ಕಳಂತೆ. ಇವರಿಗಾಗಿ ಸರಕಾರ ಡಿ. 3ನ್ನು ವಿಶೇಷಚೇತನರ ದಿನಾಚರಣೆಯಾಗಿ ಆಚರಿಸಲು ನಿರ್ಧರಿಸಿದೆ. ಅದರಂತೆ ಜಿಲ್ಲೆಯ 3 ತಾಲೂಕಿನಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶೇಷ ಚೇತನರಿಗಾಗಿ ಇಲಾಖೆಯಿಂದ ಹಲವಾರು ಪರಿಕರಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸವಿತಾ ಮಾತನಾಡಿ, ಎಲ್ಲರ ಸಹಕಾರದಿಂದ ವಿಶೇಷ ಚೇತನರಿಗೆ ಆಟೋಟ ಸ್ಪರ್ಧೆ ಹಮ್ಮಿಕೊಳ್ಳಲು ಸಾಧ್ಯವಾಯಿತು. ವಿಶೇಷಚೇತನರೆಂದು ಅವರಿಗೆ ಅನುಕಂಪ ತೋರಿಸುವ ಬದಲು ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಪ್ರಯತ್ನಿಸಬೇಕು. ಪ್ರತಿ ಹಂತದಲ್ಲೂ ಉತ್ತೇಜನ ನೀಡುವ ಮೂಲಕ ಬೆಳವಣಿಗೆ ಹೊಂದಲು ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯ ಅಪರ್ಚುನಟಿ ಶಾಲೆಯ ಪ್ರಾಂಶುಪಾಲರಾದ ವೀಣಾ ನಾರಾಯಣ ಮತ್ತಿತರರು ಹಾಜರಿದ್ದರು.
ಇದೇ ಸಂದರ್ಭ ಆಟೋಟ ಸ್ಪರ್ಧೆ ನಡೆಯಿತು. 6 ರಿಂದ 21 ವರ್ಷದ ಒಳಗಿನ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಕಾಳು ಹೆಕ್ಕುವುದು, ಓಟದ ಸ್ಪರ್ಧೆ, ಭಾರದ ಗುಂಡು ಎಸೆತ ಹಾಗೂ ಎಲ್ಲಾ ವರ್ಗದವರಿಗೆ ಮಡಕೆ ಒಡೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು.
ವಿಶೇಷ ಚೇತನರು ಎಲ್ಲ ಸ್ಪರ್ಧೆಗಳಲ್ಲೂ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ನೆರೆದಿದ್ದವರು ಚಪ್ಪಾಳೆ, ಶಿಳ್ಳೆಯ ಮೂಲಕ ಸ್ಪರ್ಧಿಗಳಿಗೆ ಪ್ರೋತ್ಸಾಹ ನೀಡಿದರು.
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಶೇಷಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳ ಕಚೇರಿ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಕೊಡಗು ವಿದ್ಯಾಲಯ ಅಪರ್ಚುನಟಿ ಶಾಲೆ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ ತಾಲೂಕು ಮಟ್ಟದ ಆಟೋಟ ಸ್ಪರ್ಧೆ ನಡೆಯಿತು.
ವಿಶೇಷ ಚೇತನ ವಿದ್ಯಾರ್ಥಿ ಜ್ಞಾನೇಶ್ ಶಿಳ್ಳೆ ಹೊಡೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಜಗದೀಶ್, ವಿಶೇಷಚೇತನರ ದಿನಾಚರಣೆಯ ಪೂರ್ವಭಾವಿಯಾಗಿ ತಾಲೂಕು ಮಟ್ಟದ ಆಟೋಟ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ವಿಶೇಷ ಚೇತನರು ಸಮಾಜದ ಅವಿಭಾಜ್ಯ ಅಂಗ. ಅವರನ್ನು ಕಡೆಗಣಿಸದೆ ಎಲ್ಲ ಮನುಷ್ಯರಂತೆ ಪರಿಗಣಿಸಬೇಕು. ಸ್ಪರ್ಧೆಯಲ್ಲಿ ಎಲ್ಲರೂ ಉತ್ಸಾಹದಿಂದ ಭಾಗವಹಿಸಬೇಕು. ಪ್ರತಿಭೆಯನ್ನು ಅನಾವರಣಗೊಳಿಸಲು ಇಲಾಖೆಯಿಂದ ಅವಕಾಶ ನೀಡಲಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿರಿಯ ನಾಗರಿಕರ ಕಾಯ್ದೆಯ ಪ್ರಕಾರ ಹಿರಿಯರು ತಮ್ಮ ಮಕ್ಕಳಿಂದ ನಿರ್ಲಕ್ಷ ್ಯಕ್ಕೆ ಒಳಗಾದರೆ ಟ್ರಿಬ್ಯುನಲ್ ಅರ್ಜಿ ಪಡೆದು ಕೇಸು ದಾಖಲಿಸಲು ಅವಕಾಶವಿದೆ. ಆ ಮೂಲಕ ತಮ್ಮ ಮಕ್ಕಳಿಂದ ತಿಂಗಳಿಗೆ 10 ಸಾವಿರ ರೂ. ಪಡೆಯಬಹುದು. 55-60 ವರ್ಷ ಮೇಲ್ಪಟ್ಟವರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹೇಳಿದರು.
ಜಿಲ್ಲಾ ವಿಶೇಷಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ದೇವರಾಜ್ ಮಾತನಾಡಿ, ವಿಶೇಷ ಚೇತನರು ದೇವರ ಮಕ್ಕಳಂತೆ. ಇವರಿಗಾಗಿ ಸರಕಾರ ಡಿ. 3ನ್ನು ವಿಶೇಷಚೇತನರ ದಿನಾಚರಣೆಯಾಗಿ ಆಚರಿಸಲು ನಿರ್ಧರಿಸಿದೆ. ಅದರಂತೆ ಜಿಲ್ಲೆಯ 3 ತಾಲೂಕಿನಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶೇಷ ಚೇತನರಿಗಾಗಿ ಇಲಾಖೆಯಿಂದ ಹಲವಾರು ಪರಿಕರಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸವಿತಾ ಮಾತನಾಡಿ, ಎಲ್ಲರ ಸಹಕಾರದಿಂದ ವಿಶೇಷ ಚೇತನರಿಗೆ ಆಟೋಟ ಸ್ಪರ್ಧೆ ಹಮ್ಮಿಕೊಳ್ಳಲು ಸಾಧ್ಯವಾಯಿತು. ವಿಶೇಷಚೇತನರೆಂದು ಅವರಿಗೆ ಅನುಕಂಪ ತೋರಿಸುವ ಬದಲು ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಪ್ರಯತ್ನಿಸಬೇಕು. ಪ್ರತಿ ಹಂತದಲ್ಲೂ ಉತ್ತೇಜನ ನೀಡುವ ಮೂಲಕ ಬೆಳವಣಿಗೆ ಹೊಂದಲು ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯ ಅಪರ್ಚುನಟಿ ಶಾಲೆಯ ಪ್ರಾಂಶುಪಾಲರಾದ ವೀಣಾ ನಾರಾಯಣ ಮತ್ತಿತರರು ಹಾಜರಿದ್ದರು.
ಇದೇ ಸಂದರ್ಭ ಆಟೋಟ ಸ್ಪರ್ಧೆ ನಡೆಯಿತು. 6 ರಿಂದ 21 ವರ್ಷದ ಒಳಗಿನ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಕಾಳು ಹೆಕ್ಕುವುದು, ಓಟದ ಸ್ಪರ್ಧೆ, ಭಾರದ ಗುಂಡು ಎಸೆತ ಹಾಗೂ ಎಲ್ಲಾ ವರ್ಗದವರಿಗೆ ಮಡಕೆ ಒಡೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು.
ವಿಶೇಷ ಚೇತನರು ಎಲ್ಲ ಸ್ಪರ್ಧೆಗಳಲ್ಲೂ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ನೆರೆದಿದ್ದವರು ಚಪ್ಪಾಳೆ, ಶಿಳ್ಳೆಯ ಮೂಲಕ ಸ್ಪರ್ಧಿಗಳಿಗೆ ಪ್ರೋತ್ಸಾಹ ನೀಡಿದರು.