ಆ್ಯಪ್ನಗರ

ಮರ ಕಡಿಯದಂತೆ ಸಿಎಂ ಸೂಚನೆ

ನಗರದ ಹೊರ ವಲಯದಲ್ಲಿ ನಿರ್ಮಿಸಲಾಗಿರುವ ಜಿಪಂ ಕಟ್ಟಡ ಬಳಿ ಮರಗಳನ್ನು ಕಡಿಯುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

Vijaya Karnataka 8 Jun 2019, 5:00 am
ಮಡಿಕೇರಿ: ನಗರದ ಹೊರ ವಲಯದಲ್ಲಿ ನಿರ್ಮಿಸಲಾಗಿರುವ ಜಿಪಂ ಕಟ್ಟಡ ಬಳಿ ಮರಗಳನ್ನು ಕಡಿಯುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
Vijaya Karnataka Web tree cutting
ಮರ ಕಡಿಯದಂತೆ ಸಿಎಂ ಸೂಚನೆ


ಈ ಬಗ್ಗೆ ತಮ್ಮ ಟ್ಟಿಟರ್‌ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಕೊಡಗು ಜಿಲ್ಲೆಯಲ್ಲಿ 800 ಮರಗಳನ್ನು ಕಡಿಯುವ ಬಗ್ಗೆ ಮಾಧ್ಯಮದಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ್ದು, ಮರಗಳನ್ನು ಕಡಿಯುದನ್ನು ನಿಲ್ಲಿಸಿ, ಈ ಕುರಿತು ವರದಿ ನೀಡುವಂತೆ ಮುಖ್ಯ ಅರಣ್ಯ ಸಂರಕ್ಷ ಣಾಧಿಕಾರಿಗೆ ಸೂಚಿಸಿದ್ದಾಗಿ ತಿಳಿಸಿದ್ದಾರೆ.

ಪರಿಸರ ದಿನದ ಸಂದರ್ಭವೇ ಗೃಹ ಮಂಡಳಿಗೆ ಸೇರಿದೆ ಎನ್ನಲಾದ ಜಾಗದಲ್ಲಿ ನೂರಾರು ಮರಗಳನ್ನು ಕಡಿಯಲಾಗಿತ್ತು. ಇದಕ್ಕೆ ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಸ್ಥಳಕ್ಕೆ ಗುರುವಾರ ಮಾಜಿ ಸಚಿವ ಎಂ.ಸಿ ನಾಣಯ್ಯ, ಗ್ರೀನ್‌ ಸಿಟಿ ಫೋರಂನ ಪದಾಧಿಕಾರಿಗಳು ಭೇಟಿ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ