ವಾಹನದ ಮೇಲೆ ಮರ ಬಿದ್ದು : ಕಾರ್ಮಿಕ ಸಾವು
ಪಾಲಿಬೆಟ್ಟ ತಿತಿಮತಿ ಸಂಪರ್ಕ ರಸ್ತೆಯ ಹೊಸಳ್ಳಿ ಬಳಿ ಕೆಲಸ ಮುಗಿಸಿ ಮನೆಗೆ ತೆರೆಳುತ್ತಿದ್ದ ಸಂದರ್ಭ ಚಲಿಸುತ್ತಿದ್ದ ವಾಹನದ ಮೇಲೆ ಸಿಲ್ವರ್ ಮರ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟು, ಮೂರು ಜನರಿಗೆ ಗಂಭೀರ ಗಾಯಗಳಾಗಿವೆ.
Vijaya Karnataka 20 Jun 2018, 5:00 am
ಗೋಣಿಕೊಪ್ಪಲು: ಪಾಲಿಬೆಟ್ಟ ತಿತಿಮತಿ ಸಂಪರ್ಕ ರಸ್ತೆಯ ಹೊಸಳ್ಳಿ ಬಳಿ ಕೆಲಸ ಮುಗಿಸಿ ಮನೆಗೆ ತೆರೆಳುತ್ತಿದ್ದ ಸಂದರ್ಭ ಚಲಿಸುತ್ತಿದ್ದ ವಾಹನದ ಮೇಲೆ ಸಿಲ್ವರ್ ಮರ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟು, ಮೂರು ಜನರಿಗೆ ಗಂಭೀರ ಗಾಯಗಳಾಗಿವೆ.
ಅನುಗೋಡು ನಿವಾಸಿ ರಾಜು (35) ಮೃತ. ಪಾಲಿಬೆಟ್ಟ ಹೊಸಳ್ಳಿ ಎಂಬ ಜಾಗದಲ್ಲಿ ತೋಟದ ಕೆಲಸ ಮುಗಿಸಿ ಅನುಗೋಡುವಿನ ತಮ್ಮ ಊರಿಗೆ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಸಿಲ್ವರ್ ಮರ ಬಿದ್ದು, ಮೃತಪಟ್ಟಿದ್ದಾರೆ. ವಾಹನದಲ್ಲಿ ಸುಮಾರು 13 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಚಾಲಕನ ಸಮೀಪವೇ ಕುಳಿತ್ತಿದ್ದ ರಾಜು ತಲೆಯ ಭಾಗಕ್ಕೆ ಮರ ಬಿದ್ದಿದ್ದರಿಂದ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಭಾಗದಲ್ಲಿ ಕುಳಿತಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಇವರು ದುಬಾರೆ ಎಸ್ಟೇಟ್ನ ಕಾರ್ಮಿಕರಾಗಿದ್ದು, ಅನುಗೋಡು ನಿವಾಸಿಗಳಾಗಿದ್ದಾರೆ. ಪ್ರಕರಣ ದಾಖಲಾಗಿದೆ.
ಅನುಗೋಡು ನಿವಾಸಿ ರಾಜು (35) ಮೃತ. ಪಾಲಿಬೆಟ್ಟ ಹೊಸಳ್ಳಿ ಎಂಬ ಜಾಗದಲ್ಲಿ ತೋಟದ ಕೆಲಸ ಮುಗಿಸಿ ಅನುಗೋಡುವಿನ ತಮ್ಮ ಊರಿಗೆ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಸಿಲ್ವರ್ ಮರ ಬಿದ್ದು, ಮೃತಪಟ್ಟಿದ್ದಾರೆ. ವಾಹನದಲ್ಲಿ ಸುಮಾರು 13 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಚಾಲಕನ ಸಮೀಪವೇ ಕುಳಿತ್ತಿದ್ದ ರಾಜು ತಲೆಯ ಭಾಗಕ್ಕೆ ಮರ ಬಿದ್ದಿದ್ದರಿಂದ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಭಾಗದಲ್ಲಿ ಕುಳಿತಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಇವರು ದುಬಾರೆ ಎಸ್ಟೇಟ್ನ ಕಾರ್ಮಿಕರಾಗಿದ್ದು, ಅನುಗೋಡು ನಿವಾಸಿಗಳಾಗಿದ್ದಾರೆ. ಪ್ರಕರಣ ದಾಖಲಾಗಿದೆ.