ಆ್ಯಪ್ನಗರ

ಕೊಡಗು: ದುಬಾರೆ ಪ್ರವಾಸಿ ತಾಣಕ್ಕೆ ಬಂದಿದ್ದ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಸಾವು

​​ಶಾಲೆಯ ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡದ 39 ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಪ್ರವಾಸಕ್ಕೆಂದು ದುಬಾರೆಗೆ ಆಗಮಿಸಿದ್ದ ಸಂದರ್ಭ ತಂಡದಲ್ಲಿದ್ದ ಶ್ರೇಯಸ್‌ ಮತ್ತು ಲೆನಿನ್‌ ತಂಡದಿಂದ ದೂರ ಉಳಿದು ಆಳವಾದ ಪ್ರದೇಶದಲ್ಲಿ ನೀರಿಗೆ ಇಳಿದಿದ್ದಾರೆ

Vijaya Karnataka Web 4 Mar 2020, 9:58 pm
ಕುಶಾಲನಗರ: ದುಬಾರೆ ಪ್ರವಾಸಿ ತಾಣಕ್ಕೆ ಪ್ರವಾಸಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
Vijaya Karnataka Web ಪೊಲೀಸ್‌
ಪೊಲೀಸ್‌


ಗೋಣಿಕೊಪ್ಪದ ಕಳತ್ಮಾಡು ಲಯನ್ಸ್‌ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್‌ ಮತ್ತು ಲೆನಿನ್‌ ಮೃತ ವಿದ್ಯಾರ್ಥಿಗಳು.

ಶಾಲೆಯ ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡದ 39 ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಪ್ರವಾಸಕ್ಕೆಂದು ದುಬಾರೆಗೆ ಆಗಮಿಸಿದ್ದ ಸಂದರ್ಭ ತಂಡದಲ್ಲಿದ್ದ ಶ್ರೇಯಸ್‌ ಮತ್ತು ಲೆನಿನ್‌ ತಂಡದಿಂದ ದೂರ ಉಳಿದು ಆಳವಾದ ಪ್ರದೇಶದಲ್ಲಿ ನೀರಿಗೆ ಇಳಿದಿದ್ದಾರೆ ಎನ್ನಲಾಗಿದೆ. ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು , ದುಬಾರೆ ರಾರ‍ಯಫ್ಟ್‌ ಸಿಬ್ಬಂದಿ ನೆರವಿನೊಂದಿಗೆ ಮೃತದೇಹಗಳನ್ನು ನೀರಿನಿಂದ ಹೊರ ತೆಗೆಯಲಾಯಿತು.

ಶ್ರೇಯಸ್‌ 9ನೇ ತರಗತಿ ವಿದ್ಯಾರ್ಥಿಯಾಗಿದ್ದು , ಲೆನಿನ್‌ 10ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಈ ಸಂಬಂಧ ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ