ಆ್ಯಪ್ನಗರ

ವಿಧಾನ ಪರಿಷತ್‌: ಚುನಾವಣೆ ವೇಳಾ ಪಟ್ಟಿ ಪ್ರಕಟ

ಕರ್ನಾಟಕ ವಿಧಾನ ಪರಿಷತ್ತಿನ ನೈಋುತ್ಯ ಪದವೀಧರರ ಕ್ಷೇತ್ರದ, ನೈಋುತ್ಯ ಶಿಕ್ಷ ಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷ ಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ.

Vijaya Karnataka 17 May 2018, 5:00 am
ಮಡಿಕೇರಿ: ಕರ್ನಾಟಕ ವಿಧಾನ ಪರಿಷತ್ತಿನ ನೈಋುತ್ಯ ಪದವೀಧರರ ಕ್ಷೇತ್ರದ, ನೈಋತ್ಯ ಶಿಕ್ಷ ಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ.
Vijaya Karnataka Web vidhana praishat election time table published
ವಿಧಾನ ಪರಿಷತ್‌: ಚುನಾವಣೆ ವೇಳಾ ಪಟ್ಟಿ ಪ್ರಕಟ


ಚುನಾವಣಾ ಆಯೋಗ ಮೇ 15ರಂದು ಅಧಿಸೂಚನೆ ಹೊರಡಿಸಿದೆ. ಮೇ 22ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 23ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಮೇ 25ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ. ಜೂನ್‌ 8 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಜೂನ್‌ 12 ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಪಿ.ಹೇಮಲತಾ ತಿಳಿಸಿದ್ದಾರೆ.

17 ರಿಂದ ಬೇಸಿಗೆ ಶಿಬಿರ

ಮಡಿಕೇರಿ: ನಗರದ ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಮೇ 17 ರಿಂದ 26ರ ವರೆಗೆ 5 ರಿಂದ 16 ವರ್ಷದ ಮಕ್ಕಳಿಗಾಗಿ ಅರೆಕಾಡು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಆಯೋಜಿಸಲಾಗಿದೆ. ಆಸಕ್ತ ಮಕ್ಕಳು ಮೊ: 7349116730 ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ದಮಯಂತಿ ತಿಳಿಸಿದ್ದಾರೆ.

ಪಕ್ಷಿ ಸಂಕುಲ ರಕ್ಷಿಸಿ ಅಭಿಯಾನ

ಮಡಿಕೇರಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಅಪರೂಪದ ಪಕ್ಷಿಗಳ ರಕ್ಷ ಣೆಗಾಗಿ ಬೇಸಿಗೆ ಕಾಲದಲ್ಲಿ ಅವುಗಳ ನೀರಿನ ದಾಹ ನೀಗಿಸುವ ಸಲುವಾಗಿ ರಾಜ್ಯಾದ್ಯಂತ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಭಿಯಾನ ಹಮ್ಮಿಕೊಂಡಿದೆ.

ಮನೆಯ ಮಹಡಿಯ ಮೇಲೆ ತೆರೆದ ಸ್ಥಳಗಳಲ್ಲಿ, ಮರ-ಗಿಡಗಳಲ್ಲಿ, ನೀರು-ಆಹಾರ ಪೂರೈಕೆಯ ಸಾಧನ/ಬಾಟಲ್‌, ಪಾತ್ರೆಗಳನ್ನಿಟ್ಟು ಪಕ್ಷಿಗಳ ಹಸಿವು, ದಾಹ ನೀಗಿಸಿ, ಪಕ್ಷಿಗಳ ಉಳಿವಿಗಾಗಿ ಕೃತಕ ಗೂಡುಗಳನ್ನು ಸಿದ್ಧಪಡಿಸಿ ಅವುಗಳಿಗೆ ಅನುಕೂಲ ಮಾಡಬೇಕು.

ಬೇಟೆಯ ಹೆಸರಿನಲ್ಲಿ ಪ್ರಾಣಿ-ಪಕ್ಷಿಗಳನ್ನು ಬಲಿ ಕೊಡದೆ ಅವುಗಳ ಸಂತತಿ ಉಳಿಸಬೇಕು ಹಾಗೂ ಅವನತಿಯ ಅಂಚಿನಲ್ಲಿರುವ ಪಕ್ಷಿಗಳ ರಕ್ಷ ಣೆಗೆ ಪಣ ತೋಡಬೇಕು ಮತ್ತು ಜನಸಾಮಾನ್ಯರು, ಪರಿಸರ ಪ್ರೇಮಿಗಳು ಹಾಗೂ ಪಕ್ಷಿ ಪ್ರಿಯರು ಈ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಯಾಗಿಸಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ್‌ ಬಿ.ಕಡ್ಲೇವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ