ಆ್ಯಪ್ನಗರ

ಪ್ರವಾಹ ಪೀಡಿತ ಪ್ರದೇಶಕ್ಕೆ ವೀರೇಂದ್ರ ಹೆಗ್ಗಡೆ ಭೇಟಿ

ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಾದ ಜೋಡುಪಾಲ, ಮದೆನಾಡು, ಕಾಟಕೇರಿ, ಉದಯಗಿರಿ, ಎರಡನೇ ಮೊಣ್ಣಂಗೇರಿಗೆ ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮ ವಿಭೂಷಣ ಡಾ. ವೀರೇಂದ್ರ ಹೆಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka 11 Jan 2019, 9:43 pm
ಮಡಿಕೇರಿ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಾದ ಜೋಡುಪಾಲ, ಮದೆನಾಡು, ಕಾಟಕೇರಿ, ಉದಯಗಿರಿ, ಎರಡನೇ ಮೊಣ್ಣಂಗೇರಿಗೆ ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮ ವಿಭೂಷಣ ಡಾ. ವೀರೇಂದ್ರ ಹೆಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web visit virendra hegde to the flood affected area
ಪ್ರವಾಹ ಪೀಡಿತ ಪ್ರದೇಶಕ್ಕೆ ವೀರೇಂದ್ರ ಹೆಗ್ಗಡೆ ಭೇಟಿ


ಇದೇ ವೇಳೆ ಡಾ. ವೀರೇಂದ್ರ ಹೆಗಡೆ ಎದುರು ನೂರಾರು ಸಂತ್ರಸ್ತರು ಅಳಲು ತೋಡಿಕೊಂಡರು. ಮನೆ, ತೋಟ ಕಳೆದುಕೊಂಡ ಸಂತ್ರಸ್ತರು ತಮ್ಮ ಸಮಸ್ಯೆ ಹೇಳಿಕೊಂಡು, ಕಣ್ಣೀರು ಹಾಕಿದರು.

ಈ ಸಂದರ್ಭ ಮಾತನಾಡಿದ ವೀರೇಂದ್ರ ಹೆಗಡೆ, ಪ್ರಕೃತಿ ಮುನಿದರೆ ಏನಾಗುತ್ತದೆ ಎಂಬುದಕ್ಕೆ ಕೊಡಗಿನ ಘಟನೆ ನಿದರ್ಶನ. ಪ್ರಕೃತಿ ಮುನಿದರೆ ಯಾವುದೇ ಸರಕಾರ ಪರಿಹಾರ ನೀಡಲು ಸಾಧ್ಯವಿಲ್ಲ. ಇಲ್ಲಿನ ಜನರ ನೋವಿಗೆ ಎಲ್ಲರೂ ನೆರವಾಗಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೆರವು ನೀಡುತ್ತೇವೆ ಎಂದರು.

ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಈಗ ಉಳಿದವರಿಗೆ ಪರಿಹಾರ ನೀಡುವ ಕಾರ್ಯವಾಗಬೇಕು. ಅಲ್ಪ ಪ್ರಮಾಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಹಾಯ ಮಾಡುತ್ತಿದೆ. ಇದೇ ರೀತಿ ಸಂತ್ರಸ್ತರಿಗೆ ಹಲವು ಸಂಘಸಂಸ್ಥೆಗಳು ನೆರವು ನೀಡಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ