ಮಡಿಕೇರಿ
ಮಡಿಕೇರಿ ಹೊಸ ಮಾರುಕಟ್ಟೆ ಕಾಮಗಾರಿಯನ್ನು 15 ದಿನಗಳಲ್ಲಿ ಪೂರ್ಣಗೊಳಿಸದೇ ಇದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾರ್ಕೆಟ್ ಸಂತೆ ವ್ಯಾಪಾರಿಗಳ ಹಿತರಕ್ಷ ಣಾ ಸಮಿತಿ ಎಚ್ಚರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾರ್ಕೆಟ್ ಸಂತೆ ವ್ಯಾಪಾರಿಗಳ ಹಿತರಕ್ಷ ಣಾ ಸಮಿತಿ ಕಾರ್ಯದರ್ಶಿ ಎಂ.ಎ ರಜಾ‚ಕ್, ''ಮಡಿಕೇರಿಯಲ್ಲಿ ನಿರ್ಮಾಣಗೊಂಡಿರುವ ನೂತನ ಮಾರುಕಟ್ಟೆ ಉದ್ಘಾಟನೆಗೊಂಡಿದ್ದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ನಗರಸಭೆಯ ನಿರ್ಲಕ್ಷ ್ಯದಿಂದ ಸಾರ್ವಜನಿಕರು ಕಷ್ಟ ಅನುಭವಿಸುವಂತಾಗಿದೆ. ಬಡ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ನೂತನ ಮಾರುಕಟ್ಟೆಯ ಅನುಕೂಲ ದೊರೆಯದಂತೆ ಮಾಡುತ್ತಿರುವ ನಗರಸಭೆ ವಿಳಂಬ ನೀತಿ ಅನುಸರಿಸುತ್ತಿದೆ,'' ಎಂದು ಅಸಮಾಧಾನ ವ್ಯಕ್ತಪಡಿಸಿದರು.
''ಜನರ ತೆರಿಗೆ ಹಣವನ್ನು ವಿನಾಕಾರಣ ಪೋಲು ಮಾಡದೆ ಆದಷ್ಟು ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಬೇಕು. ಆ ಮೂಲಕ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅನುವು ಮಾಡಿಕೊಡಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಕಡೆ ಗಮನ ಹರಿಸಬೇಕು. ಇಲ್ಲವಾದಲ್ಲಿ ಸಂತೆ ವ್ಯಾಪಾರಸ್ಥರು ಹಾಗೂ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಸಮಿತಿಯಿಂದ ಸಂತೆ ಬಂದ್ ಮಾಡಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು,'' ಎಂದು ಎಚ್ಚರಿಸಿದರು.
''ಕೊಡಗಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ನಂತರ ಅಂಗಡಿ ಮಾಲೀಕರು ಗ್ರಾಹಕರಿಲ್ಲದೆ ಪರದಾಡುವಂತಾಗಿದೆ. ಹಾಗಾಗಿ ನಗರಸಭೆ ಬಾಡಿಗೆ ವಸೂಲಿ ಮಾಡುವಾಗ ಸೌಜನ್ಯದಿಂದ ವರ್ತಿಸಬೇಕು ಹಾಗೂ ನಗರಸಭೆಯಿಂದ ಕನಿಷ್ಠ 3 ತಿಂಗಳ ಬಾಡಿಗೆಯನ್ನು ಮನ್ನಾ ಮಾಡಬೇಕು,'' ಎಂದು ಆಗ್ರಹಿಸಿದರು.
ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ಮಾತನಾಡಿ, '' 4 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ನೂತನ ಮಾರುಕಟ್ಟೆ ಕಾಮಗಾರಿ ಇದೀಗ ಸ್ಥಗಿತಗೊಂಡಿದೆ. ಸದ್ಯ ಪಾಳುಬಿದ್ದ ಕಟ್ಟಡದಂತಾಗಿದ್ದು, ಕಸದ ರಾಶಿಯಿಂದ ಅಶುಚಿತ್ವ ಉಂಟಾಗಿದೆ,'' ಎಂದರು.
ಸಮಿತಿಯ ಸಹ ಕಾರ್ಯದರ್ಶಿ ಮಹಮ್ಮದ್ ಆಲಿ, ಸದಸ್ಯ ಮಹಮ್ಮದ್ ಶರೀಫ್ ಹಾಜರಿದ್ದರು.
ಮಡಿಕೇರಿ ಹೊಸ ಮಾರುಕಟ್ಟೆ ಕಾಮಗಾರಿಯನ್ನು 15 ದಿನಗಳಲ್ಲಿ ಪೂರ್ಣಗೊಳಿಸದೇ ಇದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾರ್ಕೆಟ್ ಸಂತೆ ವ್ಯಾಪಾರಿಗಳ ಹಿತರಕ್ಷ ಣಾ ಸಮಿತಿ ಎಚ್ಚರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾರ್ಕೆಟ್ ಸಂತೆ ವ್ಯಾಪಾರಿಗಳ ಹಿತರಕ್ಷ ಣಾ ಸಮಿತಿ ಕಾರ್ಯದರ್ಶಿ ಎಂ.ಎ ರಜಾ‚ಕ್, ''ಮಡಿಕೇರಿಯಲ್ಲಿ ನಿರ್ಮಾಣಗೊಂಡಿರುವ ನೂತನ ಮಾರುಕಟ್ಟೆ ಉದ್ಘಾಟನೆಗೊಂಡಿದ್ದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ನಗರಸಭೆಯ ನಿರ್ಲಕ್ಷ ್ಯದಿಂದ ಸಾರ್ವಜನಿಕರು ಕಷ್ಟ ಅನುಭವಿಸುವಂತಾಗಿದೆ. ಬಡ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ನೂತನ ಮಾರುಕಟ್ಟೆಯ ಅನುಕೂಲ ದೊರೆಯದಂತೆ ಮಾಡುತ್ತಿರುವ ನಗರಸಭೆ ವಿಳಂಬ ನೀತಿ ಅನುಸರಿಸುತ್ತಿದೆ,'' ಎಂದು ಅಸಮಾಧಾನ ವ್ಯಕ್ತಪಡಿಸಿದರು.
''ಜನರ ತೆರಿಗೆ ಹಣವನ್ನು ವಿನಾಕಾರಣ ಪೋಲು ಮಾಡದೆ ಆದಷ್ಟು ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಬೇಕು. ಆ ಮೂಲಕ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅನುವು ಮಾಡಿಕೊಡಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಕಡೆ ಗಮನ ಹರಿಸಬೇಕು. ಇಲ್ಲವಾದಲ್ಲಿ ಸಂತೆ ವ್ಯಾಪಾರಸ್ಥರು ಹಾಗೂ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಸಮಿತಿಯಿಂದ ಸಂತೆ ಬಂದ್ ಮಾಡಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು,'' ಎಂದು ಎಚ್ಚರಿಸಿದರು.
''ಕೊಡಗಿನಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ನಂತರ ಅಂಗಡಿ ಮಾಲೀಕರು ಗ್ರಾಹಕರಿಲ್ಲದೆ ಪರದಾಡುವಂತಾಗಿದೆ. ಹಾಗಾಗಿ ನಗರಸಭೆ ಬಾಡಿಗೆ ವಸೂಲಿ ಮಾಡುವಾಗ ಸೌಜನ್ಯದಿಂದ ವರ್ತಿಸಬೇಕು ಹಾಗೂ ನಗರಸಭೆಯಿಂದ ಕನಿಷ್ಠ 3 ತಿಂಗಳ ಬಾಡಿಗೆಯನ್ನು ಮನ್ನಾ ಮಾಡಬೇಕು,'' ಎಂದು ಆಗ್ರಹಿಸಿದರು.
ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ಮಾತನಾಡಿ, '' 4 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ನೂತನ ಮಾರುಕಟ್ಟೆ ಕಾಮಗಾರಿ ಇದೀಗ ಸ್ಥಗಿತಗೊಂಡಿದೆ. ಸದ್ಯ ಪಾಳುಬಿದ್ದ ಕಟ್ಟಡದಂತಾಗಿದ್ದು, ಕಸದ ರಾಶಿಯಿಂದ ಅಶುಚಿತ್ವ ಉಂಟಾಗಿದೆ,'' ಎಂದರು.
ಸಮಿತಿಯ ಸಹ ಕಾರ್ಯದರ್ಶಿ ಮಹಮ್ಮದ್ ಆಲಿ, ಸದಸ್ಯ ಮಹಮ್ಮದ್ ಶರೀಫ್ ಹಾಜರಿದ್ದರು.