ಆ್ಯಪ್ನಗರ

ಕಾವೇರಿ ತೀರ್ಥೋದ್ಭವ ಸಂದರ್ಭದಲ್ಲೇ ಕೊಡಗಿನಲ್ಲಿ ಭಾರಿ ಮಳೆ ನಿರೀಕ್ಷೆ: ಯೆಲ್ಲೋ ಅಲರ್ಟ್‌ ಘೋಷಣೆ

ಕಳೆದ ಆಗಸ್ಟ್‌ನಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿ ನಷ್ಟವಾಗಿತ್ತು. ಈಗ ಕಾವೇರಿ ತೀಥೋದ್ಭವ ಸಂದರ್ಭದಲ್ಲೇ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

Vijaya Karnataka Web 17 Oct 2019, 9:51 pm
ಮಡಿಕೇರಿ: ಈಗಾಗಲೇ ಭಾರಿ ಮಳೆಯಿಂದ ಒದ್ದೆ ತೊಪ್ಪೆಯಾಗಿರುವ ಕೊಡಗು ಜಿಲ್ಲೆಯಲ್ಲಿ ಕಾವೇರಿ ತೀರ್ಥೋದ್ಭವ ಸಂದರ್ಭದಲ್ಲೇ ಮತ್ತೆ ವರುಣನ ಅಬ್ಬರ ಹೆಚ್ಚಾಗುವ ನಿರೀಕ್ಷೆ ಇದೆ.
Vijaya Karnataka Web ಮಳೆ ಮೋಡ
ಮಳೆ ಮೋಡ


ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯಕ್ಕಿಂತಲೂ ಹೆಚ್ಚು ಮಳೆಯಾಗಲಿದೆ ಎಂಬ ಹವಾಮಾನ ಇಲಾಖೆ ವರದಿ ಆಧರಿಸಿ ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.

ಅ.17 ರಿಂದ ಅ.19 ರ ತನಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗಿನಲ್ಲಿ 64.5 ಮಿ.ಮೀ. ನಿಂದ 115.50 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ

ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಮೋಡಗಳು ಚುರುಕುಗೊಂಡಿವೆ.

ಕಳೆದ ಆಗಸ್ಟ್‌ನಲ್ಲಿ ಸುರಿದ ಭಾರಿ ಮಳೆಯಿಂದ ಕರ್ನಾಟಕದಲ್ಲಿ ಭಾರಿ ನಷ್ಟ ಸಂಭವಿಸಿತ್ತು. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ, ಬೆಳೆ ನಷ್ಟ ಕೂಡ ಉಂಟಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ