ಆ್ಯಪ್ನಗರ

‘ಯೋಗದಿಂದ ಆತ್ಮಾಭಿಮಾನ ಸಾಧ್ಯ’

ಯೋಗದಿಂದ ಆರೋಗ್ಯದ ಜತೆಗೆ ಆತ್ಮಾಭಿಮಾನ ಬೆಳೆಸಿಕೊಳ್ಳಲು ಸಾಧ್ಯ ಎಂದು ಮೈಸೂರಿನ ಪರಮಹಂಸ ಯೋಗ ತೆರಪಿ ಸಂಸ್ಥೆಯ ಸ್ಥಾಪಕ ನಿರ್ದೇಶಕ ಡಾ. ಎ.ಆರ್‌. ಸೀತಾರಾಮ್‌ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka 22 Jan 2018, 5:00 am

ಮಡಿಕೇರಿ: ಯೋಗದಿಂದ ಆರೋಗ್ಯದ ಜತೆಗೆ ಆತ್ಮಾಭಿಮಾನ ಬೆಳೆಸಿಕೊಳ್ಳಲು ಸಾಧ್ಯ ಎಂದು ಮೈಸೂರಿನ ಪರಮಹಂಸ ಯೋಗ ತೆರಪಿ ಸಂಸ್ಥೆಯ ಸ್ಥಾಪಕ ನಿರ್ದೇಶಕ ಡಾ. ಎ.ಆರ್‌. ಸೀತಾರಾಮ್‌ ಅಭಿಪ್ರಾಯಪಟ್ಟಿದ್ದಾರೆ.

ಫೀಲ್ಡ್‌ ಮಾರ್ಷಲ್‌ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಮಾನವಪ್ರಜ್ಞೆ ಮತ್ತು ಯೋಗವಿಜ್ಞಾನ ವಿಭಾಗದಿಂದ ಧರ್ಮನಿಧಿ ಯೋಗಪೀಠ ಎಂಬ ಪ್ರಚಾರೋಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಯೋಗಕ್ಕೆ ಹೆಚ್ಚು ಮಾನ್ಯತೆ ಇದ್ದು, ದೇಶದಾದ್ಯಂತ ಪ್ರಸಿದ್ಧಿಯನ್ನು ಪಡೆದಿದೆ. ಯೋಗದಿಂದ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬುಹುದು ಜತೆಗೆ ಭಗವದ್ಗೀತೆ, ಬೈಬಲ್‌, ಕುರಾನ್‌ಗಳನ್ನು ಓದುವ ಮೂಲಕ ಒತ್ತಡಗಳನ್ನು ದೂರಮಾಡಲು, ಏಕಾಗ್ರತೆ ಬೆಳೆಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಈ ಸಂದರ್ಭ ಡಾ. ಸೀತಾರಾಮ್‌ ವಿದ್ಯಾರ್ಥಿಗಳೊಂದಿಗೆ ಯೋಗ ಪ್ರದರ್ಶನ ನೀಡಿದರು.

ಪರಮಹಂಸ ಯೋಗ ತೆರಫಿ ಸಂಸ್ಥೆಯ ಪ್ರಮುಖರಾದ ಮಹೇಶ್‌, ಪ್ರಾಂಶುಪಾಲರಾದ ಡಾ. ಪಾರ್ವತಿ ಅಪ್ಪಯ್ಯ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ