ಆ್ಯಪ್ನಗರ

ಯರಗೋಳ್‌ಗೆ ಹೆಚ್ಚುವರಿ ಅನುದಾನ ಮಂಜೂರಿಗೆ ಕ್ರಮ

ಕುಡಿವ ನೀರು ಪೂರೈಸುವ ಯರಗೋಳ್‌ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು, ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಪ್ರಸಕ್ತ ಸಾಲಿನ ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದ್ದಾರೆ.

Vijaya Karnataka 15 Jun 2019, 5:00 am
ಕೋಲಾರ: ಕುಡಿವ ನೀರು ಪೂರೈಸುವ ಯರಗೋಳ್‌ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು, ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಪ್ರಸಕ್ತ ಸಾಲಿನ ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದ್ದಾರೆ.
Vijaya Karnataka Web action for grant of additional grants to yaragol
ಯರಗೋಳ್‌ಗೆ ಹೆಚ್ಚುವರಿ ಅನುದಾನ ಮಂಜೂರಿಗೆ ಕ್ರಮ


ಬೆಂಗಳೂರಿನಲ್ಲಿ ಕೋಲಾರ ನಗರ, ಬಂಗಾರಪೇಟೆ ಮತ್ತು ಮಾಲೂರು ಪಟ್ಟಣಕ್ಕೆ ಕುಡಿವ ನೀರು ಪೂರೈಸುವ ನಿಟ್ಟಿನಲ್ಲಿ ರೂಪಿಸಿರುವ ಯರಗೋಳ್‌ ಯೋಜನೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಈ ಹಿಂದಿನ ಸಭೆಯಲ್ಲಿ ನೀಡಿರುವ ಸೂಚನೆಯಂತೆ ಜಲ ಶುದ್ಧೀಕರಣ ಘಟಕ, ಮೂರು ಪಂಪ್‌ ಹೌಸ್‌, ನೆಲಮಟ್ಟದ 6 ಲಕ್ಷ ಲೀಟರ್‌ ಸಾಮರ್ಥ್ಯ‌ದ ಜಲ ಸಂಗ್ರಹಗಾರಗಳನ್ನು ನಿರ್ಮಾಣ ಮಾಡಲು ಟೆಂಡರ್‌ ಕರೆದು, ಕಾರ್ಯಾದೇಶ ನೀಡಲಾಗಿದೆ. ಕಾಮಗಾರಿ ಆರಂಭವಾಗಿದೆ ಎಂಬ ಮಾಹಿತಿ ಅಧಿಕಾರಿಗಳು ನೀಡಿದರು.

ಕೋಲಾರದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ನಾಲ್ಕು ಮೇಲ್ಮಟ್ಟದ ಜಲ ಸಂಗ್ರಹಗಾರ (ಓವರ್‌ ಹೆಡ್‌ ಟ್ಯಾಂಕ್‌), 5 ಪಂಪ್‌ ಹೌಸ್‌, 11 ಕೆವಿ ಎಕ್ಸ್‌ಪ್ರೆಸ್‌ ಫೀಡರ್‌ ಮುಖ್ಯ ಮಾರ್ಗದ ಕಾಮಗಾರಿಗಳನ್ನು ಕೈಗೊಳ್ಳಲು ಕೂಡಲೆ ಟೆಂಡರ್‌ ಕರೆಯಬೇಕು. ಡಿಸೆಂಬರ್‌ನೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ನಾನಾ ಕಾರಣಗಳಿಗಾಗಿ ಈ ಯೋಜನೆ ಕಾಮಗಾರಿ ಕುಂಠಿತಗೊಂಡಿದೆ. ಈ ಯೋಜನೆಯ ಅನುಮೋದಿತ ಅಂದಾಜು ವೆಚ್ಚ 79.92 ಕೋಟಿ ರೂಪಾಯಿ ಇದ್ದದ್ದು, 127.76 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಈ ಪರಿಷ್ಕೃತ ಮೊತ್ತ ಅನಿವಾರ್ಯವಾಗಿದ್ದು, ಈ ಕಾಮಗಾರಿ ಪೂರ್ಣಗೊಳ್ಳಬೇಕಾದರೆ ಸರಕಾರ ಇದನ್ನು ಭರಿಸಬೇಕಾಗುತ್ತದೆ. ಹೆಚ್ಚುವರಿ ಅನುದಾನಕ್ಕೆ ಸಂಬಂಧಪಟ್ಟ ಪ್ರಸ್ತಾವನೆಯನ್ನು ಅತ್ಯಂತ ತ್ವರಿತವಾಗಿ ಸಚಿವ ಸಂಪುಟದ ಮುಂದೆ ಅನುಮೋದನೆಗಾಗಿ ಮಂಡಿಸಲು ಆದೇಶಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ