ಆ್ಯಪ್ನಗರ

ಪ್ರಾಣಿಗಳಿಂದ ಬೆಳೆನಾಶ: ಎಕರೆಗೆ 5 ಲಕ್ಷ ರೂ. ಪರಿಹಾರಕ್ಕೆ ಆಗ್ರಹ

ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ, ಬೆಳೆ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 5ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತ ಸಂಘ ಅರಣ್ಯ ಇಲಾಖೆ ವ್ಯವಸ್ಥಾಪಕರಿಗೆ ಮನವಿ ನೀಡಿ ಅಗ್ರಹಿಸಿತು.

Vijaya Karnataka 16 Jul 2019, 3:34 pm
ಕೋಲಾರ : ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ, ಬೆಳೆ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 5ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತ ಸಂಘ ಅರಣ್ಯ ಇಲಾಖೆ ವ್ಯವಸ್ಥಾಪಕರಿಗೆ ಮನವಿ ನೀಡಿ ಅಗ್ರಹಿಸಿತು.
Vijaya Karnataka Web animal husbandry rs 5 lakh per acre the urge for relief
ಪ್ರಾಣಿಗಳಿಂದ ಬೆಳೆನಾಶ: ಎಕರೆಗೆ 5 ಲಕ್ಷ ರೂ. ಪರಿಹಾರಕ್ಕೆ ಆಗ್ರಹ


ಮನವಿ ಸಲ್ಲಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಒಂದು ಕಡೆ ಬೀಕರ ಬರಗಾಲ ಮತ್ತೊಂದೆಡೆ ಆಲಿಕಲ್ಲು ಮಳೆ ಮತ್ತು ಬಿರುಗಾಳಿಗೆ ಬೆಳೆ ನಾಶವಾಗಿ ಸಂಕಷ್ಟದಲ್ಲಿರುವ ರೈತರಿಗೆ ಕಾಡು ಪ್ರಾಣಿಗಳ ಹಾವಳಿಯಿಂದಾಗಿ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದರೂ ಸರಕಾರ ತನ್ನ ನಿರ್ಲಕ್ಷ ್ಯ ಮುಂದುವರಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದಾಗಿ ಕೃಷಿ ಕ್ಷೇತ್ರ ದಿನೆ,ದಿನೇ ಅವನತಿಯತ್ತ ಮುಖ ಮಾಡುತಿದೆ. ಜತೆಗೆ ಮನುಷ್ಯನ ದುರಾಸೆಗೆ ದಿನೆ,ದಿನೇ ಪರಿಸರ ನಾಶವಾಗುತ್ತಿದೆ.ಒಂದು ಕಡೆ ಪರಿಸರ ನಾಶವಾದರೆ, ಮತ್ತೊಂದೆಡೆ ಕಾಡು ಪ್ರಾಣಿಗಳು ಆಹಾರ ಮತ್ತು ನೀರಿಗಾಗಿ ರೈತರ ಬೆಳೆಗಳತ್ತ ಮುಖ ಮಾಡುತ್ತಿವೆ.

ಭೀಕರ ಬರಗಾಲದ ಜತೆಗೆ ಮಳೆ ಇಲ್ಲದೆ ತತ್ತರಿಸಿ ಖಾಸಗಿ ಸಾಲಾ ಮಾಡಿ ಕೊಳವೆ ಬಾವಿ ಕೊರೆಸಿ ಸ್ವಾಭಿಮಾನದ ಬದುಕಿಗಾಗಿ ರೈತ ಕಷ್ಟಪಟ್ಟು ಬೆಳೆದ ಬೆಳೆ ಇಂದು ಕಣ್ಣುಮುಂದೆಯೇ ಕೈಗೆ ಬಂದ ಬೆಳೆ ಕಾಡುಪ್ರಾಣಿಗಳ ದಾಳಿಗೆ ನಾಶವಾಗುತ್ತಿದೆ.

ಸರಕಾರದಿಂದ ಅರಣ್ಯ ಸಂರಕ್ಷ ಣೆಗೆ ಮತ್ತು ಕಾಡು ಪ್ರಾಣಿಗಳ ಹಾವಳಿಗೆ ಕೋಟ್ಯಂತರ ರೂ. ಹಣ ಬಿಡುಗಡೆಯಾಗುತ್ತಿದೆ. ಆದರೆ, ಇದುವರೆಗೂ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಅಧಿಕಾರಿಗಳು ಮುಂದಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷೆ ಎ.ನಳಿನಿ ಮಾತನಾಡಿ, ಹೋದಪುಟ್ಟ ಬಂದಪುಟ್ಟ ಎಂಬಂತೆ ನಾಶವಾದ ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಬೆಳೆ ಸಮೀಕ್ಷೆ ಮಾಡದೆ ಪರಿಹಾರ ಸಹ ನೀಡುತ್ತಿಲ್ಲ ಎಂದು ದೂರಿದರು.

ಸರಕಾರದಿಂದ 5ಲಕ್ಷ ರೂ.ಮಂಜೂರಾದರೆ ರೈತರಿಗೆ 2ಲಕ್ಷ ರೂ. ಕೊಟ್‌ಟು ಕೈ ತೊಳೆದುಕೊಳ್ಳುತ್ತಿದ್ದಾರೆ. ಬರಗಾಲದಲ್ಲಿ ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಇಂದು ಮಾರುಕಟ್ಟೆಯಲ್ಲಿ ಸೂಕ್ತÜ ಬೆಲೆ ಇದ್ದರೂ ಅದಕ್ಕೆತಕ್ಕಂತ ಪರಿಹಾರ ನೀಡುತ್ತಿಲ್ಲ.

ಸಂಬಂಧÜಪಟ್ಟ ಅಧಿಕಾರಿಗಳಿಗೆ ರೈತರ ಮೇಲೆ ಕಾಳಜಿಯಿದ್ದರೆ ಕೂಡಲೇ ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದರ ಜತೆಗೆ ತೀವ್ರ ಬರಗಾಲದಲ್ಲಿ ನಾಶವಾಗಿರುವ ಬೆಳೆಗಳಿಗೆ ಪ್ರತಿ ಎಕರೆಗೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಅಗ್ರಹಿಸಿದರು.

ಮನವಿ ಸ್ವೀಕರಿಸಿದ ಕಚೇರಿ ವ್ಯವಸ್ಥಾಪಕ ಚನ್ನಕೇಶ, ಮನವಿಯನ್ನು ಹಿರಿಯ ಅಧಿಕಾರಿಗಳಿಗೆ ತಲುಪಿಸಿ ರೈತರ ಸಮಸ್ಯೆಗಳನ್ನು ಬಗೆಹರಿಸಿ ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

ರೈತ ಸಂಘ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಮಂಗಸಂದ್ರ ನಾಗೇಶ್‌, ವೆಂಕಟೇಶಪ್ಪ, ತಿಮ್ಮಣ್ಣ, ರಂಜಿತ್‌, ಸಾಗರ್‌, ಹನುಮಯ್ಯ, ಮುನಿನಾರಾಯಣಪ್ಪ, ಶ್ರೀನಿವಾಸರೆಡ್ಡಿ, ಬ್ಯಾಟರಾಯಪ್ಪ, ಟಿ. ಮುನಿಯಪ್ಪ, ನರಸಾಪುರ ಪುರುಷೋತ್ತಮ್‌, ಈಕಂಬಳ್ಳಿ ಮಂಜು, ಪುತ್ತೇರಿ ರಾಜು, ಮತ್ತಿತರರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ