ಆ್ಯಪ್ನಗರ

Kempegowda Jayanti, ಏಷ್ಯಾದ ಅತಿ ದೊಡ್ಡ ಟೊಮೇಟೊ ಮಾರುಕಟ್ಟೆಗೆ ಕೆಂಪೇಗೌಡರ ಹೆಸರಿಡಿ: ಕೋಲಾರ ಸಂಸದ ಮುನಿಸ್ವಾಮಿ

​​ಕೋಲಾರ ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯವು ಅತಿ ಹೆಚ್ಚಿದ್ದು, ಸಮುದಾಯ ನೀಡಿದ ಬೆಂಬಲದಿಂದ ನಾನು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದ್ದು, ಏಷ್ಯಾದ ಅತಿದೊಡ್ಡ ಟೊಮೇಟೊ ಮಾರುಕಟ್ಟೆಗೆ ಕೆಂಪೇಗೌಡರ ಹೆಸರಿಡಲು ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸೋಣ

Vijaya Karnataka Web 27 Jun 2022, 10:17 pm
ಕೋಲಾರ: ಏಷ್ಯಾದ ಅತಿದೊಡ್ಡ ಟೊಮೇಟೊ ಮಾರುಕಟ್ಟೆ ಯಾಗಿರುವ ಕೋಲಾರ ಎಪಿಎಂಸಿಗೆ ನಾಡಪ್ರಭು ಕೆಂಪೇಗೌಡರ ಹೆಸರಿಡಬೇಕೆಂದು ಸಂಸದ ಎಸ್‌. ಮುನಿಸ್ವಾಮಿ ಜಿಲ್ಲಾಡಳಿತವನ್ನು ಕೋರಿದರು.
Vijaya Karnataka Web ಎಸ್‌ ಮುನಿಸ್ವಾಮಿ
ಎಸ್‌ ಮುನಿಸ್ವಾಮಿ


ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಒಕ್ಕಲಿಗರ ಸಂಘದ ಸಹಯೋಗದಲ್ಲಿಆಯೋಜಿಸಿದ್ದ ಕೆಂಪೇಗೌಡ ಜಯಂತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲಾಡಳಿತಕ್ಕೆ ಪ್ರಸ್ತಾವನೆ

ಕೋಲಾರ ಜಿಲ್ಲೆಯಲ್ಲಿಒಕ್ಕಲಿಗ ಸಮುದಾಯವು ಅತಿ ಹೆಚ್ಚಿದ್ದು, ಸಮುದಾಯ ನೀಡಿದ ಬೆಂಬಲದಿಂದ ನಾನು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯ ವಾಗಿದ್ದು, ಏಷ್ಯಾದ ಅತಿದೊಡ್ಡ ಟೊಮೇಟೊ ಮಾರುಕಟ್ಟೆಗೆ ಕೆಂಪೇಗೌಡರ ಹೆಸರಿಡಲು ಎಲ್ಲರೂ ಸೇರಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸೋಣ ಎಂದು ಹೇಳಿದರು.

ಕೋಲಾರದಲ್ಲಿ ಅದ್ಧೂರಿ ಕೆಂಪೇಗೌಡ ಜಯಂತಿ! ಮೆರವಣಿಗೆಯಲ್ಲಿ ಸಂಸದ ಮುನಿಸ್ವಾಮಿ ಸಖತ್‌ ಸ್ಟೆಪ್ಸ್‌

ಕೆಂಪೇಗೌಡರು ಬೆಂಗಳೂರಿನ ಕೆರೆಗಳು ಹಾಗೂ ದೇವಾಲಯಗಳ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದು, ಅವರು ಹಾಕಿ ಕೊಟ್ಟಿರುವಂತಹ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ. ಒಕ್ಕಲಿಗರ ಸಮುದಾಯಕ್ಕೆ ಈವರೆಗೆ ಯಾವುದೇ ರೀತಿಯ ಜಮೀನು ಮಂಜೂರು ಮಾಡದಿರುವುದು ಸರಿಯಲ್ಲ. ಕೂಡಲೇ ಜಿಲ್ಲಾಡಳಿತ ಒಕ್ಕಲಿಗರ ಸಂಘಕ್ಕೆ 9 ಎಕರೆ ಜಮೀನನ್ನು ಮಂಜೂರು ಮಾಡಲು ಕ್ರಮಕೈಗೊಳ್ಳಬೇಕು. ಎಂದು ಸೂಚಿಸಿದರು.

ಭವನ ನಿರ್ಮಾಣಕ್ಕೆ 25 ಲಕ್ಷ ರೂ.

ಜಿಲ್ಲೆಯ ಎಲ್ಲಸಮುದಾಯಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕಿದ್ದು, ಎಲ್ಲರೀತಿಯ ಜಯಂತಿಗಳನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕಿದೆ. ಒಕ್ಕಲಿಗರ ಸಮುದಾಯ ಭವನ ನಿರ್ಮಾಣಕ್ಕೆ ಸಂಸದ ನಿಧಿಯ ಬದಲಿಗೆ ವೈಯಕ್ತಿಕವಾಗಿ 25 ಲಕ್ಷ ರೂ.ಗಳನ್ನು ನೀಡುತ್ತೇನೆ. ನೀವು ಧೈರ್ಯವಾಗಿ ಭವನ ನಿರ್ಮಾಣ ಕಾಮಗಾರಿ ಆರಂಭಿಸಬಹುದಾಗಿದೆ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಹಿಂದೂ-ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಬದುಕಬೇಕಿದ್ದು, ಮುಂದಿನ ವರ್ಷದಿಂದ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಯಂತಿ ವಿಜೃಂಭಣೆಯಿಂದ ಆಚರಿಸೋಣ. ಅದರಂತೆ ಮೆರವಣಿಗೆ ಬಂಗಾರಪೇಟೆ ವೃತ್ತದಿಂದ ಆರಂಭವಾಗಿ, ಡೂಂಲೈಟ್‌ ವೃತ್ತ, ಕ್ಲಾಕ್‌ ಟವರ್‌, ಹೊಸ ಬಸ್‌ ನಿಲ್ದಾಣ, ಮೆಕ್ಕೆ ವೃತ್ತದ ಮೂಲಕ ರಂಗಮಂದಿರಕ್ಕೆ ಬರುವಂತೆ ಹಿರಿಯರು ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಮಾತನಾಡಿ, ಕೆಂಪೇಗೌಡರ ವಂಶಸ್ಥರಿಗೂ ಕೋಲಾರಕ್ಕೂ ಹೆಚ್ಚಿನ ಸಂಬಂಧವಿದ್ದು, ಕೆಂಪೇಗೌಡರ ಹೆಸರನ್ನು ಅನೇಕ ರಸ್ತೆಗಳಿಗೆ ಹಾಗೂ ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಇರಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಅದೇ ರೀತಿ ದೇಶದಲ್ಲಿಯೇ ಅತಿ ಹೆಚ್ಚಿನ ಪ್ರಯಾಣಿಕರು ಸಂಚರಿಸುವಂತಹ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ಇಡುವ ಮೂಲಕ ಬೆಂಗಳೂರು ಕಟ್ಟಿದ ಗೌಡರಿಗೆ ಗೌರವ ಸಲ್ಲಿಸಿದ್ದು, ಕೋಲಾರ ನಗರದಲ್ಲಿರುವ ಯಾವುದಾದರೂ ಒಂದು ಪ್ರಮುಖ ರಸ್ತೆಗೆ ಕೆಂಪೇಗೌಡರ ಹೆಸರಿಡಬೇಕೆಂದು ಜಿಲ್ಲಾಡಳಿತವನ್ನು ಮನವಿ ಮಾಡಿದರು.

ಸಿದ್ದರಾಮಯ್ಯ ಬಂದರೆ ಕೋಲಾರ ಕ್ಷೇತ್ರ ಬಿಟ್ಟುಕೊಡುತ್ತೇನೆ: ಶ್ರೀನಿವಾಸಗೌಡ

ಜಿಲ್ಲಾಧಿಕಾರಿ ವೆಂಕಟ್‌ರಾಜಾ ಮಾತನಾಡಿ, ಬೆಂಗಳೂರು ನಗರವನ್ನು ಕೆಂಪೇಗೌಡರು ಅತ್ಯಂತ ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಿದ್ದು, ಅಂತಹ ಮಹಾನ್‌ ವ್ಯಕ್ತಿಯ ಹೆಸರನ್ನು ನಗರದ ಎಪಿಎಂಸಿಗೆ ಮಾರುಕಟ್ಟೆಗೆ ನಾಮಕರಣ ಮಾಡುವ ಕುರಿತಂತೆ ಸರಕಾರದೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ