ಆ್ಯಪ್ನಗರ

ಎಸಿಬಿ ಬಲೆಗೆ ಬಿಸಿಎಂ ತಾಲೂಕು ವಿಸ್ತರಣಾಧಿಕಾರಿ!

ನೀರು ಪೂರೈಕೆದಾರನಿಂದ 18 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಲಾಖೆಯ ತಾಲೂಕು ವಿಸ್ತರಣಾಧಿಕಾರಿ ಕಚೇರಿಯಲ್ಲೇ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ.

Vijaya Karnataka 15 Feb 2019, 3:29 pm
ಕೋಲಾರ: ನೀರು ಪೂರೈಕೆದಾರನಿಂದ 18 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಲಾಖೆಯ ತಾಲೂಕು ವಿಸ್ತರಣಾಧಿಕಾರಿ ಕಚೇರಿಯಲ್ಲೇ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ.
Vijaya Karnataka Web bcm taluk extension officer acb trap
ಎಸಿಬಿ ಬಲೆಗೆ ಬಿಸಿಎಂ ತಾಲೂಕು ವಿಸ್ತರಣಾಧಿಕಾರಿ!


ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿ ವಿ.ಮಂಜುನಾಥ್‌ ಎಸಿಬಿ ಬಲೆಗೆ ಬಿದ್ದವರಾಗಿದ್ದು, ಹಾಸ್ಟೆಲ್‌ಗಳಿಗೆ ನೀರು ಪೂರೈಕೆ ಮಾಡಿದ್ದ ಖಾಸಗಿ ನೀರು ಪೂರೈಕೆದಾರ ಕನಕನಪಾಳ್ಯ ವಾಸಿ ಮಂಜುನಾಥ್‌ ಅವರ 6 ತಿಂಗಳ 65,000 ಬಿಲ್‌ ಬಾಕಿಗೆ 18000ರೂ ಲಂಚದ ಬೇಡಿಕೆ ಇಟ್ಟಿದ್ದರು.

ಅಂತೆಯೇ ಗುರುವಾರದಂದು 18000 ರೂ.ಗಳೊಂದಿಗೆ ನೀರು ಪೂರೈಕೆದಾರ ಮಂಜುನಾಥ್‌ ಕಚೇರಿಗೆ ಹೋಗಿ ಹಣ ನೀಡಲು ಮುಂದಾಗಿದ್ದಾರೆ. ಆ ವೇಳೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾಳಿಯಲ್ಲಿ ಎಸಿಬಿ ಡಿವೈಎಸ್ಪಿ ಎಂ.ಪುರುಷೋತ್ತಮ್‌, ಇನ್ಸ್‌ಪೆಕ್ಟರ್‌ ಜಿ.ಎನ್‌.ವೆಂಕಟಾಚಲಪತಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ