ಆ್ಯಪ್ನಗರ

ರಾಜೀನಾಮೆ ನೀಡಲು ಬಿಜೆಪಿಯವರು ಸಿದ್ಧವಿದ್ದಾರೆ; ಕೆವೈಎನ್‌

ಮತ್ತಷ್ಟು ಶಾಸಕರು ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದು, ಬಿಜೆಪಿಯ ಕಡೆಯವರೂ ರಾಜೀನಾಮೆ ನೀಡಲು ಸಿದ್ಧವಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಸರಕಾರ ಉರುಳುವುದಕ್ಕೆ ಸಾಧ್ಯವಿಲ್ಲ ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

Vijaya Karnataka 2 Jul 2019, 4:23 pm
ಕೋಲಾರ: ಮತ್ತಷ್ಟು ಶಾಸಕರು ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದು, ಬಿಜೆಪಿಯ ಕಡೆಯವರೂ ರಾಜೀನಾಮೆ ನೀಡಲು ಸಿದ್ಧವಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಸರಕಾರ ಉರುಳುವುದಕ್ಕೆ ಸಾಧ್ಯವಿಲ್ಲ ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
Vijaya Karnataka Web bjp ready to resign kyn
ರಾಜೀನಾಮೆ ನೀಡಲು ಬಿಜೆಪಿಯವರು ಸಿದ್ಧವಿದ್ದಾರೆ; ಕೆವೈಎನ್‌


ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಆನಂದ್‌ ಸಿಂಗ್‌ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸಿದ್ದಾರೆ. ಜಿಂದಾಲ್‌ಗೆ ಭೂಮಿ ನೀಡಿರುವುದಕ್ಕೆ ಆನಂದ್‌ ಸಾಕಷ್ಟು ವಿರೋಧ ಮಾಡಿದ್ದರೂ, ಇದು ಒಂದು ಕಾರಣದಿಂದ ರಾಜೀನಾಮೆ ಸಲ್ಲಿಸಿರಬಹುದು ಎಂದು ಹೇಳಿದ ಅವರು, ಇದರಿಂದ ಸರಕಾರದ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದರು.

ಸರಕಾರವನ್ನು ಉರುಳಿಸಲು ಪ್ರಯತ್ನಪಡುತ್ತಿರುವ ಬಿಜೆಪಿ ಮುಖಂಡರು ಒಂದು ವರ್ಷದಿಂದ ತಮ್ಮನ್ನು ಸಂಪರ್ಕಿ ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅವರ ಒತ್ತಾಯಕ್ಕೆ ಮಣಿಯುವುದಿಲ್ಲ ಎಂದು ಹೇಳಿದರು.


bjp ,ready, resign, kynbjp, ನಂಜೇಗೌಡ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ