ಆ್ಯಪ್ನಗರ

ಮೀಟರ್‌ ಬಡ್ಡಿ ಮಾಫಿಯಾದಿಂದ ಜಿಲ್ಲಾ ಕೇಂದ್ರ ಮುಕ್ತಕ್ಕೆ ಪಣ

ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲಾಗುವುದು. ಈ ಮೂಲಕ ಜಿಲ್ಲಾ ಕೇಂದ್ರವನ್ನು ಮೀಟರ್‌ ಬಡ್ಡಿ ಮಾಫಿಯಾದಿಂದ ಮುಕ್ತಗೊಳಿಸಲಾಗುವುದು ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

Vijaya Karnataka 5 Feb 2019, 5:00 am
ಕೋಲಾರ: ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಒದಗಿಸಲಾಗುವುದು. ಈ ಮೂಲಕ ಜಿಲ್ಲಾ ಕೇಂದ್ರವನ್ನು ಮೀಟರ್‌ ಬಡ್ಡಿ ಮಾಫಿಯಾದಿಂದ ಮುಕ್ತಗೊಳಿಸಲಾಗುವುದು ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.
Vijaya Karnataka Web cheque distribution in kolar
ಮೀಟರ್‌ ಬಡ್ಡಿ ಮಾಫಿಯಾದಿಂದ ಜಿಲ್ಲಾ ಕೇಂದ್ರ ಮುಕ್ತಕ್ಕೆ ಪಣ


ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದೇವರಾಜ ಅರಸು ಅಭಿವೃದ್ಧಿ ನಿಗಮದ ನೇರ ಸಾಲ ಯೋಜನೆಯಡಿ ಫಲಾನುಭವಿಗಳಿಗೆ ಚೆಕ್‌ ವಿತರಿಸಿ ಮಾತನಾಡಿದ ಅವರು, ಕೋಲಾರ ನಗರದ ಬೀದಿಬದಿವ್ಯಾಪಾರಿಗಳಿಗೆ ಸಾಲ ಒದಗಿಸುವ ಗುರಿ ಹೊಂದಲಾಗಿದೆ. ಬಜೆಟ್‌ ಅದಿವೇಶನ ಬಳಿಕ ಡಿಸಿಸಿ ಬ್ಯಾಂಕ್‌ ಮೂಲಕ ಈ ಸಾಲ ಸೌಲಭ್ಯ ಒದಗಿಸುವುದಾಗಿ ತಿಳಿಸಿದರು.

ಫಲಾನುಭವಿಗಳು ಸಾಲದ ಹಣ ಸದುಪಯೋಗಪಡಿಸಿಕೊಳ್ಳಬೇಕು. ಆದಾಯೋತ್ಪನ್ನ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳಬೇಕು. ಈ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಜತೆಗೆ ಸಾಲದ ಹಣ ಸಕಾಲಕ್ಕೆ ಪಾವತಿಸಬೇಕು ಎಂದು ಸಲಹೆ ನೀಡಿದರು.

ಸತತ ಬರಗಾಲದಿಂದ ಜಿಲ್ಲೆಯ ಜನತೆ ತತ್ತರಿಸಿದ್ದಾರೆ. ಯುವ ಸಮುದಾಯ ಬದುಕು ರೂಪಿಸಿಕೊಳ್ಳಲು ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ದೇವರಾಜ ಅರಸು ಅಭಿವೃದ್ಧಿ ನಿಗಮ ಮೂಲಕ ದೊರಕುವ ಸೌಲಭ್ಯ ಹೆಚ್ಚು ಮಂದಿಗೆ ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಾಲ ಸೌಲಭ್ಯ: ಸುಮಾರು 131 ಫಲಾನುಭವಿಗಳಿಗೆ ಸಾಲ ಸೌಲಭ್ಯ ಒದಗಿಸಲಾಗಿದೆ. ಮುಂದಿನ ಕಂತಿನಲ್ಲಿ ಹೆಚ್ಚುವರಿಯಾಗಿ 15 ಮಂದಿಗೆ ತಲಾ 50 ಸಾವಿರ ರೂಪಾಯಿ ಸಾಲ ನೀಡಲಿದ್ದು, ಈ ಸಂಬಂಧ ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಹಣವನ್ನು ಆರ್‌ಟಿಜಿಎಸ್‌ ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗುವುದು ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಎಂ. ಗೋವಿಂದಗೌಡ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ವಿತರಿಸುವ ಮೂಲಕ ಜಿಲ್ಲೆಯಲ್ಲಿ ಬಡ್ಡಿ ಮಾಫಿಯಾಕ್ಕೆ ತೆರೆ ಎಳೆಯಲಾಗುವುದು ಎಂದರು.

ನಿಗಮದ ಜಿಲ್ಲಾ ವ್ಯವಸ್ಥಾಪಕ ಗಣೇಶ್‌ ಮಾತನಾಡಿ, 131 ಫಲಾನುಭವಿಗೆ 70 ಲಕ್ಷ ರೂಪಾಯಿ ಸಾಲ ವಿತರಣೆ ಮಾಡಲಾಗುತ್ತಿದೆ. ಹೈನುಗಾರಿಕೆ, ಬ್ಯೂಟಿಪಾರ್ಲರ್‌, ಹೂ ವ್ಯಾಪಾರ, ಸೆಲೂನ್‌, ಡ್ರೈಕ್ಲಿನಿಕ್‌, ಟೈಲರಿಂಗ್‌, ಕಾರ್ಪೆಂಟರಿ ವೃತ್ತಿಗಳಿಗೆ ಸಾಲ ನೀಡುತ್ತಿದ್ದು, ಶಾಸಕರ ಅಧ್ಯಕ್ಷ ತೆಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ನಾಗನಾಳ ಸೋಮಣ್ಣ, ಮುಖಂಡರಾದ ಸಿ.ಎಂ.ಮುನಿಯಪ್ಪ, ಮುನಿರಾಜು, ಚಂದ್ರೇಗೌಡ, ಸೀನಪ್ಪ, ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ಲಕ್ಷ ್ಮಯ್ಯ ಮತ್ತಿತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ