ಕೋಲಾರ: ನಗರ, ಗ್ರಾಮಾಂತರ ಪ್ರದೇಶದಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು, 90 ಗ್ರಾಂ ತೂಕದ ಮೂರು ಮಾಂಗಲ್ಯದ ಸರ, ದ್ವಿಚಕ್ರವಾಹ ವಶಕ್ಕೆ ಪಡೆದಿದ್ದಾರೆ.
ಆನೇಕಲ್ ತಾಲೂಕು ಅತ್ತಿಬೆಲೆ ಮೂಲದ ಬಸ್ ಕ್ಲೀನರ್ ಸಿಕಂದರ್(24), ಗಾರೆ ಕೆಲಸ ಮಾಡುತ್ತಿದ್ದ ಪುರುಷೋತ್ತಮರೆಡ್ಡಿ (23)ಬಂಧಿತರು.
ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸಫೆಟ್ ಅವರು, ತಾವು ಒಳಗೊಂಡಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರಕುಮಾರ್, ಪೊಲೀಸ್ ಉಪಾಧೀಕ್ಷಕ ಬಿ.ಕೆ.ಉಮೇಶ್ ಅವರ ಮಾರ್ಗದರ್ಶನದಲ್ಲಿ ಸುಲಿಗೆ ಮತ್ತು ಕಳವು ಪ್ರಕರಣಗಳ ಮಾಲು, ಆರೋಪಿಗಳ ಪತ್ತೆ ಕಾರ್ಯ ಕೈಗೊಂಡಿದ್ದ ಸಿಪಿಐ ಎಂ.ಜಿ.ಫಾರೂಕ್ಪಾಷಾ, ಪಿಎಸ್ಐ ಅಣ್ಣಯ್ಯ ಹಾಗೂ ಅಪರಾಧ ಪತ್ತೆದಳದ ಸಿಬ್ಬಂದಿ ಒಳಗೊಂಡ ತಂಡ ಡಿ. 6ರಂದು ರಾತ್ರಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ ಎಂದು ವಿವರಿಸಿದರು.
ನಗರ ಹಾಗೂ ಕೋಲಾರ ತಾಲೂಕಿನ ಯಾನಾದಹಳ್ಳಿಯಲ್ಲಿ ಒಟ್ಟು 4,00,000 ರೂ. ಬೆಲೆ ಬಾಳುವ 98ಗ್ರಾಂ ತೂಕದ ಮೂರು ಮಾಂಗಲ್ಯದ ಚೈನು, ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದು, ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರು ಬೆಂಗಳೂರು, ತಮಿಳುನಾಡು ವ್ಯಾಪ್ತಿಯಲ್ಲಿ ಸರಗಳ್ಳತನ, ಬೈಕ್ ಕಳವು ಮಾಡಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ರಾಜೇಂದ್ರಕುಮಾರ್ ಮತ್ತಿತರರು ಇದ್ದರು.
ಕೋಲಾರ ನಗರ ಠಾಣೆ ಪೊಲೀಸರು ಬಂಧಿಸಿರುವ ಕಳ್ಳರು ಹಾಗೂ ಅವರಿಂದ ವಶಕ್ಕೆ ಪಡೆದಿರುವ ಚಿನ್ನಾಭರಣ, ದ್ವಿಚಕ್ರ ವಾಹನ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸಫೆಟ್ ಅವರೊಂದಿಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರಕುಮಾರ್ ಮತ್ತಿತರರು.
ಆನೇಕಲ್ ತಾಲೂಕು ಅತ್ತಿಬೆಲೆ ಮೂಲದ ಬಸ್ ಕ್ಲೀನರ್ ಸಿಕಂದರ್(24), ಗಾರೆ ಕೆಲಸ ಮಾಡುತ್ತಿದ್ದ ಪುರುಷೋತ್ತಮರೆಡ್ಡಿ (23)ಬಂಧಿತರು.
ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸಫೆಟ್ ಅವರು, ತಾವು ಒಳಗೊಂಡಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರಕುಮಾರ್, ಪೊಲೀಸ್ ಉಪಾಧೀಕ್ಷಕ ಬಿ.ಕೆ.ಉಮೇಶ್ ಅವರ ಮಾರ್ಗದರ್ಶನದಲ್ಲಿ ಸುಲಿಗೆ ಮತ್ತು ಕಳವು ಪ್ರಕರಣಗಳ ಮಾಲು, ಆರೋಪಿಗಳ ಪತ್ತೆ ಕಾರ್ಯ ಕೈಗೊಂಡಿದ್ದ ಸಿಪಿಐ ಎಂ.ಜಿ.ಫಾರೂಕ್ಪಾಷಾ, ಪಿಎಸ್ಐ ಅಣ್ಣಯ್ಯ ಹಾಗೂ ಅಪರಾಧ ಪತ್ತೆದಳದ ಸಿಬ್ಬಂದಿ ಒಳಗೊಂಡ ತಂಡ ಡಿ. 6ರಂದು ರಾತ್ರಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ ಎಂದು ವಿವರಿಸಿದರು.
ನಗರ ಹಾಗೂ ಕೋಲಾರ ತಾಲೂಕಿನ ಯಾನಾದಹಳ್ಳಿಯಲ್ಲಿ ಒಟ್ಟು 4,00,000 ರೂ. ಬೆಲೆ ಬಾಳುವ 98ಗ್ರಾಂ ತೂಕದ ಮೂರು ಮಾಂಗಲ್ಯದ ಚೈನು, ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದು, ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರು ಬೆಂಗಳೂರು, ತಮಿಳುನಾಡು ವ್ಯಾಪ್ತಿಯಲ್ಲಿ ಸರಗಳ್ಳತನ, ಬೈಕ್ ಕಳವು ಮಾಡಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ರಾಜೇಂದ್ರಕುಮಾರ್ ಮತ್ತಿತರರು ಇದ್ದರು.
ಕೋಲಾರ ನಗರ ಠಾಣೆ ಪೊಲೀಸರು ಬಂಧಿಸಿರುವ ಕಳ್ಳರು ಹಾಗೂ ಅವರಿಂದ ವಶಕ್ಕೆ ಪಡೆದಿರುವ ಚಿನ್ನಾಭರಣ, ದ್ವಿಚಕ್ರ ವಾಹನ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸಫೆಟ್ ಅವರೊಂದಿಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರಕುಮಾರ್ ಮತ್ತಿತರರು.