ಆ್ಯಪ್ನಗರ

Siddaramaiah: ಸಿಎಂ ಆಗಿದ್ದಾಗ ಎಚ್‌ಡಿ ಕುಮಾರಸ್ವಾಮಿಗೆ ರೈತರ ನೆನಪಾಗಲಿಲ್ಲ; ಈಗ ಪಂಚರತ್ನ ಅಂತಾರೆ: ಸಿದ್ದರಾಮಯ್ಯ

Siddaramaiah Speech In Kolar: ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಬ್ಬರದ ಭಾಷಣ ಮಾಡಿದ್ದಾರೆ. ಪ್ರಜಾಧ್ವನಿ ಸಮಾವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಭ್ರಷ್ಟ ಸರಕಾರ ಬಿಜೆಪಿ ಸರ್ಕಾರದ್ದಾಗಿದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಸಿಎಂ ಆಗಿದ್ದಾಗ ಎಚ್‌ಡಿ ಕುಮಾರಸ್ವಾಮಿಗೆ ರೈತರ ನೆನಪಾಗಲಿಲ್ಲ; ಈಗ ಪಂಚರತ್ನ ಅಂತಾ ಓಡಾಡ್ತಿದ್ದಾರೆ ಎಂದು ಜೆಡಿಎಸ್‌ ಅನ್ನು ಕೂಡ ಕುಟುಕಿದರು. ಅದಲ್ಲದೇ ನಾನು ಕೋಲಾರದಿಂದಲೇ ಸ್ಪರ್ಧಿಸುವುದಾಗಿ ಮತ್ತೊಮ್ಮೆ ಘೋಷಿಸಿದರು.

Edited byಅವಿನಾಶ ವಗರನಾಳ | Lipi 23 Jan 2023, 6:23 pm

ಹೈಲೈಟ್ಸ್‌:


  • ಕೋಲಾರದಲ್ಲಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ
  • ಸಿಎಂ ಆಗಿದ್ದಾಗ ಎಚ್‌ಡಿ ಕುಮಾರಸ್ವಾಮಿಗೆ ರೈತರ ನೆನಪಾಗಲಿಲ್ಲ ಎಂದು ವಾಗ್ದಾಳಿ
  • ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಭ್ರಷ್ಟ ಸರಕಾರ ಬಿಜೆಪಿ ಸರ್ಕಾರದ್ದಾಗಿದೆ ಎಂದು ಕಿಡಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Siddaramaiah
ಕೋಲಾರದ ಪ್ರಜಾಧ್ವನಿ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಷಣ.
ಕೋಲಾರ: ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಭ್ರಷ್ಟ ಸರಕಾರ ಬಿಜೆಪಿ ಸರ್ಕಾರದ್ದಾಗಿದೆ. ಶೇ.40 ಪರ್ಸೆಂಟ್ ಕಮಿಷನ್ ಬಗ್ಗೆ ಮೂರು ಬಾರಿ ಸದನದಲ್ಲಿ ಚರ್ಚೆಗೆ ಕೋರಿದರೂ ಅವಕಾಶ ನೀಡಲಿಲ್ಲ, ಹೊಟೇಲ್‌ ಮೆನು ಮಾದರಿ ಪ್ರತಿ ಕೆಲಸಕ್ಕೂ ಲಂಚ ನಿಗದಿಪಡಿಸಲಾಗಿದೆ. ವಿಧಾನಸೌಧದ ಗೋಡೆಗಳು ಸಹ ಲಂಚ ಲಂಚ ಎಂದು ಪಿಸುಗುಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೋಲಾರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ನೂರು ಬಾರಿ ಅಮಿತ್ ಶಾ, ಮೋದಿ ಬಂದರೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಸತ್ಯ. ರಾಜ್ಯದಲ್ಲಿ ಈಗ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ಕೋಲಾರ ಜಿಲ್ಲೆಯ ಆರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ .

ಇದು 13ನೇ ಜಿಲ್ಲೆಯ ಪ್ರವಾಸ ಪ್ರತಿ ಜಿಲ್ಲೆಯಲ್ಲಿಯೂ ಪ್ರಜಾಧ್ವನಿಗೆ ನಿರೀಕ್ಷೆ ಮಾಡಿದ್ದಕ್ಕಿಂತಲೂ ಹೆಚ್ಚು ಸ್ಪಂದನೆ ಸಿಕ್ಕಿದ್ದು ಜನಸಮೂಹ ಸಾಗರದಂತೆ ಹರಿದು ಬರುತ್ತಿದೆ. ರಾಜ್ಯದ ಜನ ಬಿಜೆಪಿ ಸರಕಾರದ ಆಡಳಿತದಿಂದ ಬೇಸತ್ತಿದ್ದಾರೆ, ನೊಂದಿದ್ದಾರೆ, ಅನೇಕ ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಯಾವುದೇ ಕೆಲಸ ಲಂಚ ನೀಡದೆ ಆಗುತ್ತಿಲ್ಲ, ದೇಶದ ಯುವಕರೇ ಉದ್ಯೋಗ ಕೊಡದ ಬಿಜೆಪಿಯನ್ನು ನಂಬಬೇಡಿ, ಸಣ್ಣ ಕೈಗಾರಿಕೆ, ಮಧ್ಯಮ ಕೈಗಾರಿಕೆಗಳು ಮುಚ್ಚಿ ಹೋದವು. 60 ಲಕ್ಷ ಉದ್ಯೋಗಳು ಕಡಿತಗೊಂಡವು ಇದು ಬಿಜೆಪಿ ಸರ್ಕಾರದ ಕೊಡುಗೆಯಾಗಿದೆ ಕಿಡಿಕಾರಿದರು.


ಇನ್ನು, ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿ 2 ವರ್ಷ 10 ತಿಂಗಳು ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿಗೆ ರೈತರು ನೆನಪು ಬರಲಿಲ್ಲ. ಈಗ ಜೆಡಿಎಸ್ ಪಂಚರತ್ನ ಎಂದು ಓಡಾಡುತ್ತಿದ್ದಾರೆ. ಕೆಸಿ ವ್ಯಾಲಿಗಾಗಿ ಜಿಲ್ಲೆಯ ಎಲ್ಲ ಮುಖಂಡರು ಬೇಡಿಕೆ ಮೇರೆಗೆ 1400 ಕೋಟಿ ರೂ. ನೀಡಿ ಕೆಸಿ ವ್ಯಾಲಿ ನೀರಿನಿಂದ ಕೆರೆಗಳ ತುಂಬಿಸಿದ್ದೇ ಇಂದು ಕೋಲಾರ ಜಿಲ್ಲೆ ಹಸಿರಾಗಿರಲು ಕಾರಣ. ಈ ನೀರು ವಿಷ ಎನ್ನುತ್ತಿದ್ದಾರೆ ಕುಮಾರಸ್ವಾಮಿ, ಎತ್ತಿನ ಹೊಳೆಗೂ ವಿರೋಧ ಮಾಡಿದವರು ಕುಮಾರಸ್ವಾಮಿ ಎಂದು ಟೀಕಿಸಿದ್ದರು ಎಂದರು.
NOC ನೀಡಲು 1 ಪೈಸೆಯೂ ಪಡೆದಿಲ್ಲ: ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತಿ: ಗದಗದಲ್ಲಿ ಸಿದ್ದರಾಮಯ್ಯ ಸವಾಲ್
ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದು ಮೋದಿ ಭರವಸೆ ನೀಡಿದ್ದರು. ಆದರೆ, ರೈತರ ವ್ಯವಸಾಯಕ್ಕಾಗಿ ಖರ್ಚು ಮಾಡಬೇಕಾದ ಹಣವನ್ನು ದುಪ್ಪಟ್ಟು ಮಾಡಿದರು. ರೈತರ ಸಾಲ ಮನ್ನಾ ಮಾಡದೆ ಉದ್ಯಮಿಗಳ 14 ಲಕ್ಷ ಕೋಟಿ ರೂ. ಸಾಲವನ್ನು ಮೋದಿ ಸರ್ಕಾರ ಮನ್ನಾ ಮಾಡಿದೆ. ಮನಮೋಹನ್‌ ಸಿಂಗ್ 78 ಸಾವಿರ ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದರು. ರಾಜ್ಯದಲ್ಲಿ 27 ಲಕ್ಷದ 27 ಸಾವಿರ ರೈತರ 8150 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ಎಸ್‌ಸಿ ಎಸ್‌ಟಿ ಜನಸಂಖ್ಯೆಗೆ ಅನುಗುಣವಾಗಿ ಹಣ ಖರ್ಚು ಮಾಡುವಂತೆ ಕಾನೂನು ಮಾಡಿದ್ದು, ನಮ್ಮಸರಕಾರ ಹಿಂದೆ ಯಾವ ಸರಕಾರವೂ ಮಾಡಿಲ್ಲ, ಪರಿಶಿಷ್ಟ ಜಾತಿವರ್ಗದ ಗುತ್ತಿಗೆದಾರರಿಗೆ ಮೀಸಲಾತಿ, ಬಡ್ತಿ ಮೀಸಲಾತಿ, ದಲಿತರ ಕೈಗಾರಿಕೋದ್ಯಮಕ್ಕೆ ಸಹಕರಿಸಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

Priyanka Gandhi:40% ಮೂಲಕ ಮೂರು ವರ್ಷದಲ್ಲಿ 1.5 ಲಕ್ಷ ಕೋಟಿ ಲೂಟಿ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ಗುಡುಗು
ಇನ್ನು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಕೋಲಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕೆಸಿ ವ್ಯಾಲಿ ಮೂರನೇ ಬಾರಿ ಸಂಸ್ಕರಣೆ, ಸಹಕಾರ ಸಂಘಗಳ ಮೂಲಕ ಸ್ರೀಶಕ್ತಿ ಸಂಘಗಳು ಪಡೆದುಕೊಂಡಿರುವ ಸಾಲವನ್ನು ಮನ್ನಾ ಮಾಡುವ ತೀರ್ಮಾನ ಮಾಡುತ್ತೇವೆ. 10 ಸಾವಿರ ಕೋಟಿ ರೂ.ಗಳನ್ನು ಅಲ್ಪಸಂಖ್ಯಾತರಿಗೆ ನೀಡುತ್ತೇವೆ, ಎತ್ತಿನ ಹೊಳೆ ನೀರು ಹರಿಸಿ ಕುಡಿಯುವ ನೀರು ಕೊಡುತ್ತೇವೆ ಎಂದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ