ಆ್ಯಪ್ನಗರ

ಕುಡಿಯುವ ನೀರಿನ ಬಗ್ಗೆ ದೂರು ನೀಡಲು ಕಂಟ್ರೋಲ್‌ ರೂಂ

2018-19 ನೇ ಸಾಲಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸರಕಾರವು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್‌ ರೂಂ ಸ್ಥಾಪಿಸಿ, ಸಾರ್ವಜನಿಕರ ಬಳಕೆಗೆ 24 ಗಂಟೆಯು ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಡಿಸಿ ಜೆ.ಮಂಜುನಾಥ್‌ ತಿಳಿಸಿದ್ದಾರೆ.

Vijaya Karnataka 7 Aug 2019, 3:09 pm
ಕೋಲಾರ:2018-19 ನೇ ಸಾಲಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಸರಕಾರವು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್‌ ರೂಂ ಸ್ಥಾಪಿಸಿ, ಸಾರ್ವಜನಿಕರ ಬಳಕೆಗೆ 24 ಗಂಟೆಯು ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಡಿಸಿ ಜೆ.ಮಂಜುನಾಥ್‌ ತಿಳಿಸಿದ್ದಾರೆ.
Vijaya Karnataka Web control room started for drinking water problem
ಕುಡಿಯುವ ನೀರಿನ ಬಗ್ಗೆ ದೂರು ನೀಡಲು ಕಂಟ್ರೋಲ್‌ ರೂಂ


ಗ್ರಾಮಾಂತರ ಪ್ರದೇಶಗಳಲ್ಲಿ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್‌ ಕಂಟ್ರೋಲ್‌ ರೂಂ ಸಂಖ್ಯೆ: 08152-241367, ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಇಲಾಖೆ 08152-222331 ಹಾಗೂ ತಾಲೂಕು ಮಟ್ಟದಲ್ಲಿ ತಾಪಂ ಕೋಲಾರ, 08152-226430, ಮಾಲೂರು 08151-232231, ಬಂಗಾರಪೇಟೆ 08153-255280, ಮುಳಬಾಗಿಲು 08159-243045 ಹಾಗೂ ಶ್ರೀನಿವಾಸಪುರ 08157-245118 ಅನ್ನು ಸಂಪರ್ಕಿಸಬಹುದಾಗಿದೆ.

ನಗರ, ಪಟ್ಟಣ ಪ್ರದೇಶಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಇಲಾಖೆ, ಕೋಲಾರ ಕಟ್ರೋಲ್‌ ರೂಂ ಸಂಖ್ಯೆ: 08152-243555 ಹಾಗೂ ಕೋಲಾರ ನಗರಸಭೆ 08152-222007, ಕೆ.ಜಿ.ಎಫ್‌ ನಗರಸಭೆ 08153-271674, ಮುಳಬಾಗಿಲು ನಗರಸಭೆ 08159-242044, ಬಂಗಾರಪೇಟೆ ಪುರಸಭೆ 08153-253222, ಮಾಲೂರು ಪುರಸಭೆ 08151-232840, ಶ್ರೀನಿವಾಸಪುರ ಪುರಸಭೆ 08157-245160 ಅನ್ನು ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗಾಗಿ ಮೇಲ್ಕಂಡ ಕಂಟ್ರೋಲ್‌ಗಳ ಸಹಾಯವಾಣಿಯ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ