ಆ್ಯಪ್ನಗರ

ಆಕಸ್ಮಿಕವಾಗಿ ಪಾಳುಬಾವಿಗೆ ಬಿದ್ದ ಜಿಂಕೆ ರಕ್ಷಣೆ

ಕಾರಂಜಿಕಟ್ಟೆ ಬಡಾವಣೆಯಲ್ಲಿ ಆಕಸ್ಮಿಕವಾಗಿ ಪಾಳುಬಾವಿಗೆ ಬಿದ್ದಿದ್ದ ಜಿಂಕೆಯೊಂದನ್ನು ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಯಶಸ್ವಿಯಾಗಿ ರಕ್ಷಿಸಿದೆ.

Vijaya Karnataka 24 Jan 2019, 3:04 pm
ಕೋಲಾರ: ಕಾರಂಜಿಕಟ್ಟೆ ಬಡಾವಣೆಯಲ್ಲಿ ಆಕಸ್ಮಿಕವಾಗಿ ಪಾಳುಬಾವಿಗೆ ಬಿದ್ದಿದ್ದ ಜಿಂಕೆಯೊಂದನ್ನು ಸ್ಥಳೀಯರ ಸಹಕಾರದೊಂದಿಗೆ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಯಶಸ್ವಿಯಾಗಿ ರಕ್ಷಿಸಿದೆ.
Vijaya Karnataka Web deer protected from dry well
ಆಕಸ್ಮಿಕವಾಗಿ ಪಾಳುಬಾವಿಗೆ ಬಿದ್ದ ಜಿಂಕೆ ರಕ್ಷಣೆ


ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್‌ನಲ್ಲಿರುವ ಬಾಲಾಜಿ ರೈಸ್‌ ಮಿಲ್‌ ಸಮೀಪದ ಬಾವಿಗೆ ಜಿಂಕೆಯೊಂದು ಆಕಸ್ಮಿಕವಾಗಿ ಬಿದ್ದಿದ್ದು, ಕಿರುಚಾಡಲು ಆರಂಭಿಸಿದೆ. ಸ್ಥಳೀಯರು ಬಾವಿಯ ಬಳಿಗೆ ಆಗಮಿಸಿ ಕೂಡಲೇ ಅಗ್ನಿಶಾಮಕದಳ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಕೆಲಕಾಲ ಕಾರ್ಯಾಚರಣೆ ನಡೆಸಿ ಪಾಳುಬಾವಿಯಿಂದ ಜಿಂಕೆಯನ್ನು ಮೇಲಕ್ಕೆ ಬರುವಂತೆ ಮಾಡಿದ್ದಾರೆ. ಬಳಿಕ ಬಲೆಯಲ್ಲಿ ಹಿಡಿದು ಆಟೋ ಮೂಲಕ ಅಂತರಗಂಗೆ ಬೆಟ್ಟದ ಬಳಿ ಸುರಕ್ಷಿತವಾಗಿ ಬಿಟ್ಟುಬಂದಿದ್ದಾರೆ.

ಆಹಾರವನ್ನು ಹುಡುಕಿಕೊಂಡು ಜಿಂಕೆ ನಾಡಿಗೆ ಬಂದಿತ್ತು. ಬೆಟ್ಟವು ನಗರದ ಸಮೀಪದಲ್ಲೇ ಇರುವುದರಿದಾಗಿ ಜಿಂಕೆಗಳು ಇತ್ತ ಬರುವುದು ಸಾಮಾನ್ಯವಾಗಿವೆ. ನಾಯಿಗಳ ಹಾವಳಿಯೂ ಹೆಚ್ಚಾಗಿರುವುದರಿಂದ ಯಾವುದೇ ಸಮಯದಲ್ಲಾದರೂ ತೊಂದರೆಗಳಾಗುವ ಸಾಧ್ಯತೆಗಳಿರುವುದಾಗಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ