ಆ್ಯಪ್ನಗರ

ಜೂ.3ರಿಂದ ಅತಿಸಾರ ಬೇದಿ ನಿಯಂತ್ರಣ ಪಾಕ್ಷಿಕ: ಡಾ.ಸಿ.ಜಿ.ರಮೇಶ್‌

ತಾಯಿ-ಮಕ್ಕಳ ಆರೋಗ್ಯ ಕಾರ್ಯಕ್ರಮದಡಿ ಶಿಶುಮರಣ ಪ್ರಮಾಣ ತಡೆಗಟ್ಟುವ ಸಲುವಾಗಿ 0 ಯಿಂದ 5 ವರ್ಷದೊಳಗಿನ ಮಕ್ಕಳ ಕುಟುಂಬಗಳಲ್ಲಿ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕವನ್ನು ಅಂಗನವಾಡಿಗಳಲ್ಲಿ ಜೂ.3 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಜಿ.ರಮೇಶ್‌ ತಿಳಿಸಿದರು.

Vijaya Karnataka 3 Jun 2019, 5:00 am
ಕೋಲಾರ : ತಾಯಿ-ಮಕ್ಕಳ ಆರೋಗ್ಯ ಕಾರ್ಯಕ್ರಮದಡಿ ಶಿಶುಮರಣ ಪ್ರಮಾಣ ತಡೆಗಟ್ಟುವ ಸಲುವಾಗಿ 0 ಯಿಂದ 5 ವರ್ಷದೊಳಗಿನ ಮಕ್ಕಳ ಕುಟುಂಬಗಳಲ್ಲಿ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕವನ್ನು ಅಂಗನವಾಡಿಗಳಲ್ಲಿ ಜೂ.3 ರಿಂದ 17 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಜಿ.ರಮೇಶ್‌ ತಿಳಿಸಿದರು.
Vijaya Karnataka Web disease control regulation from june 3 dr c g ramesh
ಜೂ.3ರಿಂದ ಅತಿಸಾರ ಬೇದಿ ನಿಯಂತ್ರಣ ಪಾಕ್ಷಿಕ: ಡಾ.ಸಿ.ಜಿ.ರಮೇಶ್‌


ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದ ಆರ್‌.ಬಿ.ಎಸ್‌.ಕೆ, ಆರ್‌.ಕೆ.ಎಸ್‌.ಕೆ, ಶುಚಿ, ವಿಫ್ಸ್‌ ಕುರಿತು ಚರ್ಚೆ ಹಾಗೂ ತಾಲೂಕು ಮಟ್ಟದ ಚಾಲನಾ ಸಮಿತಿ ಸಭೆ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ಅತಿಸಾರ ಭೇದಿಯಿಂದಾಗಿ ಸಾವು ಸಂಭವಿಸಬಹುದು. ಇದರ ಬಗ್ಗೆ ಪೋಷಕರಲ್ಲಿ ಜಾಗೃತಿ ಮೂಡಿಸುವುದೇ ಅಲ್ಲದೆ ಇಂತಹ ಸಮಸ್ಯೆಗಳು ಕಂಡು ಬಂದಾಗ ಕೂಡಲೇ ವೈದ್ಯರ ಬಳಿ ತೋರಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಶಿಶು ಮರಣ ಪ್ರಮಾಣ ಕಡಿಮೆ ಮಾಡಬೇಕು ಎಂದು ಹೇಳಿದರು.

ಚಿಕ್ಕ ಮಕ್ಕಳ ಆರೋಗ್ಯದ ಮೇಲೆ ಈ ರೀತಿಯ ದುಷ್ಪರಿಣಾಮಗಳು ಬೀರಿದಾಗ ಶೇ.66 ಮಂದಿಯನ್ನು ಮಾತ್ರ ಆಸ್ಪತ್ರೆಗಳಲ್ಲಿ ದಾಖಲಿಸಲಾಗುತ್ತಿದೆ. ಇದನ್ನು ಶೇ.100 ತರಬೇಕಾದ ಅವಶ್ಯಕತೆ ಇದೆ. ಈ ಅತಿಸಾರ ಭೇದಿಯಿಂದ ಪ್ರತಿವರ್ಷ ಸುಮಾರು 1.2 ಲಕ್ಷ ಶಿಶುಗಳು ಮರಣ ಹೊಂದುತ್ತಿವೆ. ಈ ಮರಣ ಪ್ರಮಾಣ ಕಡಿಮೆ ಮಾಡಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾತ್ರ ಇಂತಹ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಿಲ್ಲ. ಇದರ ಜತೆಗೆ ಶಿಕ್ಷ ಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಸಹ ಕೈ ಜೋಡಿಸಬೇಕಲ್ಲದೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದ ಅವರು, ಶುಚಿತ್ವ ಕಾಪಾಡಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದು ತಿಳಿಸಿದರು.

ಬಿಇಒ ಕೆ.ಎಸ್‌.ನಾಗರಾಜಗೌಡ ಮಾತನಾಡಿ, ಸ್ವಚ್ಛತೆ ಕಾಪಾಡಿಕೊಳ್ಳದೇ ಇರುವುದು ಸರಿಯಾಗಿ ಕೈ ತೊಳೆಯದೆ ಇರುವುದರಿಂದಲೇ ಶೇ.60ಕ್ಕೂ ಹೆಚ್ಚು ಕಾಯಿಲೆಗಳು ಬರುತ್ತವೆ. ಹಾಗಾಗಿ ಕೈ ತೊಳೆಯುವ ಕೆಲಸ ಮೊದಲು ನಮ್ಮಿಂದಲೇ ಪ್ರಾರಂಭವಾಗಬೇಕು. ಅದು ನಮ್ಮ ಕುಟುಂಬದ ಮೇಲೆ ನಂತರ ಸಮಾಜದಲ್ಲಿ ಎಲ್ಲರೂ ಅದನ್ನು ಅಳವಡಿಸಿಕೊಳ್ಳುವಂತಾಗುತ್ತದೆ ಎಂದರು.

ಮುಖ್ಯವಾಗಿ ಶಾಲೆಗಳಲ್ಲಿ ಮಕ್ಕಳಿಗೆ ಕೈ ತೊಳೆಯುವ ಅಭ್ಯಾಸ ಮಾಡಿಸಬೇಕು. ಜತೆಗೆ ಶುಚಿತ್ವ ಕಾಪಾಡಿಕೊಳ್ಳುವ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಅಷ್ಟೇ ಅಲ್ಲದೆ ಅಡುಗೆ ಸಿಬ್ಬಂದಿ ಮುಖ್ಯವಾಗಿ ಕೈ ತೊಳೆದುಕೊಂಡು ಅಡುಗೆ ಕಾರ್ಯಗಳನ್ನು ಮಾಡಬೇಕು. ಈ ವಿಚಾರಗಳನ್ನು ತಪ್ಪದೆ ಅಳವಡಿಸಿಕೊಳ್ಳುವಂತೆ ಎಲ್ಲ ಶಿಕ್ಷ ಕರಿಗೂ ಮಾಹಿತಿ ನೀಡಲು ಸೂಚಿಸಿದರು.

ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಾಜಿ ಮಾತನಾಡಿ, ಮಕ್ಕಳು ಆರೋಗ್ಯವಂತರಾಗಿದ್ದಾಗ ಮಾತ್ರ ಹೆಚ್ಚು ಜ್ಞಾನ ಪಡೆದುಕೊಳ್ಳುವುದೇ ಅಲ್ಲದೆ ಶಿಕ್ಷ ಕರು ಭೋದಿಸಿದ ಪಾಠ ಅರಗಿಸಿಕೊಳ್ಳುತ್ತಾರೆ. ಈ ಔಚಿತ್ಯವನ್ನು ಅರಿತು ಶಿಕ್ಷ ಕರು ಕೆಲಸ ಮಾಡಬೇಕು. ಹಾಗಾಗಿ ಶಿಕ್ಷ ಕರು ಮಕ್ಕಳ ಶಿಕ್ಷ ಣದ ಜೆತೆಗೆ ಆರೋಗ್ಯದ ಮೇಲೂ ಸಹ ಹೆಚ್ಚು ಕಾಳಜಿ ವಹಿಸಬೇಕು ಎಂದರು.

ತಾಲೂಕು ಪಂಚಾಯಿತಿ ಪ್ರಭಾರ ವ್ಯವಸ್ಥಾಪಕ ಲಕ್ಷ್ಮೀಶಕಾಮತ್‌ ಮಾತನಾಡಿದರು. ತಾಲೂಕು ಆರೋಗ್ಯ ನಿರೀಕ್ಷ ಕ ಆರ್‌. ಸತ್ಯನಾರಾಯಣಗೌಡ, ಡಾ.ಕವಿತಾ ಸೇರಿದಂತೆ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ