ಆ್ಯಪ್ನಗರ

ನೆರ ಸಂತ್ರಸ್ತರಿಗೆ ಕೈಲಾದ ನೆರವು ನೀಡಿ

ಉತ್ತರ ಕರ್ನಾಟಕ ಹಾಗೂ ಕರಾವಳಿ ಪ್ರದೇಶದಲ್ಲಿ ಭೀಕರ ಮಳೆಯಿಂದ ಜನತೆ ನಾನಾ ರೀತಿಯ ಸಂಕಷ್ಟಗಳಿಗೆ ಒಳಗಾಗಿದ್ದು, ಅವರಿಗೆ ಆತ್ಮಸ್ಥೈರ್ಯ ಮೂಡಿಸುವ ಉದ್ದೇಶದಿಂದ ಜನತೆ ತಮ್ಮ ಕೈಲಾದ ಮಟ್ಟಿಗೆ ಆರ್ಥಿಕ ಸಹಾಯ ನೀಡಬೇಕು ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.

Vijaya Karnataka 11 Aug 2019, 5:00 am
ಮಾಲೂರು : ಉತ್ತರ ಕರ್ನಾಟಕ ಹಾಗೂ ಕರಾವಳಿ ಪ್ರದೇಶದಲ್ಲಿ ಭೀಕರ ಮಳೆಯಿಂದ ಜನತೆ ನಾನಾ ರೀತಿಯ ಸಂಕಷ್ಟಗಳಿಗೆ ಒಳಗಾಗಿದ್ದು, ಅವರಿಗೆ ಆತ್ಮಸ್ಥೈರ್ಯ ಮೂಡಿಸುವ ಉದ್ದೇಶದಿಂದ ಜನತೆ ತಮ್ಮ ಕೈಲಾದ ಮಟ್ಟಿಗೆ ಆರ್ಥಿಕ ಸಹಾಯ ನೀಡಬೇಕು ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.
Vijaya Karnataka Web do your best to help victims
ನೆರ ಸಂತ್ರಸ್ತರಿಗೆ ಕೈಲಾದ ನೆರವು ನೀಡಿ


ಪಟ್ಟಣದ ಮಹಾರಾಜ ವೃತ್ತದಲ್ಲಿ ತಾಲೂಕು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ನೆರೆ ಸಂತ್ರಸ್ಥರ ಪರಿಹಾರ ನಿಧಿ ಸಂಗ್ರಹಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ಹಲವು ರಾಜ್ಯಗಳಲ್ಲಿ ಭೀಕರ ನೆರೆ ಉಂಟಾಗಿದ್ದು, ಅದರಲ್ಲೂ ರಾಜ್ಯದ ಉತ್ತರ ಕರ್ನಾಟಕ ಹಾಗೂ ಕರಾವಳಿ ಪ್ರದೇಶದಲ್ಲಿ ಈವರೆಗೂ ಕಂಡು ಕೇಳಿರದಂತಹ ಭೀಕರ ಮಳೆಯಿಂದಾಗಿ ಲಕ್ಷಾಂತರ ಮಂದಿ ತಮ್ಮ ಮನೆಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಕಳೆದ ಒಂದು ವಾರದಿಂದ ಈ ಭಾಗದ ಜನತೆ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದರು.

ನಿರಾಶ್ರಿತರಿಗೆ ನೆರವು: ಪುನರ್‌ ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ಸಾವಿರಾರು ಮಂದಿ ನಿರಾಶ್ರಿತರಿಗೆ ರಾಜ್ಯದ ಜನತೆ ತಮ್ಮ ಕೈಲಾದ ಮಟ್ಟಿಗೆ ಹಣ, ವಸ್ತುಗಳು ಸೇರಿದಂತೆ ನಾನಾ ರೀತಿಯಲ್ಲಿ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು. ಸಂಕಷ್ಟದಲ್ಲಿರುವವರಿಗೆ ಆರ್ಥಿಕ ಸಹಾಯ ನೀಡುವುದರಿಂದ ನಿರಾಶ್ರಿತರಲ್ಲಿ ಧೈರ್ಯ ಮೂಡಿಸಬೇಕು. ಇಂತಹ ಕಾರ್ಯದಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು ಎಂದರು.

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಶೆಟ್ಟಿ ಮಾತನಾಡಿ, ಉತ್ತರ ಕರ್ನಾಟಕ ಹಾಗೂ ಕರಾವಳಿ ಪ್ರದೇಶದಲ್ಲಿ ಮಳೆ ಹಾನಿ ಹಾಗೂ ನೆರೆ ಹಾವಳಿಯಿಂದ ಸಂಕಷ್ಟ ಎದುರಿಸುತ್ತಿರುವ ಜನತೆಯ ಸಹಾಯಕ್ಕಾಗಿ ತಾಲೂಕು ಬಿಜೆಪಿ ವತಿಯಿಂದ ನೆರೆ ಸಂತ್ರಸ್ತ ಪರಿಹಾರ ನಿಧಿಯನ್ನು ಸಂಗ್ರಹಿಸಲು ಮುಂದಾಗಿರುವ ಮುಖಂಡರ ಕ್ರಮವನ್ನು ಸ್ವಾಗತಿಸಿದ ಅವರು, ಪಟ್ಟಣದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಹಣ ಸೇರಿದಂತೆ ಹಲವಾರು ವಸ್ತುಗಳನ್ನು ದಾನದ ರೂಪದಲ್ಲಿ ನೀಡುವುದರ ಮೂಲಕ ಸಹಾಯ ನೀಡಬೇಕು ಎಂದರು.

ಇದೇ ಸಂದರ್ಭದಲ್ಲಿ ಪಟ್ಟಣದ ಹಲವಾರು ವಾರ್ಡುಗಳಿಗೆ ತೆರಳಿ ಸಾರ್ವಜನಿಕರಿಂದ ನೆರೆ ಸಂತ್ರಸ್ಥರ ಪರಿಹಾರ ನಿಧಿ ಸಂಗ್ರಹಣೆ ಮಾಡಿದರು.

ಮಾಜಿ ಶಾಸಕ ಎ.ನಾಗರಾಜ್‌, ತಾಲೂಕು ಬಿಜೆಪಿ ಸದಸ್ಯತ್ವ ಅಭಿಯಾನ ಸಮಿತಿಯ ಸಂಚಾಲಕ ಪುರ ನಾರಾಯಣಸ್ವಾಮಿ, ಕೆಜಿಎಫ್‌ ಜಿಪಂ ಸದಸ್ಯೆ ಅಶ್ವಿನಿ ಸಂಪಂಗಿ, ತಾಲೂಕು ಅಧ್ಯಕ್ಷ ವೆಂಕಟೇಶ್‌, ಪುರಸಭೆ ಸದಸ್ಯರಾದ ಎಂ.ರಾಮಮೂರ್ತಿ, ಎಂ.ವಿ.ವೇಮನ, ಸುಮಿತ್ರ ರಾಘವೇಂದ್ರ, ಅನಿತಾ ನಾಗರಾಜ್‌, ಮಾಜಿ ಸದಸ್ಯರಾದ ಶ್ರೀವಳ್ಳಿ, ಅಮುದಾವೇಣು, ಮುಖಂಡರಾದ ತಬಲ ನಾರಾಯಣಪ್ಪ, ತಿಮ್ಮನಾಯಕನಹಳ್ಳಿ ನಾರಾಯಣಸ್ವಾಮಿ, ಅಶ್ವತ್ಥ್‌, ರಾಮಕೃಷ್ಣೇಗೌಡ, ದೊಡ್ಡಿ ರಾಜಣ್ಣ, ಶೇಷಗಿರಿ, ಎಎಲ್‌ಕೆ ಕುಟ್ಟಿ, ಮಾಸ್ತಿ ವೆಂಕಟರಾಮೇಗೌಡ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ