ಆ್ಯಪ್ನಗರ

ಉತ್ತಮ ಆರೋಗ್ಯಕ್ಕಾಗಿ ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಿ

ಉತ್ತಮ ಆರೋಗ್ಯದಿಂದ ಜೀವನ ಸಾಗಿಸಲು ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವನೆ ಮಾಡುವುದು ಅವಶ್ಯಕವಾಗಿದೆ ಎಂದು ಜಿಲ್ಲಾಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಂ.ಜಿ.ಪಾಲಿ ತಿಳಿಸಿದರು.

Vijaya Karnataka 11 Sep 2019, 10:15 pm
ಕೋಲಾರ: ಉತ್ತಮ ಆರೋಗ್ಯದಿಂದ ಜೀವನ ಸಾಗಿಸಲು ಪೌಷ್ಠಿಕಾಂಶಯುಕ್ತ ಆಹಾರವನ್ನು ಸೇವನೆ ಮಾಡುವುದು ಅವಶ್ಯಕವಾಗಿದೆ ಎಂದು ಜಿಲ್ಲಾಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಂ.ಜಿ.ಪಾಲಿ ತಿಳಿಸಿದರು.
Vijaya Karnataka Web eat nutritious foods for better health
ಉತ್ತಮ ಆರೋಗ್ಯಕ್ಕಾಗಿ ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಿ


ನಗರದ ಹೊರವಲಯದ ತೋಟಗಾರಿಕೆ ಮಹಾವಿದ್ಯಾಲಯ ಆವರಣದಲ್ಲಿಕೃಷಿ ವಿಜ್ಞಾನ ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ 'ರಾಷ್ಟ್ರೀಯ ಪೌಷ್ಟಿಕ ಸಪ್ತಾಹ' ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿ ಸೇವಿಸುವಂತಹ ಆಹಾರದಲ್ಲಿಹೆಚ್ಚಾಗಿ ಪ್ರೋಟಿನ್‌, ವಿಟಮಿನ್‌ ಹಾಗೂ ನಾರು ಪದಾರ್ಥಗಳಿರಬೇಕು. ಅಂತಹ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ಉತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದು ಹೇಳಿದರು.

ಪೌಷ್ಠಿಕಾಂಶಯುಕ್ತ ಆಹಾರ ಸೇವನೆಯಿಂದಾಗುವ ಪ್ರಯೋಜನಗಳ ಕುರಿತು ಅಂಗನವಾಡಿ ಶಿಕ್ಷಕಿಯರು ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾಗಬೇಕು. ಆ ಹಿನ್ನೆಲೆಯಲ್ಲಿಅಂಗನವಾಡಿಗಳಲ್ಲಿರಾಷ್ಟ್ರೀಯ ಪೌಷ್ಠಿಕ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಪೌಷ್ಟಿಕತೆಯ ಸಪ್ತಾಹವನ್ನು 'ಉತ್ತಮ ಆರೋಗ್ಯಕ್ಕಾಗಿ ಜೀವನ ಕ್ರಮದ ಶೈಲಿ' ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸುತ್ತಿದೆ ಎಂದ ಅವರು, ಇತ್ತೀಚಿನ ದಿನಗಳಲ್ಲಿಅನಿಮಿಯ, ಡಯಾರಿಯಾದಂತಹ ಕಾಯಿಲೆಗಳು ಹೆಚ್ಚುತ್ತಿವೆ. ಹೀಗಾಗಿ ಹೊಸದಾಗಿ ಬಂದಿರುವ ರೋಟಾ ವೈರಸ್‌ ಲಸಿಕೆಯನ್ನು ಪ್ರತಿಯೊಬ್ಬರೂ ಮಕ್ಕಳಿಗೆ ಹಾಕಿಸಬೇಕು ಎಂದು ಕೋರಿದರು.

ನಾಲ್ಕು ಮಿನಿಯಲ್‌ ಮಕ್ಕಳು ಸಾವು

ಅಪೌಷ್ಠಿಕತೆಯಿಂದಾಗಿ ಪ್ರತಿವರ್ಷ ಭಾರತದಲ್ಲಿನಾಲ್ಕು ಮಿಲಿಯನ್‌ ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಅಂದರೆ ಪ್ರತಿ ಸೆಂಕೆಂಡಿಗೆ ಒಂದು ಮಗು ಮೃತಪಡುತ್ತಿರುವುದು ಆತಂಕದ ವಿಚಾರವಾಗಿದ್ದು, ಈ ಕುರಿತು ಜಿಲ್ಲೆಯ ಜನರಿಗೆ ಜಾಗೃತಿ ಮೂಡಿಸಲು ಇಲಾಖೆ ಮುಂದಾಗಿದೆ. ಅದರಂತೆ ಮಕ್ಕಳು, ಯುವಕರು, ಬಾಣಂತಿತರು, ತಾಯಂದಿರಿಗೆ ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುವುದು ಎಂದು ಪಾಲಿ ಅವರು ಮಾಹಿತಿ ನೀಡಿದರು.

ತೋಟಗಾರಿಕೆ ಮಹಾವಿದ್ಯಾಲಯದ ಡೀನ್‌ ಡಾ.ಬಿ.ಜಿ.ಪ್ರಕಾಶ್‌ ಮಾತನಾಡಿ, ಊಟದಲ್ಲಿಪ್ರೋಟಿನ್‌, ಮಿನರಲ್ಸ್‌ ಇರುವಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಹಳಸಿದ ಪದಾರ್ಥ ತಿನ್ನಬಾರದು. ತರಕಾರಿಗಳಿಗೆ ಹೆಚ್ಚು ರಾಸಾಯನಿಕಗಳನ್ನು ಬಳಸುವುದರಿಂದ ಬಳಸುವ ಮೊದಲು ತರಕಾರಿಯನ್ನು ಉಪ್ಪು ನೀರಿನಲ್ಲಿತೊಳೆದು ಅಡಿಗೆಗೆ ಬಳಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಜಿ.ಎಸ್‌.ಚಿಕ್ಕಣ್ಣ, ತೋಟಗಾರಿಕಾ ವಿವಿಯ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಕೆ.ತುಳಸಿರಾಮ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ