ಆ್ಯಪ್ನಗರ

ಕೋಲಾರ: ಮಾಲೂರು ಬಳಿ ಕಾಡಾನೆ ದಾಳಿ, ಸೊಂಡಿಲಿನಿಂದ ಬಿಸಾಡಿದ ಆನೆ, ಇಬ್ಬರ ಸಾವು

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೂಟವೇ ಗ್ರಾಮದ ಬಳಿ ಕಾಡಾನೆಗಳು ದಾಳಿ ನಡೆಸಿದ್ದವು. ಗ್ರಾಮದ ಹೊರವಲಯದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳು ದಾಳಿ ನಡೆಸಿದವು. ಬೆಳೆಗಳನ್ನು ತಿನ್ನುತ್ತಾ ಇದ್ದ ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು.

Vijaya Karnataka Web 2 Mar 2020, 8:00 pm
ಕೋಲಾರ: ಕಾಡಾನೆ ದಾಳಿಯಿಂದ ಗಾಯಗೊಂಡ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ರೈತರೊಬ್ಬರು ಮೃತಪಟ್ಟಿದ್ದಾರೆ.
Vijaya Karnataka Web ಕಾಡಾನೆ ದಾಳಿ
ಕಾಡಾನೆ ದಾಳಿ


ಗುಟ್ಟುಮುನಿಯಪ್ಪ (48) ಮೃತಪಟ್ಟ ಅರಣ್ಯ ಇಲಾಖೆ ಸಿಬ್ಬಂದಿ. ಕಾಡಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಗುಟ್ಟು ಮುನಿಯಪ್ಪ, ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ರೈತನ ಮೇಲೂ ಆನೆಗಳು ದಾಳಿ ನಡೆಸಿದ್ದವು. ತೀವ್ರ ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿತ್ತು.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೂಟವೇ ಗ್ರಾಮದ ಬಳಿ ಕಾಡಾನೆಗಳು ದಾಳಿ ನಡೆಸಿದ್ದವು. ಗ್ರಾಮದ ಹೊರವಲಯದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳು ದಾಳಿ ನಡೆಸಿದವು. ಬೆಳೆಗಳನ್ನು ತಿನ್ನುತ್ತಾ ಇದ್ದ ಕಾಡಾನೆಗಳನ್ನು ಓಡಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು.

ಈ ಸಂದರ್ಭ ಮುನಿಯಪ್ಪ ಎಂಬುವರ ಮೇಲೆ ದಾಳಿ ನಡೆಸಿದ ಕಾಡಾನೆ ಸೊಂಡಿಲಿನಿಂದ ಎತ್ತಿ ಬಿಸಾಡಿತು.

ಹಲವು ದಿನಗಳಿಂದ ಮಾಲೂರು, ಬಂಗಾರಪೇಟೆ ಗಡಿಭಾಗದ ಗ್ರಾಮಗಳಲ್ಲಿ ಬೀಡುಬಿಟ್ಟಿದ್ದವು. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ