ಆ್ಯಪ್ನಗರ

ಯಡಿಯೂರಪ್ಪಗೆ 78ನೇ ಹುಟ್ಟುಹಬ್ಬದ ಸಂಭ್ರಮ: ಗಣ್ಯರಿಂದ ಶುಭ ಹಾರೈಕೆ

78ನೇ ವಸಂತಕ್ಕೆ ಕಾಲಿರಿಸಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಜಿಲ್ಲೆಯ ಗಣ್ಯರು ಶುಭಾಶಯ ಕೋರಿದ್ದು, ರೈತರ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಲಿ ಎಂದು ಹಾರೈಸಿದ್ದಾರೆ.

Vijaya Karnataka Web 26 Feb 2020, 11:23 pm
ಕೋಲಾರ: 78ನೇ ವಸಂತಕ್ಕೆ ಕಾಲಿರಿಸಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಜಿಲ್ಲೆಯ ಗಣ್ಯರು ಶುಭಾಶಯ ಕೋರಿದ್ದು, ರೈತರ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಲಿ ಎಂದು ಹಾರೈಸಿದ್ದಾರೆ.
Vijaya Karnataka Web yeddyurappa win


ಸಂಸದ ಎಸ್‌.ಮುನಿಸ್ವಾಮಿ ಅವರು, ನಾಡಿನ ಜನತೆ ಹಿತಕ್ಕಾಗಿ ನಿರಂತರವಾಗಿ ಕುಡಿಯುತ್ತಿರುವ ಹಾಗೂ ರೈತ ಪರ ಕಾಳಜಿಯನ್ನು ಹೊಂದಿರುವ ಯಡಿಯೂರಪ್ಪ ಅವರಿಗೆ ದೇವರು ಆರೋಗ್ಯ ಹಾಗೂ ಆಯಸ್ಸು ನೀಡಲಿ ಎಂದು ಜಿಲ್ಲೆಯ ಜನತೆ ಪರವಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಯಡಿಯೂರಪ್ಪ ಅವರು ರೈತರಿಗಾಗಿ ಮುಂದಿನ ಬಜೆಟ್‌ನಲ್ಲಿಉತ್ತಮ ಕಾರ್ಯಕ್ರಮಗಳನ್ನು ರೂಪಿಸಲಿ. ಜತೆಗೆ ಕೋಲಾರ ಜಿಲ್ಲೆಯ ಜನತೆ ಯಡಿಯೂರಪ್ಪ ಅವರ ಮೇಲಿನ ಅಭಿಮಾನದಿಂದ ಬಿಜೆಪಿಗೆ ಬೆಂಬಲಿಸಿದ್ದು, ಜಿಲ್ಲೆಯಲ್ಲಿಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಬೇಕು ಎಂದು ಕೋರಿದರು.

ಮಹಿಮಾ ಬೆಟ್ಟ ವಶಕ್ಕೆ ಪಡೆಯಲು ಸರಕಾರಕ್ಕೆ ಗಡುವು, ತಪ್ಪಿದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಯಡಿಯೂರಪ್ಪ ಅವರು ಮನಸ್ಸು ಮಾಡಬೇಕು. ಇದರೊಂದಿಗೆ ಜಿಲ್ಲೆಗೆ ಬರಬೇಕಿರುವ ರೈಲ್ವೆ ಯೋಜನೆಗಳು, ರೈಲ್ವೆ ವರ್ಕ್‌ಶಾಪ್‌ ನಿರ್ಮಾಣಕ್ಕೆ ಅಗತ್ಯ ಅನುದಾನ, ವಿಶೇಷ ಆರ್ಥಿಕ ವಲಯ ನಿರ್ಮಾಣ ಸೇರಿದಂತೆ ಜಿಲ್ಲೆಯಲ್ಲಿರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್‌ ಅವರು ಮಾತನಾಡಿ, ಬಡವರ ಬಂಧು, ಸದಾ ದೀನ ದಲಿತರ ಪರ ಕಾಳಜಿ ಹೊಂದಿರುವ ಯಡಿಯೂರಪ್ಪ ಅವರಿಗೆ ಮತ್ತಷ್ಟು ಕೆಲಸ ಮಾಡುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೋರಿದರು.

ಯಡಿಯೂರಪ್ಪ ಅವರು ಜಿಲ್ಲೆಯಲ್ಲಿಮಾವು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವ ಜತೆಗೆ, ಮಾವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸುವ ಭರವಸೆ ನೀಡಿದ್ದು, ಮುಂದಿನ ಬಜೆಟ್‌ನಲ್ಲಿ ಅವುಗಳನ್ನು ಈಡೇರಿಸುತ್ತಾರೆಂಬ ನಂಬಿಕೆಯಿಂದೆ ಎಂದು ಭರವಸೆ ವ್ಯಕ್ತಪಡಿಸಿದರು.

ಜಿಲ್ಲೆಗೆ ಯುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಯಡಿಯೂರಪ್ಪ ಅವರು ಹಿಂದೆ ಯರ್ರಗೋಳ್‌ ಯೋಜನೆಗೆ ಚಾಲನೆ ನೀಡಿ ಅನುದಾನ ಒದಗಿಸಿದ್ದರು. ಇದೀಗ ಅವರೇ ಮುಖ್ಯಮಂತ್ರಿಯಾಗಿರುವ ಸಂದರ್ಭದಲ್ಲಿ ಶೀಘ್ರ ಉದ್ಘಾಟನೆಯಾಗಬೇಕಿದ್ದು, ಅವರಿಗೆ ದೇವರು ಇನ್ನಷ್ಟು ಆಯಸ್ಸು, ಆರೋಗ್ಯ ನೀಡಲಿ ಎಂದು ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟಮುನಿಯಪ್ಪ ಹಾರೈಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ