ಆ್ಯಪ್ನಗರ

ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಣೆಗೆ ಒತ್ತಾಯ

ಭೂರಹಿತರಿಗೆ ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ನೀಡಿರುವ ಕಾಲಾವಕಾಶ ವಿಸ್ತರಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ)ಯು ಗ್ರೇಡ್‌-2 ತಹಸೀಲ್ದಾರ್‌ ನಾಗವೇಣಿ ಅವರಿಗೆ ಮನವಿ ಸಲ್ಲಿಸಿತು.

Vijaya Karnataka 5 Jul 2019, 3:06 pm
ಮಾಲೂರು: ಭೂರಹಿತರಿಗೆ ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ನೀಡಿರುವ ಕಾಲಾವಕಾಶ ವಿಸ್ತರಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ)ಯು ಗ್ರೇಡ್‌-2 ತಹಸೀಲ್ದಾರ್‌ ನಾಗವೇಣಿ ಅವರಿಗೆ ಮನವಿ ಸಲ್ಲಿಸಿತು.
Vijaya Karnataka Web extend the date for filing application
ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಣೆಗೆ ಒತ್ತಾಯ


ಸಮಿತಿ (ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಅಧ್ಯಕ್ಷ ಎಸ್‌.ಎಂ.ವೆಂಕಟೇಶ್‌ ಮಾತನಾಡಿ, ಭೂರಹಿತರಿಗೆ ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಸರಕಾರ ಅವಕಾಶ ನೀಡಿದೆ. ಅರ್ಜಿ ಸಲ್ಲಿಸುವ ಸಮಯದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಎದುರಾಗಿತ್ತು. ಇದರಿಂದ ಅರ್ಜಿ ಪಡೆಯುವುದನ್ನು ತಡೆ ಹಿಡಿಯಲಾಗಿತ್ತು. ನಮೂನೆ 57 ಅರ್ಜಿ ಸಲ್ಲಿಸಲು ಹಲವರಿಗೆ ಸಾಧ್ಯವಾಗಲಿಲ್ಲ. ಕೂಡಲೇ ಪುನಃ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಚವ್ವೇನಹಳ್ಳಿ ವಿಜಿ, ಎಸ್‌.ಜೆ.ಸುಬ್ರಮಣಿ, ಮುಖಂಡರಾದ ದೊಡ್ಡಕಲ್ಲಹಳ್ಳಿ ನಾರಾಯಣಸ್ವಾಮಿ, ತಿರುಮಲೇಶ್‌, ಯರ್ರಪ್ಪಶೆಟ್ಟಿಹಳ್ಳಿ ಕೃಷ್ಣಪ್ಪ, ಅಂಗಶೆಟ್ಟಿಹಳ್ಳಿ ನಾರಾಯಣಸ್ವಾಮಿ, ಎಚ್‌.ವೈ.ವೆಂಕಟೇಶ್‌, ಬಾಬು ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ