ಆ್ಯಪ್ನಗರ

ಐವರು ಆತ್ಮಹತ್ಯೆ ಪ್ರಕರಣ: ಮಗುವನ್ನು ರಕ್ಷಿಸಿದ ಪೊಲೀಸರು

ದೂರು ಆಧರಿಸಿ ಪೊಲೀಸರು ಪುಷ್ಪಾ ಮತ್ತು ಗೀತಾರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿ ಒಂದು ವಾರದೊಳಗೆ ಮಗುವನ್ನು ತಂದು ಒಪ್ಪಿಸುವಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಕುಟುಂಬ ಸದಸ್ಯರು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Vijaya Karnataka Web 24 Nov 2021, 12:01 am
ಕೋಲಾರ: ನವಜಾತ ಮಗುವಿನ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದ್ದು, ಮಗುವನ್ನು ರಕ್ಷಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
Vijaya Karnataka Web ಪೊಲೀಸ್‌
ಪೊಲೀಸ್‌


ಪ್ರಕರಣಕ್ಕೆ ಸಂಬಂಸಿದಂತೆ ನಾಗರತ್ನ ಉರುಫ್ ನಾಗಮಣಿ ಎಂಬುವರನ್ನು ಕೋಲಾರ ಪೊಲೀಸರು ವಶಕ್ಕೆ ಪಡೆದಿದ್ದು, ಮಗುವನ್ನು ಸುರಕ್ಷತಾ ದೃಷ್ಟಿಯಿಂದ ನಗರದ ಎಸ್‌ಎನ್‌ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಗೀತಾ ತಲೆಮರೆಸಿಕೊಂಡಿದ್ದು, ಪ್ರಕರಣದ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಪುಷ್ಪಾರ ಸಂಬಂಧಿಯಾದ ಕಲ್ಲಂಡೂರಿನ ನಾಗಮಣಿ ಎಂಬುವರ ಬಳಿ ಮಗು ಇದೆ ಎಂಬ ಮಾಹಿತಿ ಸಿಕ್ಕಿತ್ತು. ಅದರಂತೆ ಮನೆಗೆ ಭೇಟಿ ನೀಡಿದಾಗ ಪರಿಶೀಲಿಸಿದಾಗ ಮಗು ಪತ್ತೆಯಾಗಿದೆ.

ಕೋಲಾರದಲ್ಲಿ ಶೇ.90ರಷ್ಟು ರಾಗಿ ಬೆಳೆ ನಾಶ, ಶೀಘ್ರ ಪರಿಹಾರ: ಬಸವರಾಜ ಬೊಮ್ಮಾಯಿ

ಗೀತಾ ಹಾಗೂ ಅವರ ಸ್ನೇಹಿತೆ ಪುಷ್ಪಾ ಅವರು ಹಣಕ್ಕಾಗಿ ಮಗುವನ್ನು ನಾಗಮಣಿ ಎಂಬುವರಿಗೆ ಮಾರಾಟ ಮಾಡಿದ್ದರು. ಪುಷ್ಪಾ ಅವರು ಮಗುವನ್ನು ತನ್ನ ಸಂಬಂಧಿಕರಿಗೆ ನೀಡುವ ವಿಚಾರ ಮುನಿಯಪ್ಪ ಅವರಿಗೂ ತಿಳಿದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿಜಯ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆತ್ಮಹತ್ಯೆ ಮಾಡಿಕೊಂಡ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ ಭಯಗೊಂಡ ನಾಗಮಣಿ ಮಗುವಿನ ಮಾರಾಟದ ಸಂಗತಿಯನ್ನು ರಹಸ್ಯವಾಗಿ ಇಟ್ಟಿದ್ದರು ಎನ್ನಲಾಗಿದೆ.

ಪ್ರಕರಣದ ಹಿನ್ನೆಲೆ


ತಮಿಳುನಾಡು ಮೂಲದ ಸುಮಿತ್ರಾ ಮತ್ತು ಸತ್ಯ ದಂಪತಿಯು ತಮ್ಮ ನವಜಾತ ಶಿಶುವನ್ನು ಗೀತಾ ಹಾಗೂ ಪುಷ್ಪಾ ಎಂಬುವರು ಅಪಹರಿಸಿದ್ದಾರೆ ಎಂದು ಆರೋಪಿಸಿ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ನ.2ರಂದು ದೂರು ದಾಖಲಿಸಿದ್ದರು.

ದೂರು ಆಧರಿಸಿ ಪೊಲೀಸರು ಪುಷ್ಪಾ ಮತ್ತು ಗೀತಾರನ್ನು ಠಾಣೆಗೆ ಕರೆಸಿ ವಿಚಾರಣೆ ಮಾಡಿ ಒಂದು ವಾರದೊಳಗೆ ಮಗುವನ್ನು ತಂದು ಒಪ್ಪಿಸುವಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಪೊಲೀಸರು ಠಾಣೆಗೆ ಕರೆದೊಯ್ದಿದ್ದರಿಂದ ಬೇಸರಗೊಂಡಿದ್ದ ಪುಷ್ಪಾ ಮತ್ತು ಕುಟುಂಬ ಸದಸ್ಯರು ಮರ್ಯಾದೆಗೆ ಅಂಜಿ ಭಾನುವಾರ (ನ.7) ತಂಪು ಪಾನೀಯದಲ್ಲಿ ವಿಷ ಬೆರೆಸಿಕೊಂಡು ಕುಡಿದು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮುಳಬಾಗಿಲು ಮಾರುಕಟ್ಟೆಯಲ್ಲಿ ಇತಿಹಾಸದಲ್ಲೇ ಗರಿಷ್ಠ ಬೆಲೆಗೆ ಹರಾಜಾದ ಟೊಮೇಟೊ!

ಹೀಗಾಗಿ ಮಗುವಿನ ಬಗ್ಗೆ ಯಾವುದೇ ಸುಳಿವು ಸಿಗದೆ ಪ್ರಕರಣವು ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಗಣಿಸಿತ್ತು. ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ಮೃತರ ಹಾಗೂ ನಾಗಮಣಿ ಅವರ ಮೊಬೈಲ್ ಕರೆಗಳ ಮಾಹಿತಿ ಆಧರಿಸಿ ಪ್ರಕರಣ ಭೇದಿಸಿದ್ದಾರೆ.

ಅಪಹರಣವಾಗಿದ್ದ ಮಗುವನ್ನು ಪೊಲೀಸರು ರಕ್ಷಿಸಿದ್ದು, ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಯಲ್ಲಿ ಮಗುವನ್ನು ಇರಿಸಲಾಗಿದೆ. ಮಗುವು ಆರೋಗ್ಯವಾಗಿದೆ ಎಂಬುದು ವೈದ್ಯರು ತಿಳಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಂಜಿ ಪಾಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ