ಆ್ಯಪ್ನಗರ

ಬಡ ರೋಗಿಗಳ ನೆರವಿಗೆ ಉಚಿತ ಆರೋಗ್ಯ ಶಿಬಿರ

ಬಡವರ್ಗದ ರೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದ್ದು ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೃದಯ ರೋಗತಜ್ಞ ಡಾ.ಯಶವಂತ್‌ ತಿಳಿಸಿದರು.

Vijaya Karnataka 21 Jan 2019, 5:00 am
ಮುಳಬಾಗಲು: ಬಡವರ್ಗದ ರೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದ್ದು ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೃದಯ ರೋಗತಜ್ಞ ಡಾ.ಯಶವಂತ್‌ ತಿಳಿಸಿದರು.
Vijaya Karnataka Web free health camp for poor patients
ಬಡ ರೋಗಿಗಳ ನೆರವಿಗೆ ಉಚಿತ ಆರೋಗ್ಯ ಶಿಬಿರ


ತಾಲೂಕಿನ ನಂಗಲಿ ಗ್ರಾಮದಲ್ಲಿರುವ ಡಾ.ದೊಡ್ಡಭದ್ರೇಗೌಡರ ಆಸ್ಪತ್ರೆಯಲ್ಲಿ ಆರ್‌.ಎಲ್‌.ಜಾಲಪ್ಪ, ನಾರಾಯಣ ಹೃದಯಾಲಯ ಆಸ್ಪತ್ರೆ ಸಹಯೋಗದೊಂದಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಇತ್ತಿಚಿಗೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಹೆಚ್ಚು ಮಂದಿ ನರಳುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿ ರೋಗಿಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಡಾ.ದೊಡ್ಡಭದ್ರೇಗೌಡ ಮಾತನಾಡಿ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಹೃದಯ ರೋಗಗಳು ಬಂದಾಗ ತಜ್ಞವೈದ್ಯರಲ್ಲಿ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ ್ಯ ತೋರಿಸಬಾರದು ಎಂದು ತಿಳಿಸಿದರು.

ಪ್ರತಿಯೊಬ್ಬರು ಪ್ರತಿದಿನ ವಾಕಿಂಗ್‌ ಮಾಡುವುದು, ವ್ಯಾಯಾಮ ಹಾಗೂ ನಾನಾ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಹಾಗೂ ಪೌಷ್ಟಿಕ ಆಹಾರ ಸೇವನೆ ಮಾಡುವುದರ ಮೂಲಕ ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ತಿಳಿಸಿದರು.

ಮದ್ಯಪಾನ, ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ದೂರವಿದ್ದರೆ ಹೆಚ್ಚಿನ ಕಾಯಿಲೆಗಳಿಂದ ದೂರವಿರಬಹುದು. ಪ್ರತಿಯೊಬ್ಬರೂ 2 ತಿಂಗಳಗೊಮ್ಮೆ ಆರೋಗ್ಯದ ಬಗ್ಗೆ ವೈದ್ಯರಲ್ಲಿ ತಪಾಸಣೆ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಶಿಬಿರದಲ್ಲಿ 330 ಮಂದಿ ಆರೋಗ್ಯ ತಪಾಸಣೆ ಮಾಡಿಕೊಂಡರು ಇದರಲ್ಲಿ 63 ಮಂದಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಯಿಂದ ನರಳುತ್ತಿರುವ ಬಗ್ಗೆ ಪತ್ತೆಯಾಯಿತು. ಇವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಆರ್‌.ಎಲ್‌.ಜಾಲಪ್ಪ, ನಾರಾಯಣ ಹೃದಯಾಲಯ ವೈದ್ಯರು ಒಪ್ಪಿಕೊಂಡರು.

ಮಕ್ಕಳ ತಜ್ಞೆ ಡಾ.ಎಸ್‌.ಸುನಿತಾ, ಆರೋಗ್ಯ ಇಲಾಖೆಯ ನಿವೃತ್ತ ಫಾರ್ಮಸಿಸ್ಟ್‌ ಅಸ್ಗರ್‌ ಸೇರಿದಂತೆ ಇತರೆ ವೈದ್ಯರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ